CM Siddaramaiah: ಸಿಎಂ ಮನೆ ಮುಂದೆ ಧರೆಗುರುಳಿದ ಬೃಹತ್ ಮರ; ವಾಹನಗಳು ಜಖಂ
ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಿ ನಿವಾಸದ ಬಳಿಯೇ ಬೃಹತ್ ಮರವೊಂದು (Tree) ಧರೆಗುರುಳಿ ಅನಾಹುತ ಸಂಭವಿಸಿದೆ.ಬೃಹತ್ ಮರ ಧರೆಗುರುಳಿದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಹಿನ್ನೆಲೆ ಶಿವಾನಂದ ಬಳಿಯೇ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ.


ಬೆಂಗಳೂರು: ಭಾರೀ ಗಾಳಿ ಮಳೆಗೆ ಮರಗಳು, ಗೋಡೆ ಕುಸಿತ ಆಗೋದು ಸಹಜ. ಆದರೆ ಯಾವುದೇ ಗಾಳಿ ಮಳೆಯಿಲ್ಲದಿದ್ದರೂ ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ಸರ್ಕಾರಿ ನಿವಾಸದ ಎದುರು ಬೃಹತ್ ಮರವೊಂದು (Tree) ಧರೆಗುರುಳಿದೆ. ಸಿಎಂ ನಿವಾಸದ ಎದುರು ನಿಂತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಕಾರಣ ವಾಹನಗಳು ಸಂಪೂರ್ಣ ಜಖಂಗೊಂಡಿದೆ. ಇನ್ನು ಮರ ಬಿದ್ದ ಹಿನ್ನೆಲೆ ಸಿಎಂ ನಿವಾಸ ಸಮೀಪ ಹಾಗೂ ಶಿವಾನಂದ ಸರ್ಕಲ್ ಬಳಿ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ: Karnataka Rain: ಭಾರೀ ಮಳೆ, ಗುಡ್ಡ ಕುಸಿದು ಇಬ್ಬರು ಸಾವು, ಮನೆಯಡಿ ಸಿಲುಕಿಕೊಂಡ ತಾಯಿ- ಮಕ್ಕಳು
ಎರಡು ದಿನಗಳ ಹಿಂದೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ವರ್ಷಧಾರೆ ಸುರಿಯುತ್ತಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಭಾರಿ ಗಾಳಿ, ಮಳೆಯಿಂದ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ ತಾಲೂಕಿನ ಎಲೆಕಲ್ ಘಾಟಿಯಲ್ಲಿ ಸೋಮವಾರ ನಡೆದಿದೆ. ಅನಿಲ್ (55) ಮೃತಪಟ್ಟ ಬೈಕ್ ಸವಾರ. ಮರ ಬಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಕೂಡಲೇ ಪೊಲೀಸರು ಹಾಗೂ ಸಾರ್ವಜನಿಕರು ಬಾಳೆಹೊನ್ನೂರು ಆಸ್ಪತ್ರೆಗೆ ಕೊಂಡೊಯ್ದರು. ಆದರೆ, ಮಾರ್ಗಮಧ್ಯೆಯೇ ಅನಿಲ್ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ಕನೇ ಜೀವ ಬಲಿಯಾದಂತಾಗಿದೆ.
ಜೂ.15ರಂದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. 29 ವರ್ಷದ ಅಕ್ಷಯ್ ಗಂಭೀರವಾಗಿ ಗಾಯಗೊಂಡ ಸವಾರ. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದಲ್ಲಿ ಕಂಪನಿಯೊಂದದರಲ್ಲಿ ಹೆಚ್ಆರ್ ಆಗಿ ಕೆಲಸ ಮಾಡುತ್ತಿದ್ದರು. ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿದೆ. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿದೆ. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು