ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಸರ್ವೋದಯ ಪರಿಕಲ್ಪನೆಯಲ್ಲಿ ಜೆಡಿಯು ಚುನಾವಣೆ: ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ನಾಗರಾಜು ಪರ ಮಹಿಮಾ ಪಾಟೀಲ್ ಪ್ರಚಾರ

‘ಜೆಡಿಯು ರಾಜ್ಯ ಯುವ ಘಟಕದ ಅಧ್ಯಕ್ಷರೂ ಆಗಿರುವ ನಾಗರಾಜ್ ಅವರನ್ನು ಕಣಕ್ಕೆ ಇಳಿಸು ತ್ತಿದ್ದೇವೆ. ಈಗಾಗಲೇ ಎರಡು ಬಾರಿ ಚುನಾವಣೆ ಎದುರಿಸಿರುವ ಅವರಿಗೆ ಅನುಭವ ಇದೆ. ಹಣ, ಹೆಂಡ, ಉಡುಗರೆ ಹಂಚದೇ ಚುನಾವಣೆ ಮಾಡುತ್ತಿದ್ದೇವೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಪ್ರಚಾರ ಆರಂಭಿಸಿದ್ದೇವೆ’

ಸರ್ವೋದಯ ಪರಿಕಲ್ಪನೆಯಲ್ಲಿ ಜೆಡಿಯು ಚುನಾವಣೆ

Profile Ashok Nayak Jun 3, 2025 11:16 AM

ಬಾಗೇಪಲ್ಲಿ: ಪರಿಸರ, ಕೃಷಿ, ಶಿಕ್ಷಣ,ಆರೋಗ್ಯ ಹಾಗೂ ಆಡಳಿತ ಈ ಐದು ಅಂಶಗಳ ಸರ್ವೋದಯ ಪರಿಕಲ್ಪನೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಜೆಡಿಯು ಹೊಸ ಅಲೆಯನ್ನು ಎಬ್ಬಿಸುವ ಕೆಲಸ ಮಾಡಲಿದೆ ಎಂದು ಜೆಡಿಯು ರಾಜ್ಯಾದ್ಯಕ್ಷ ಮಹಿಮಾ ಪಾಟೀಲ್ ತಿಳಿಸಿದರು. ಅವರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಕಾ ಗೋಷ್ಠಿ ನಡೆಸಿ ಮಾತನಾಡಿದರು.

ವಿಧಾನಪರಿಷತ್‌ನ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ 2026ರ ಜೂನ್ ತಿಂಗಳಲ್ಲಿ ನಿಗದಿಯಾಗಿರುವ ಚುನಾವಣೆಗೆ ಕೋಲಾರ ಜಿಲ್ಲೆಯ ವೈದ್ಯ ಡಾ.ಕೆ.ನಾಗರಾಜ್ ಅವರು ಜೆಡಿಯು ಅಭ್ಯರ್ಥಿ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದರು.

‘ಜೆಡಿಯು ರಾಜ್ಯ ಯುವ ಘಟಕದ ಅಧ್ಯಕ್ಷರೂ ಆಗಿರುವ ನಾಗರಾಜ್ ಅವರನ್ನು ಕಣಕ್ಕೆ ಇಳಿಸು ತ್ತಿದ್ದೇವೆ. ಈಗಾಗಲೇ ಎರಡು ಬಾರಿ ಚುನಾವಣೆ ಎದುರಿಸಿರುವ ಅವರಿಗೆ ಅನುಭವ ಇದೆ. ಹಣ, ಹೆಂಡ, ಉಡುಗರೆ ಹಂಚದೇ ಚುನಾವಣೆ ಮಾಡುತ್ತಿದ್ದೇವೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಪ್ರಚಾರ ಆರಂಭಿಸಿದ್ದೇವೆ’ ಎಂದು ಹೇಳಿದರು.

ಇದನ್ನೂ ಓದಿ: Chikkanayakanahalli (Tumkur) News:ಹೇಮಾವತಿ ನೀರು ಹರಿಸಲು ಪ್ರಾಮಾಣಿಕವಾಗಿ ಶ್ರಮ ಹಾಕುತ್ತಿದ್ದೇನೆ : ಸಿಬಿಎಸ್

‘ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಪಕ್ಷ ಈಗಿನಿಂದಲೇ ತಯಾರಿ ನಡೆಸಿದೆ. ಚುನಾವಣೆ ಸರಳ ಮತ್ತು ಪಾರದರ್ಶಕವಾಗಿ ನಡೆಯಬೇಕು ಎಂಬುದು ಪಕ್ಷದ ಅಪೇಕ್ಷೆ. ಎಎಪಿ, ರೈತ ಸಂಘ ಸೇರಿ ಸೂಕ್ಷ್ಮತೆ ಉಳಿಸಿಕೊಂಡು ರಾಜಕಾರಣಿಗಳು ಬೆಂಬಲ ನೀಡುತ್ತಿದ್ದಾರೆ’ ಎಂದು ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಡಾ.ಕೆ.ನಾಗರಾಜು ಮಾತನಾಡಿ, ಸರ್ವೋದಯ ಆಲೋಚನೆ ಮೂಲಕ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹ, ಎನ್ ಪಿಎಸ್ ಬದಲಿಗೆ ಓಪಿಎಸ್ ಪದ್ಧತಿ ಜಾರಿಗೆ ಒತ್ತಾಯ, ಅತಿಥಿ ಉಪನ್ಯಾಸಕರ ಹಾಗೂ ಶಿಕ್ಷಕರ ಸೇವಾ ಭದ್ರತೆ, ಜ್ಯೋತಿ ಸಂಜೀವಿನಿ ಯೋಜನೆ ಜಾರಿ ಮುಂತಾದ ಬೇಡಿಕೆ ಈಡೇರಿಕೆಗೆ ಬದ್ಧನಾಗಿ ದುಡಿಯುತ್ತೇನೆ. ಈ ನಿಟ್ಟಿನಲ್ಲಿ ಆಶೀರ್ವದಿಸಿ ಎಂದು ಮನವಿ ಮಾಡಿದ್ರು.

ಈ ಸಂದರ್ಭದಲ್ಲಿ ಜೆಡಿಯು ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ, ನಾರಾಯಣ ಸ್ವಾಮಿ, ಅಂಬರೀಶ್, ಮಲ್ಲಮ್ಮ, ಕೆ.ಆರ್.ಎಸ್ ಪಕ್ಷದ ಬಾಲು,ಚಂದ್ರಶೇಖರ, ಸೇರಿ ಹಲವಾರು ಮಂದಿ ಉಪಸ್ಥಿತರಿದ್ದರು.