Child Labour: ಆರ್ಥಿಕವಾಗಿ ಬಡತನವಿರುವ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಬಾಲಕಾರ್ಮಿಕರಾಗುತ್ತಿರುವುದು ವಿಷಾಧನೀಯ: ನ್ಯಾಯಾಧೀಶ ಮಂಜುನಾಥಾಚಾರಿ
ಶುಕ್ರವಾರ ಕಾನೂನು ಸೇವಾ ಸಮಿತಿ, ಬಾಗೇಪಲ್ಲಿ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ,ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ ಗಳ ಇವರುಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು

ಆರ್ಥಿಕವಾಗಿ ಬಡತನವಿರುವ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಬಾಲ ಕಾರ್ಮಿಕ ರಾಗುತ್ತಿರುವುದು ವಿಷಾಧಿನಿಯ ಎಂದು ನ್ಯಾಯಾಧೀಶ ಮಂಜುನಾಥಾಚಾರಿ ಹೇಳಿದರು.

ಬಾಗೇಪಲ್ಲಿ: ಬಡವರು ಆರ್ಥಿಕ ಸಂಕಷ್ಟದಿಂದ ತಮ್ಮ ಮಕ್ಕಳ ಶಿಕ್ಷಣವನ್ನು ಅರ್ಧಕ್ಕೆ ಮೊಟಕು ಗೊಳಿಸಿ ಸಣ್ಣ ವಯಸ್ಸಿನ ಮಕ್ಕಳನ್ನು ಬಾಲ ಕಾರ್ಮಿಕರನ್ನು ಮಾಡುತ್ತಿರುವುದು ತುಂಬಾ ವಿಷಾಧ ನೀಯ ಸಂಗತಿಯಾಗಿದ್ದು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜೆಎಂಎಫ್ಸಿ ಹಿರಿಯ ಸಿವಿಲ್ ನ್ಯಾಯಧೀಶರಾದ ಮಂಜುನಾಥಾಚಾರಿ ಹೇಳಿದರು.
ಶುಕ್ರವಾರ ಕಾನೂನು ಸೇವಾ ಸಮಿತಿ, ಬಾಗೇಪಲ್ಲಿ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ,ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಇವರುಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆ ಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: Chikkabalapur News: ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ: ಕರವೇ ಜಿಲ್ಲಾದ್ಯಕ್ಷ ಎಂ.ಆರ್.ಲೋಕೇಶ್
ತಾಲ್ಲೂಕಿನಾದ್ಯಂತ ಬಹಳಷ್ಟು ಆರ್ಥಿಕವಾಗಿ ಹಿಂದುಳಿದ ಜನರಿದ್ದು, ಬಡತನವಿರುವ ಪೋಷಕರು ತಮ್ಮ ಮಕ್ಕಳು ಶಿಕ್ಷಣವನ್ನು ಕಲಿಯುವಂತಹ ವಯಸ್ಸಿನಲ್ಲಿ ದುಡಿಯಲು ಹೆಚ್ಚುತ್ತಿರುವುದು ಅತ್ಯಂತ ವಿಷಾಧನೀಯ ಸಂಗತಿ ಎಂದರು, ಇಂತಹ ಪದ್ದತಿಯನ್ನು ನಿರ್ಮೂಲನೆ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳು ಶೈಕ್ಷಣಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ತೊಂದರೆ ಅನುಭವಿಸುತ್ತಾರೆ. ಎಲ್ಲಾ ಮಕ್ಕಳಲ್ಲೂ ವಿಶೇಷ ಸಾಮರ್ಥ್ಯವಿದ್ದು, ಅವನ್ನು ತಡೆಯುವ ಹಕ್ಕು ನಮಗಿಲ್ಲ. ಹೀಗಾಗಿ ಮಕ್ಕಳನ್ನು ದುಡಿಸಿಕೊಳ್ಳುವವರ ಮನಸ್ಥಿತಿ ಬದಲಾಯಿಸಲು ಮೂಡಿಸ ಬೇಕಿದೆ ಎಂದು ಸಲಹೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಜಯಪ್ಪ ಮಾತನಾಡಿ, ಕಾರ್ಮಿಕ ಇಲಾಖೆ ಅಧಿಕಾರಿಗಳು ಹೋಟೆಲ್, ಕಿರಾಣಿ ಅಂಗಡಿ, ಸಣ್ಣ ಪುಟ್ಟ ಕಾರ್ಖಾನೆಗಳಲ್ಲಿ ದುಡಿಮೆಗೆ ಪೋಷಕರು ಮಕ್ಕಳನ್ನು ಕಳುಹಿಸಿ ಕೊಡುತ್ತಾರೆ. ಅಂತಹ ಮಕ್ಕಳನ್ನು ತಪಾಸಣೆ ಮಾಡಿ ಸರಕಾರದ ವಸತಿ ಶಾಲೆಗಳಿಗೆ ದಾಖಲಿಸಿ ಶಿಕ್ಷಣವನ್ನು ನೀಡುವಂತಹ ಕೆಲಸವನ್ನು ಮಾಡಬೇಕಿದೆ ಎಂದರು. ಬಾಲ ಕಾರ್ಮಿಕ ಪಿಡುಗು ತೊಲಗಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಕೀಲರಾದ ಸಿ.ರವಿ, ವೆಂಕಟನಾರಾಯಣ, ಬಿಂದು ಕುಮಾರಿ, ನಾಗಭೂಷಣ, ಬಾಲು ನಾಯಕ್, ಮುಖ್ಯ ಶಿಕ್ಷಕ ವೆಂಕಟೇಶ್, ಶಿಕ್ಷಕರಾದ ಕೆ.ವಿ. ಶ್ರೀನಿವಾಸ್ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.