Chikkaballapur News: ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ದತೆ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಸೂಚನೆ
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಲು 13819 ವಿದ್ಯಾರ್ಥಿ ಗಳು ನೋಂದಾಯಿಸಿಕೊಂಡಿದ್ದು, ಒಟ್ಟು ೨೩ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲಾ ಮಟ್ಟ ದಲ್ಲಿ ಪರೀಕ್ಷಾ ಗೌಪ್ಯ ವಸ್ತುಗಳನ್ನು ಜಿಲ್ಲಾ ಖಜಾನೆಯ ಅಭಿರಕ್ಷೆಯಲ್ಲಿಡಲು ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ

ಇದೇ ಮಾರ್ಚ್ ೧ ರಿಂದ ೨೦ ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಿಯಮಬದ್ದವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಅವರು ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಚಿಕ್ಕಬಳ್ಳಾಪುರ : ಇದೇ ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಿಯಮಬದ್ದವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಅವರು ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು.
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಲು 13819 ವಿದ್ಯಾರ್ಥಿ ಗಳು ನೋಂದಾಯಿಸಿಕೊಂಡಿದ್ದು, ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪರೀಕ್ಷಾ ಗೌಪ್ಯ ವಸ್ತುಗಳನ್ನು ಜಿಲ್ಲಾ ಖಜಾನೆಯ ಅಭಿರಕ್ಷೆಯಲ್ಲಿಡಲು ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಈ ಅಧಿಕಾರಿಗಳು ಪರೀಕ್ಷಾ ಗೌಪ್ಯ ವಸ್ತುಗಳು ನಮ್ಮ ಜಿಲ್ಲೆಗೆ ಬರುವ ದಿನದಂದು ಅವುಗಳನ್ನು ಪಡೆದು ಜಿಲ್ಲಾ ಖಜಾನೆಯ ಅಭಿರಕ್ಷೆ ಯಲ್ಲಿ ಇಡುವುದು ಮತ್ತು ಪರೀಕ್ಷಾ ದಿನದಂದು ನಿಗದಿತ ಸರಿಯಾದ ಸಮಯದಲ್ಲಿ ಅವುಗಳನ್ನು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳ ಮಾರ್ಗಾಧಿಕಾರಿಗಳಿಗೆ ವಿತರಣೆ ಮಾಡಬೇಕು ಎಂದರು.
ಇದನ್ನೂ ಓದಿ: Vishweshwar Bhat Column: ಲಿವಿಂಗ್ ಟುಗೆದರ್
ಪರೀಕ್ಷಾ ಕಾರ್ಯಗಳಿಗೆ ಅವಶ್ಯವಿರುವ ವಾಹನಗಳನ್ನು ಒದಗಿಸಬೇಕು. ವೆಬ್ ಕಾಸ್ಟಿಂಗ್ ಕಾರ್ಯವನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಡಿಯೋ ಕಾನ್ಪರೆನ್ಸ್ ನಡೆಸಲು ಕ್ರಮವಹಿಸಬೇಕು. ಖಜಾನೆಯನ್ನು ಪ್ರವೇಶಿಸುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಬಯೋ ಮೆಟ್ರಿಕ್ ನೊಂದಾಯಿಸಿಕೊಳ್ಳುವುದು. ಗೌಪ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸುವುದರಿಂದ ಜಿಲ್ಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಮತ್ತು 6 ತಾಲ್ಲೂಕುಗಳ ಮಾರ್ಗಾಧಿಕಾರಿಗಳಿಗೆ ಪೊಲೀಸ್ ಬೆಂಗಾವಲನ್ನು ಒದಗಿಸುವುದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸು ವುದು ಮತ್ತು ಎಲ್ಲಾ ಅವಶ್ಯ ಮುಂಜಾಗ್ರತಾ ಕ್ರಮಗಳನ್ನು ನಿರ್ವಹಿಸಬೇಕು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು, ಶೌಚಾಲಯ ಮತ್ತು ಆಸನ ವ್ಯವಸ್ಥೆ, ಪ್ರತಿ ಕೊಠಡಿಗೆ 24 ವಿದ್ಯಾರ್ಥಿ ಗಳಂತೆ ಮತ್ತು ಒಬ್ಬ ಮೇಲ್ವಿಚಾರಕರನ್ನು ನೇಮಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಾತ್ರ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳೀಗೆ ಅರ್ಧ ಗಂಟೆ ಮುಂಚಿತವಾಗಿ ಹಾಜರಿರುವಂತೆ ಸೂಚಿಸುವುದು. ಆಸನ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ಕಾಲೇಜು ಆವರಣದಲ್ಲಿ 3 ರಿಂದ 4 ಕಡೆ ಸೂಚನಾ ಫಲಕದಲ್ಲಿ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳು ಗುಂಪು ಸೇರುವುದನ್ನು ತಡೆಗಟ್ಟಲು ಕ್ರಮವಹಿಸುವಂತೆ ಸೂಚಿಸಬೇಕು ಎಂದರು.
ಪರೀಕ್ಷಾ ಕೇಂದ್ರದ ಆವರಣದೊಳಗೆ ಪೋಷಕರು ಪ್ರವೇಶಿಸುವುದನ್ನು ನಿಷೇಧಿಸುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಿಂದ ಉತ್ತರ ಪತ್ರಿಕೆಗಳನ್ನು ಪರೀಕ್ಷೆ ಮುಗಿದ ನಂತರ ನೇರ ವಾಗಿ ಅಂಚೆ ಕಚೇರಿಗೆ ನೀಡುವ ಕಾರ್ಯವನ್ನು ಪೊಲೀಸ್ ಬೆಂಗಾವಲಿನೊಂದಿಗೆ ಕಳುಹಿಸಿ ಕೊಡಬೇಕು. ಒಟ್ಟಾರೆಯಾಗಿ ಪರೀಕ್ಷೆಗಳ ಪಾವಿತ್ರತೆಯನ್ನು ಕಾಪಾಡಿ ಗುಣ ಮಟ್ಟದ ಪರೀಕ್ಷೆಯನ್ನು ನಡೆಸಲು ಅಗತ್ಯವಾದ ಎಲ್ಲಾ ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮತ್ತು ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರ ದೊಳಗೆ ತರಬಾರದು. ವಿದ್ಯಾರ್ಥಿಗಳು ನಿರ್ಭಿತಿಯಿಂದ ಪರೀಕ್ಷೆಗಳಿಗೆ ಹಾಜರಾಗಿ ಜಿಲ್ಲೆಗೆ ಕೀರ್ತಿ ತರುವಂತಹ ಫಲಿತಾಂಶವನ್ನು ತರಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮರಿಸ್ವಾಮಿ, ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಶಿವಕುಮಾರ್, ಜಿಲ್ಲಾ ಖಜಾನೆಯ ಉಪನಿರ್ದೇಶಕ ಮಂಜುನಾಥ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆ ಗೊಂಡಿರುವ ಅಧಿಕಾರಿಗಳು ಹಾಜರಿದ್ದರು.