ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bus Fare Hike: ರಾಜ್ಯದ ಜನತೆಗೆ ಶೀಘ್ರದಲ್ಲೇ ಬಸ್ ಟಿಕೆಟ್‌ ದರ ಏರಿಕೆ ಶಾಕ್‌; ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು!

Bus ticket price Hike: ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಅಲ್ಪ ಪ್ರಮಾಣದಲ್ಲಿ ದರ ಏರಿಕೆ ಮಾಡುವ ಕುರಿತು ಸಚಿವರು ಸುಳಿವು ನೀಡಿದ್ದಾರೆ.

ರಾಜ್ಯದ ಜನತೆಗೆ ಬಸ್ ಟಿಕೆಟ್‌ ದರ ಏರಿಕೆ ಶಾಕ್‌; ಸಾರಿಗೆ ಸಚಿವ ಸುಳಿವು!

-

Prabhakara R
Prabhakara R Sep 4, 2026 8:59 PM

ಬೆಂಗಳೂರು: ರಾಜ್ಯದ ಜನರಿಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ರಾಜ್ಯ ಸಾರಿಗೆ ಬಸ್‌ಗಳ ಟಿಕೆಟ್ ದರ (Bus Fare Hike) ಪರಿಷ್ಕರಣೆ ಮಾಡುವ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ (Byrathi Suresh) ಸುಳಿವು ನೀಡಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಇತರೆ ತೈಲೋತ್ಪನ್ನಗಳ ದರವನ್ನು ನಿರಂತರವಾಗಿ ಹೆಚ್ಚಿಸಿದೆ. ತೈಲ ಬೆಲೆ ಏರಿಕೆಯಾಗಿದ್ದರೂ ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿಲ್ಲ. ಇದರಿಂದಾಗಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಸಾವಿರಾರು ಕೋಟಿ ರೂಪಾಯಿಗಳ ಭಾರಿ ನಷ್ಟ ಅನುಭವಿಸುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.

ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ಅವರ ನೇತೃತ್ವದ ಸಮಿತಿಯು ಸಮಗ್ರ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಿದೆ. ವರದಿ ಬಂದ ಬಳಿಕ, ರಾಜ್ಯದಲ್ಲಿನ ಪ್ರಸ್ತುತ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರ ಜೇಬಿಗೆ ಹೆಚ್ಚು ಹೊರೆಯಾಗದಂತೆ ಸ್ವಲ್ಪ ಪ್ರಮಾಣದಲ್ಲಿ ದರ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Mysuru Dasara 2026: ಮೈಸೂರು ದಸರಾ ನಿಶಾನೆ ಆನೆಯಾಗಿ ʼಅಭಿಮನ್ಯುʼ ಆಯ್ಕೆ; ಸುದೀರ್ಘ ಸೇವೆಗೆ ರಾಜ್ಯ ಸರ್ಕಾರದಿಂದ ಗೌರವ

ಇನ್ನು ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ಮೊದಲ ಹಂತದಲ್ಲಿ ಉಚಿತ ಸ್ಮಾರ್ಟ್‌ಕಾರ್ಡ್‌ಗಳನ್ನು ವಿತರಿಸಲಾಗುವುದು. ಇದಕ್ಕೆ 250 ಕೋಟಿ ರೂ. ವೆಚ್ಚವಾಗಲಿದ್ದು, ಸದ್ಯದಲ್ಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು' ಎಂದು ಮಾಹಿತಿ ನೀಡಿದ್ದಾರೆ.