Mobile theft Case: ಬೆತ್ತಲೆಯಾಗಿ ಬಂದು ಬರೋಬ್ಬರಿ 85 ಮೊಬೈಲ್ ಕದ್ದೊಯ್ದ ಖತರ್ನಾಕ್ ಕಳ್ಳ!
Mobile theft Case: ಬೆಂಗಳೂರು ನಗರದ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಪೊಲೀಸರಿಗೆ ಯಾಮಾರಿಸಲು ಈ ಕಳ್ಳ ಮುಖಕ್ಕೆ ಮಾಸ್ಕ್ ಧರಿಸಿ ಬೆತ್ತಲೆಯಾಗಿ ಕಳ್ಳತನಕ್ಕಿಳಿದಿದ್ದಾನೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಬೆಂಗಳೂರು: ನಗರದ ಬೊಮ್ಮನಹಳ್ಳಿಯಲ್ಲಿ ಕಳ್ಳನೊಬ್ಬ ಬೆತ್ತಲೆಯಾಗಿ ಬಂದು, ಅಂಗಡಿ ಗೋಡೆ ಕೊರೆದು ಬರೋಬ್ಬರಿ 85 ಮೊಬೈಲ್ ಎಗರಿಸಿರುವ ಘಟನೆ (Mobile theft Case) ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿ ಬೆತ್ತಲೆಯಾಗಿ ಕಳ್ಳತನಕ್ಕೆ ಬಂದಿದ್ದ ಖದೀಮ, ಕೃತ್ಯವೆಸಗಿ ಪರಾರಿಯಾಗಿದ್ದಾನೆ. ದಿನೇಶ್ ಎಂಬುವವರ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಕಳ್ಳತನ ನಡೆದಿದೆ.
ಅನೇಕ ಪ್ರಕರಣಗಳಲ್ಲಿ ಆರೋಪಿಗಳು ಧರಿಸಿದ ಬಟ್ಟೆಗಳ ಮೂಲಕ ಅವರನ್ನು ಪೊಲೀಸರು ಕಂಡು ಹಿಡಿಯುತ್ತಾರೆ. ಹಾಗಾಗಿ ಪೊಲೀಸರಿಗೆ ಯಾಮಾರಿಸಲು ಈ ಕಳ್ಳ ಬೆತ್ತಲೆಯಾಗಿ ಕಳ್ಳತನಕ್ಕಿಳಿದಿದ್ದಾನೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೃತ್ಯ ನಡೆದ ಮಾರನೇ ದಿನ ಬೆಳಗ್ಗೆ ಅಂಗಡಿ ಓಪನ್ ಮಾಡಲು ಮಾಲೀಕ ದಿನೇಶ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Viral Video: ಈ ಮಹಿಳೆಯ ಡ್ರೈವಿಂಗ್ ಸ್ಕಿಲ್ ನೋಡಿ ನೆಟ್ಟಿಗರು ಫುಲ್ ಫಿದಾ; ವಿಡಿಯೊ ವೈರಲ್
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಸೋನು ನಿಗಮ್ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ (Sonu Nigam Case) ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಗಾಯಕನ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ನ್ಯಾಯಾಲಯ ಸೂಚಿಸಿದೆ. ತಮ್ಮ ಮೇಲಿನ ಎಫ್ಐಆರ್ ರದ್ದು ಮಾಡುವಂತೆ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್, ಮುಂದಿನ ವಿಚಾರಣೆಯ ದಿನಾಂಕದವರೆಗೆ ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನಿರ್ದೇಶಿಸಿದೆ.
ಇನ್ನು ಸೋನು ನಿಗಮ್ ಹೇಳಿಕೆಯನ್ನು ದಾಖಲಿಸಿಕೊಳ್ಳುವ ಅಗತ್ಯವಿದ್ದರೆ ತನಿಖಾ ಅಧಿಕಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ದಾಖಲಿಸಿಕೊಳ್ಳಲು ನ್ಯಾಯಾಲಯವು ಸೂಚಿಸಿದೆ. ಒಂದು ವೇಳೆ ದೈಹಿಕವಾಗಿ ಹಾಜರಾಗು ಎಂದಾದರೆ, ತನಿಖಾಧಿಕಾರಿಯೇ ಸೋನು ನಿಗಮ್ ಅವರನ್ನು ಭೇಟಿ ಮಾಡಬಹುದು ಮತ್ತು ಅದಕ್ಕೆ ಸಂಬಂಧಿಸಿದ ವೆಚ್ಚಗಳನ್ನು ಸೋನು ನಿಗಮ್ ಭರಿಸುವಂತೆ ನ್ಯಾಯಾಲಯ ತಿಳಿಸಿದೆ.
ವಿಚಾರಣೆಯ ಸಮಯದಲ್ಲಿ, ನಿಗಮ್ ಪರ ವಕೀಲ ಧನಂಜಯ್ ವಿದ್ಯಾಪತಿ, ದೂರು ಕೇವಲ ಪ್ರಚಾರಕ್ಕಾಗಿ ಮಾತ್ರ ದಾಖಲಾಗಿದ್ದು, ಐಪಿಸಿ ಸೆಕ್ಷನ್ 505ರ ಅಡಿಯಲ್ಲಿ ಸಾರ್ವಜನಿಕ ಕಿರುಕುಳದ ಆರೋಪ ಸಾಬೀತಾಗಿಲ್ಲ ಎಂದು ವಾದಿಸಿದರು. ಇದು ಒಂದು ಪ್ರತ್ಯೇಕ ಘಟನೆ, ಸಂಗೀತ ಕಾರ್ಯಕ್ರಮ ಸರಾಗವಾಗಿ ನಡೆಯಿತು. ಆದರೆ ಮೂರನೇ ವ್ಯಕ್ತಿ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ | Kuladalli keelyavudo Movie: ಸೋನು ನಿಗಮ್ ಹಾಡಿರುವ ಹಾಡನ್ನು ನಮ್ಮ ಚಿತ್ರದಿಂದ ತೆಗೆದಿದ್ದೇವೆ: ʼಕುಲದಲ್ಲಿ ಕೀಳ್ಯಾವುದೋʼ ಚಿತ್ರತಂಡ
ಈ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ನಿಗಮ್ ಅವರ ಹೇಳಿಕೆಗಳನ್ನು ತನಿಖೆಯ ಸಂದರ್ಭದಲ್ಲಿ ಪರಿಶೀಲಿಸುವ ಅಗತ್ಯವಿದೆ. ಕಾನೂನು ಉದ್ದೇಶಪೂರ್ವಕವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಸೆಕ್ಷನ್ 482 (CrPC) ಅಡಿಯಲ್ಲಿ ನಿರ್ಣಯಿಸಲಾಗುವುದಿಲ್ಲ. ಅವರು ತನಿಖೆಗೆ ಸಹಕರಿಸಿಲ್ಲ. ಕಾನೂನು ಪ್ರಕ್ರಿಯೆಯನ್ನು ಗೌರವಿಸದ ವ್ಯಕ್ತಿಗೆ 482ರ ಅಡಿಯಲ್ಲಿ ಪ್ರಯೋಜನವನ್ನು ನೀಡಲಾಗುವುದಿಲ್ಲ. ಅವರು ಸಾಮಾನ್ಯ ವ್ಯಕ್ತಿಯಲ್ಲ, ಆದರೆ ಅದಕ್ಕಾಗಿಯೇ ಅವರು ಅಂತಹ ಹೇಳಿಕೆಯನ್ನು ನೀಡಬಾರದು ಎಂದು ತಿಳಿಸಿದರು.