ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Indira Kit: ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಯುಗಾದಿಗೆ ವಿತರಣೆ ಆಗಲಿದೆ : ಯಲುವಳ್ಳಿ ಎನ್.ರಮೇಶ್ ಘೋಷಣೆ

ಒಬ್ಬ ವ್ಯಕ್ತಿಗೆ 10 ಕೆ.ಜಿ. ಅಕ್ಕಿಯನ್ನು ಕೊಟ್ಟರೆ ಒಂದು ಕುಟುಂಬಕ್ಕೆ 30 ರಿಂದ 40 ಕೆ.ಜಿ. ಅಕ್ಕಿ ಮಾಸಿಕ ಸಿಗುವುದರಿಂದ ಅಷ್ಟು ಪ್ರಮಾಣದ ಅಕ್ಕಿಯನ್ನು ಜನರು ಸದುಪಯೋಗ ಪಡಿಸಿ ಕೊಳ್ಳುತ್ತಿಲ್ಲ. ಇದರಿಂದಾಗಿ ದುರ್ಬಳಕೆಗೆ ಅವಕಾಶವಾಗುತ್ತದೆ ಇದನ್ನು ತಪ್ಪಿಸಲು ಇಂದಿರಾಕಿಟ್ ವಿತರಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ

ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಯುಗಾದಿಗೆ ವಿತರಣೆ ಆಗಲಿದೆ

ಇಂದಿರಾ ಕಿಟ್ ಸೌಲಭ್ಯ ಮುಂದಿನ ಯುಗಾದಿ ಹಬ್ಬದ ವೇಳೆಗೆ ಪಡಿತರದಾರರಿಗೆ ಸಿಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು. -

Ashok Nayak
Ashok Nayak Jan 10, 2026 12:30 AM

ಚಿಕ್ಕಬಳ್ಳಾಪುರ: ಇಂದಿರಾ ಕಿಟ್(Indira Kit) ಸೌಲಭ್ಯ ಮುಂದಿನ ಯುಗಾದಿ ಹಬ್ಬದ ವೇಳೆಗೆ ಪಡಿತರದಾರರಿಗೆ ಸಿಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್.ರಮೇಶ್ ತಿಳಿಸಿದರು.

ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ “ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಒಬ್ಬ ವ್ಯಕ್ತಿಗೆ 10 ಕೆ.ಜಿ. ಅಕ್ಕಿಯನ್ನು ಕೊಟ್ಟರೆ ಒಂದು ಕುಟುಂಬಕ್ಕೆ 30 ರಿಂದ 40 ಕೆ.ಜಿ. ಅಕ್ಕಿ ಮಾಸಿಕ ಸಿಗುವುದರಿಂದ ಅಷ್ಟು ಪ್ರಮಾಣದ ಅಕ್ಕಿಯನ್ನು ಜನರು ಸದುಪಯೋಗ ಪಡಿಸಿ ಕೊಳ್ಳುತ್ತಿಲ್ಲ.ಇದರಿಂದಾಗಿ ದುರ್ಬಳಕೆಗೆ ಅವಕಾಶವಾಗುತ್ತದೆ ಇದನ್ನು ತಪ್ಪಿಸಲು ಇಂದಿರಾಕಿಟ್ ವಿತರಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಹೆಚ್ಚಿಗೆ ಅಕ್ಕಿ ದೊರೆಯುತ್ತಿರುವುದರಿಂದ ಕೆಲವರು ಅವಶ್ಯಕತೆಗಿಂತ ಹೆಚ್ಚಿಗೆ ಅನ್ನ ಮಾಡಿ ನಾಯಿಗಳಿಗೆ ಅನ್ನ ಹಾಕುವುದನ್ನು ನನ್ನ ಸ್ವಗ್ರಾಮದಲ್ಲೆ ಗಮನಿಸಿದ್ದೇನೆ. ಈ ಬಗ್ಗೆ ದೃಶ್ಯಾವಳಿ ಗಳನ್ನು ಮಾಡಿಕೊಂಡು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಗಮನಕ್ಕೆ ನಾನು ತಂದಿದ್ದೆ. ಇದನ್ನು ಪರಿಗಣಿಸಿದ ಸಮಿತಿಯು ಜನವರಿಯಿಂದಲೇ  ಇಂದಿರಾ ಕಿಟ್ ಸೌಲಭ್ಯ ಜನರಿಗೆ ನೀಡಲು ನಿರ್ಧಾರ ಮಾಡಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಬರುವ ಯುಗಾದಿ ಯಿಂದ  ಇಂದಿರಾ ಕಿಟ್ ನ್ನು ಸಾರ್ವಜನಿಕರಿಗೆ ವಿತರಿಸಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಸಮಿತಿಯು  ನಿರ್ಧರಿಸಿದೆ ಅದರಂತೆ ಯುಗಾದಿಗೆ ಈ ಸೌಲಭ್ಯ ಸಿಗಲಿದೆ  ಎಂದು ಭರವಸೆ ನೀಡಿದರು.

