Chikkaballapur News: ಹೊರ ಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ: ಬಿ ಸಿ ಎಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ನೌಕರರು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ಶಾಲೆಗಳಲ್ಲಿ ಕಳೆದ15-20 ವರ್ಷಗಳಿಂದ ಗುತ್ತಿಗೆ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಯಾವುದೇ ಉದ್ಯೋಗ ಭದ್ರತೆ ಇಲ್ಲ


ಚಿಂತಾಮಣಿ: ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿಂತಾಮಣಿ ತಾಲ್ಲೂಕಿನ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಕಚೇರಿ ಮುಂಭಾಗ ಧರಣಿ ನಡೆಸಿದರು. ಕನಿಷ್ಠ ವೇತನ,ಕೆಲಸದ ಭದ್ರತೆ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಒತ್ತಾಯಿಸುತ್ತಿದ್ದಾರೆ.ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕೆಂದು ಅವರು ಕೇಳಿಕೊಳ್ಳುತ್ತಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ಶಾಲೆಗಳಲ್ಲಿ ಕಳೆದ15-20 ವರ್ಷಗಳಿಂದ ಗುತ್ತಿಗೆ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಯಾವುದೇ ಉದ್ಯೋಗ ಭದ್ರತೆ ಇಲ್ಲ. ಖಾಯಂ ನೌಕರರ ವರ್ಗಾವಣೆ ಯಿಂದ ಹೊರಗುತ್ತಿಗೆ ನೌಕರರು ಕೆಲಸ ಕಳೆದುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: Roopa Gururaj Column: ಭಗವಂತನ ಮೇಲೆ ಸಂಪೂರ್ಣವಾದ ನಂಬಿಕೆ
ಕಡಿಮೆ ಸಂಬಳಕ್ಕೆ ಕೆಲಸ ಮಾಡು ತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾ ಗಾರರು, ಕಾವಲುಗಾರರು, ಡಿ ಗ್ರೂಪ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ಗಳು ಸೇರಿದಂತೆ ರಾಜ್ಯದ ಸಾವಿರಾರು ನೌಕರರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ನಾಲ್ಕು ವರ್ಷಗಳಿಂದ ವೇತನವೂ ಹೆಚ್ಚಳವಾಗಿಲ್ಲ.ಬರುವ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಮಾಡಲು ಹೆಣಗಾಡುವಂತಾಗಿದೆ. ಹಾಗಾಗಿ ಕಚೇರಿ ಎದುರು ಬೇಡಿಕೆ ಈಡೇರುವವರೆಗೆ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿಯಪ್ಪ ಕೆ, ಮಂಜುನಾಥ್, ಭಾಗ್ಯಮ್ಮ, ಶ್ರೀನಿವಾಸ್, ಶಶಿಕಲಾ. ಪರಿಮಿಳಮ್ಮ ಸೇರಿದಂತೆ ಮತ್ತಿತರರು ಇದ್ದರು.