ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಕಾಗತಿ ಶಾಲಾ ಮಕ್ಕಳಿಗೆ ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ಲೇಖನ ಸಾಮಗ್ರಿಗಳ ವಿತರಣೆ

ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ,ಏಕೆಂದರೆ ಅವುಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುವ ಜೀವನದ ಪಾಠಗಳನ್ನು ಕಲಿಸುತ್ತವೆ.ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ತರಬೇತಿ ಪಡೆದವರಾಗಿರುತ್ತಾರೆ ಮತ್ತು ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಪ್ರೋತ್ಸಾಹಿಸಬೇಕು

ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ಲೇಖನ ಸಾಮಗ್ರಿಗಳ ವಿತರಣೆ

Profile Ashok Nayak Jun 24, 2025 11:31 PM

ಚಿಂತಾಮಣಿ ತಾಲ್ಲೂಕಿನ ಕಾಗತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಶ್ರೀನಿವಾಸ್ ರವರು ಈ ವೇಳೆ ಮಾತನಾಡಿ ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದ್ದು ಟ್ರಸ್ಟ್ ನ ಸೇವೆ ತಾಲೂಕು ಸೇರಿದಂತೆ ರಾಜ್ಯ ಮಟ್ಟದಲ್ಲಿ ಇನ್ನು ಮುಂದುವರೆಯಲಿ ಎಂದು ಶುಭ ಹಾರೈಸಿದರು.

ಇದನ್ನೂ ಓದಿ: Chikkaballapur News: ರಾಶ್ಚೇರುವು ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ದ ಸಲ್ಲಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಮಂಡನೆ ಸಭೆ

ಕರ್ನಾಟಕ ರಕ್ಷಣಾ ವೇದಿಕೆ ನಾಗರಾಜ್ ರವರು ಮಾತನಾಡಿ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ,ಏಕೆಂದರೆ ಅವುಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುವ ಜೀವನದ ಪಾಠಗಳನ್ನು ಕಲಿಸುತ್ತವೆ.ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ತರಬೇತಿ ಪಡೆದವರಾಗಿರುತ್ತಾರೆ ಮತ್ತು ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜನಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಬಡಗವಾರಹಳ್ಳಿ ಶಬರಿ, ಉಮಾಪತಿ, ಮಂಜುನಾಥ್, ಮುಕ್ತೇಶ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ವೆಂಕಟರತ್ನಮ್ಮ ಕೃಷ್ಣಪ್ಪ, ವೆಂಕಟ ರವಣಪ್ಪ,ಗಜೇಂದ್ರ, ಶಾಲೆಯ ಮುಖ್ಯ ಶಿಕ್ಷಕರಾದ ಎ ಸಿ ನಾರಾಯಣಸ್ವಾಮಿ,ಹಾಗೂ ಬೋಧಕ ಸಿಬ್ಬಂದಿ ವರ್ಗದವರು ಹಾಜರಿದ್ದರು