Chikkaballapur News: ಬಲಿಜ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಾಗೇಪಲ್ಲಿ,ಚೇಳೂರು ಮತ್ತು ಗುಡಿಬಂಡೆ ತಾಲೂಕುಗಳಲ್ಲಿ ಪ್ರಥಮ ಪಿಯುಸಿ ಯಾವುದೇ ವಿವಿಧ ಪದವಿ ವ್ಯಾಸಂಗ ಮಾಡುತ್ತಿರುವ ಅರ್ಹ ಬಲಿಜ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ 2025-26ನೇ ಸಾಲಿನಲ್ಲಿ ತಾಲ್ಲೂಕು ಬಲಜ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ


ಬಾಗೇಪಲ್ಲಿ: ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಾಗೇಪಲ್ಲಿ,ಚೇಳೂರು ಮತ್ತು ಗುಡಿಬಂಡೆ ತಾಲೂಕು ಗಳಲ್ಲಿ ಪ್ರಥಮ ಪಿಯುಸಿ ಯಾವುದೇ ವಿವಿಧ ಪದವಿ ವ್ಯಾಸಂಗ ಮಾಡುತ್ತಿರುವ ಅರ್ಹ ಬಲಿಜ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ 2025-26ನೇ ಸಾಲಿನಲ್ಲಿ ತಾಲ್ಲೂಕು ಬಲಜ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಅರ್ಜಿಗಳನ್ನು ಆಹ್ವಾನಿಸ ಲಾಗಿದೆ ಎಂದು ತಾಲೂಕು ಬಲಿಜ ಸೇವಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು ತಿಳಿಸಿದ್ದಾರೆ.
ಪಟ್ಟಣದ ಸಂತೆ ಮೈದಾನದಲ್ಲಿರುವ ಬಲಿಜ ಸೇವಾ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಬಲಜ ಸಮುದಾಯದ ಬಾಲಕರಿಗೆ ಮಾತ್ರ ಪ್ರವೇಶ ಕಲ್ಪಿಸಲು ಉದ್ದೇಶಿಸಲಾಗಿದ್ದು ಪ್ರಾರಂಭದಲ್ಲಿ 50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿ, ಬೆಳಗ್ಗೆ ತಿಂಡಿ,ಮಧ್ಯಾಹ್ನ ಮತ್ತು ರಾತ್ರಿ ಊಟ ವ್ಯವಸ್ಥೆ ಪ್ರತಿ ದಿನ ವ್ಯವಸ್ಥೆ ಇರುತ್ತದೆ ಎಂದು ಹೇಳಿದರು.
ಇದನ್ನೂ ಓದಿ: Chikkaballapur News: ಚೇಳೂರು ಮತ್ತು ಮಂಚೇನಹಳ್ಳಿಗೆ ಪ್ರಜಾಸೌಧ ಮಂಜೂರು
ಮಾಜಿ ಪುರಸಭೆ ಸದಸ್ಯ ದಿ.ಬಿ.ನಾರಾಯಣಪ್ಪ ಅವರು ಪರಿಶ್ರಮದಿಂದ ಸಂತೆ ಮೈದಾನದಲ್ಲಿ ನಿವೇಶನ ಪಡೆದು ನೂತನ ವಿನ್ಯಾಸದೊಂದಿಗೆ ಉತ್ತಮ ಕಟ್ಟಡ ನಿರ್ಮಾಣ ಮಾಡಲಾಗಿದೆ.ಮಾಜಿ ವಿಧಾನಪರಿಷತ್ ಸದಸ್ಯ ಸಿ.ಆರ್.ಮನೋಹರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಮತ್ತಿತರ ದಾನಿಗಳ ಸಹಕಾರದಿಂದ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದ್ದು ಈ ಕಟ್ಟಡದಲ್ಲಿ 13 ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದ್ದು ಪ್ರತಿ ಕೊಠಡಿಯಲ್ಲಿ ನಾಲ್ಕು ವಿದ್ಯಾರ್ಥಿಗಳು ಉಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಇತರೆ ಸೌಲಭ್ಯಗಳನ್ನು ಹೊಂದಿದೆ. ಚೇಳೂರು, ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕುಗಳ ವಿವಿಧ ಹಳ್ಳಿಗಳಿಂದ ಶಾಲಾ ಕಾಲೇಜುಗಳಿಗೆ ದಿನ ನಿತ್ಯ ಬಂದು ಹೋಗುವ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ವ್ಯವಸ್ಥೆ ಮಾಡಲಾಗು ತ್ತಿದೆ. ಅರ್ಜಿ ಸಲ್ಲಿಸಲು ಜೂನ್ 25ರಂದು ಕೊನೆಯ ದಿನಾಂಕ ಆಗಿರುತ್ತದೆ. ಜುಲೈ ಮೊದಲ ವಾರದಲ್ಲಿ ಹಾಸ್ಟೆಲ್ನ್ನು ಪ್ರಾರಂಭ ಮಾಡಲಾಗುತ್ತದೆ.
ಅರ್ಜಿಗಳು ಪಟ್ಟಣದ ಡಿವಿಜಿ ರಸ್ತೆಯಲ್ಲಿ ಅಪ್ಪಯ್ಯ ಬಾಬು ಜೆರಾಕ್ಸ್ ಅಂಗಡಿಯಲ್ಲಿ ದೊರೆಯ ಲಿದ್ದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಪ್ಪಯ್ಯ ಬಾಬು ಜೆರಾಕ್ಸ್ ಅಥವಾ ಸಂತೆ ಮೈದಾನದಲ್ಲಿರುವ ಬಲಿಜ ಸೇವಾ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಸಲ್ಲಿಸಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಅಪ್ಪಯ್ಯ ಬಾಬು, ಎಲ್ಐಸಿ ವಿ.ವೆಂಕಟರವಣಪ್ಪ, ಡಿ.ಎನ್.ರಘುನಾಥ್, ಫೈನಾನ್ಸ್ ವೆಂಕಟೇಶ್,ಕೊತ್ತಪಲ್ಲಿ ನಾರಾಯಣಸ್ವಾಮಿ ಮತ್ತಿತರರು ಇದ್ದರು.