ಇದನ್ನೂ ಓದಿ: Indira Food Kit: ಅನ್ನಭಾಗ್ಯ ಯೋಜನೆ; 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್‌ʼ ವಿತರಣೆಗೆ ಸಂಪುಟ ನಿರ್ಧಾರ

ಗ್ಯಾರಂಟಿ ಯೋಜನೆಗಳು ಶೇ.100ರಷ್ಟು ಪ್ರಗತಿಯನ್ನು ಸಾಧಿಸಬೇಕು. ಜಿಲ್ಲೆಯಲ್ಲಿ ಈ ಬಗ್ಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಉತ್ತಮ ಪ್ರಗತಿ ಸಾಧಿಸಿದ್ದಾರೆ. ಕೆಲವು ಯೋಜನೆ ಗಳಲ್ಲಿ ಪ್ರಗತಿ ಸಾಧಿಸಿದ್ದರೂ ಸಹ ಜನರ ಅರಿವಿಗೆ ಬಾರದಿರುವುದು ವಿಷಾದನೀಯ. ಇದಕ್ಕೆ ಉತ್ತಮ ನಿದರ್ಶನವೆಂದರೆ ಗೃಹಲಕ್ಷ್ಮಿ  ಯೋಜನೆಯ ಆರಂಭದಿಂದ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ ಎಂದರು.

ಆದರೆ ಸದರಿ ಬ್ಯಾಂಕಿನಲ್ಲಿ ಆ ಫಲಾನುಭವಿಗಳು ಸಾಲ ಪಡೆದಿರುವುದರಿಂದ ಸದರಿ ಸಾಲಕ್ಕೆ ಹಣವು ಜಮೆ ಆಗಿದೆ. ಇದು ಅವರ ಅರಿವಿಗೆ ಬಾರದೆ ಹಣ ಬಂದಿಲ್ಲ ಎಂದು ಅಪಪ್ರಚಾರ ಮಾಡಿರು ವುದು ಕಂಡುಬಂದಿದೆ. ಅಂತಹ ಇನ್ನಿತರ ಪ್ರಕರಣಗಳನ್ನು ಗುರ್ತಿಸಿ ಫಲಾನುಭವಿಗಳಿಗೆ ತಿಳಿಸು ವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Chi Z 2

ಒಟ್ಟಾರೆ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಉತ್ತಮವಾಗಿ ಜಾರಿಯಾಗಿ ಜನರ ಮನಸೂರೆ ಗೊಂಡಿವೆ. ಈ ಎಲ್ಲ ಉಪಕ್ರಮಗಳನ್ನು ಹೊರತು ಪಡಿಸಿ ಯಾವುದೇ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅರ್ಹ ಫಲಾನುಭವಿಯು ವಂಚಿತರಾಗಿದ್ದಲ್ಲಿ ಅಂತಹವರನ್ನು ಈ ಯೋಜನೆಗಳ ವ್ಯಾಪ್ತಿಗೆ ತರಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.

ಈವರೆಗೆ ಜಿಲ್ಲೆಯ ಯಾವುದೇ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತ ರಾಗಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳನ್ನು ಸಂಪರ್ಕಿಸಿ ಯೋಜನೆಗಳನ್ನು ಪಡೆದುಕೊಳ್ಳುವಂತೆ ಗ್ಯಾರಂಟಿ ಯೋಜನೆ ಜಾರಿಯ ಅಧ್ಯಕ್ಷರು ಈ ವೇಳೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ರಾಮಕೃಷ್ಣಪ್ಪ, ಸದಸ್ಯ ರಾದ ಮಧುಸೂದನ್ ರೆಡ್ಡಿ, ಮುನಿನಾರಾಯಣಪ್ಪ, ಚೆಲ್ಲಂ, ಎಂ.ಕೆ ವೇಣುಗೋಪಾಲ್, ಹೆಚ್.ಎಂ. ಮುನಿಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.