ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Internal Reservation: ಎಸ್‌ಟಿಗಳಿಗೂ ಒಳಮೀಸಲಾತಿ ವಿಸ್ತರಿಸಿ: ಸರ್ಕಾರಕ್ಕೆ ಆದಿವಾಸಿ ನಾಯಕರ ಆಗ್ರಹ

ST reservation: ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಮಾತ್ರ ಒಳಮೀಸಲಾತಿ ಜಾರಿ ಪ್ರಕ್ರಿಯೆ ನಡೆಸಿದೆ. ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಲು ಆಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ಶಾಸಕರ ಭವನದಲ್ಲಿ ಸಭೆಯಲ್ಲಿ ಆದಿವಾಸಿ ನಾಯಕರು ಆಗ್ರಹಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಿ: ಆದಿವಾಸಿ ನಾಯಕರ ಆಗ್ರಹ

-

Profile Siddalinga Swamy Oct 9, 2025 8:23 PM

ಬೆಂಗಳೂರು: 2024 ಆಗಸ್ಟ್ 1ರಂದು ಬಂದ ಒಳಮೀಸಲಾತಿ ಕುರಿತಾದ ಐತಿಹಾಸಿಕ ತೀರ್ಪು ಪರಿಶಿಷ್ಟ ಜಾತಿಯೊಂದಿಗೆ ಪರಿಶಿಷ್ಟ ಪಂಗಡದಲ್ಲಿಯೂ ವರ್ಗೀಕರಣ ಆಗಬೇಕೆಂದು ಹೇಳಿತ್ತು. ಆದರೆ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಮಾತ್ರ ಒಳಮೀಸಲಾತಿ ಜಾರಿ ಪ್ರಕ್ರಿಯೆ ನಡೆಸಿದೆ. ಹೀಗಾಗಿ ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆದಿವಾಸಿ ನಾಯಕರು ಆಗ್ರಹಿಸಿದ್ದಾರೆ.

ಎಸ್‌ಟಿ ಒಳಮೀಸಲಾತಿ ಬಗ್ಗೆ ಬೆಂಗಳೂರಿನ ಶಾಸಕರ ಭವನದಲ್ಲಿ ಆದಿವಾಸಿ ನಾಯಕರ ಸಭೆ ಗುರುವಾರ ನಡೆದಿದೆ. ಬಳಿಕ ಈ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಹಾಗು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಆದಿವಾಸಿ ನಾಯಕರು ಭೇಟಿಯಾಗಿ ಅಹವಾಲು ಸಲ್ಲಿಸಿದರು.

ಪರಿಶಿಷ್ಟ ಜಾತಿಗಳಿಗಿಂತ ಪರಿಶಿಷ್ಟ ಪಂಗಡದಲ್ಲಿ ಮೀಸಲಾತಿ ಜಾರಿಯಲ್ಲಿ ಸಮಸ್ಯೆ ಇದೆ. ಸಣ್ಣ ಬುಡಕಟ್ಟುಗಳು, ಸೂಕ್ಷ್ಮ ಬುಡಕಟ್ಟುಗಳು, ದುರ್ಬಲ ಬುಡಕಟ್ಟುಗಳು ಮತ್ತು ಪ್ರಬಲ ಸಮುದಾಯಗಳು ಒಂದೇ ತಟ್ಟೆಯಲ್ಲಿ ಉಣ್ಣುವಂತಾಗಿದೆ. ಹೀಗಾಗಿ ಸರ್ಕಾರದ ಮೀಸಲಾತಿ ವ್ಯವಸ್ಥೆಯಿಂದ ಎಷ್ಟೋ ಬುಡಕಟ್ಟುಗಳು ದೂರವೇ ಉಳಿದಿವೆ. ಸರ್ಕಾರ ತುರ್ತು ಈ ಬಗ್ಗೆ ನಿಗಾ ವಹಿಸಿ STಮೀಸಲಾತಿಯ ವೈಜ್ಞಾನಿಕ ಹಂಚಿಕೆಗಾಗಿ ನಿವೃತ್ತ ನ್ಯಾಯಾಧೀಶರ ಆಯೋಗ ರಚಿಸಬೇಕು. ಸಮಾನರು - ಅಸಮಾನರು ಒಂದೇ ಗುಂಪಿನಲ್ಲಿದ್ದರೆ ಮೀಸಲಾತಿ ಕೊನೆಯ ವ್ಯಕ್ತಿಗೆ ಮರೀಚಿಕೆಯಾಗುತ್ತದೆ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲೇಖವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

Bengaluru News 1

ಈ ಸುದ್ದಿಯನ್ನೂ ಓದಿ | Cabinet meeting: 2000 ಕೋಟಿ ವೆಚ್ಚದಲ್ಲಿ ಸೇತುವೆಗಳ ಮರು ನಿರ್ಮಾಣ, ಪುನಶ್ಚೇತನ ಕಾಮಗಾರಿಗಳಿಗೆ ಸಂಪುಟ ಅಸ್ತು

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ, ಪ್ರಾಧ್ಯಾಪಕರಾದ ಸೋಲಿಗರ ಡಾ.ಜಡೆಯೇ ಗೌಡ, ಡಾ.ಗಣೇಶ್ ಬೆಟ್ಟಕುರುಬ, ಹಸಳರ ಮುತ್ತಪ್ಪ, ಕುಡಿಯರ ಮಿಟ್ಟು ರಂಜನ್, ಶಿವರಾಜ್ ಯೆರವ, ರಾಜು ಇರುಳಿಗ, ಹಕ್ಕಿಪಿಕ್ಕಿ ಕಾಮರಾಜ್, ತ್ಯಾಗರಾಜು, ಮರಾಟಿ ನಾಯ್ಕ ಸಮುದಾಯದ ಎಚ್.ವಿ. ಚಂದ್ರಶೇಖರ್, ಎಸ್.ಎನ್. ಅಶೋಕ್, ಕೆ.ಎಸ್. ಮಹೇಶ್, ಗೌಡ್ಲು ಚೇತನ್, ಎಂ.ಸಿ. ಯೋಗಿಶ್ ಮತ್ತು ಸಾಮರಸ್ಯ ವೇದಿಕೆಯ ವಾದಿರಾಜ್ ಉಪಸ್ಥಿತರಿದ್ದರು. ಸಭೆಯಲ್ಲಿ 12 ಜಿಲ್ಲೆಗಳ 30ಕ್ಕೂ ಹೆಚ್ಚು ಆದಿವಾಸಿ ನಾಯಕರು ಭಾಗವಹಿಸಿದ್ದರು.