ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶಿಡ್ಲಘಟ್ಟದಲ್ಲಿ ಹಸಿರು ಸೇನೆ ರೈತ ಸಂಘ, ಕೆಐಎಡಿಬಿ ಭೂ ವಿರೋಧಿ ಹೋರಾಟ ಸಮಿತಿ ಕಾರ್ಯಕರ್ತರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ರೈತರು ಭೂಮಿಯನ್ನು ನೀಡಲು ಒಪ್ಪಿದರೆ ಮಾತ್ರವೇ ರಾಜ್ಯ ಸರ್ಕಾರ, ಕೆಐಎಡಿಬಿಯು ಕೈಗಾರಿಕೆ ಗಳ ಸ್ಥಾಪನೆಗೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಿ. ಅದು ಬಿಟ್ಟು ರೈತರ ವಿರೋಧದ ನಡುವೆ ಯೂ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ, ಜಿಲ್ಲಾ ಆಡಳಿತ, ತಾಲ್ಲೂಕು ಆಡಳಿತವು ಫಲವತ್ತಾದ ಕೃಷಿ ಭೂಮಿ ಯನ್ನು ಏಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆಯೋ ಅರ್ಥವಾಗುತ್ತಿಲ್ಲ

ಕೆಐಎಡಿಬಿ ಭೂ ವಿರೋಧಿ ಹೋರಾಟ ಸಮಿತಿ ಮುಂದಾಳತ್ವ

Profile Ashok Nayak May 7, 2025 3:22 PM

ಶಿಡ್ಲಘಟ್ಟ: ಕೆಐಎಡಿಬಿಯು ಫಲವತ್ತಾದ ಕೃಷಿ ಭೂಮಿಯ ಸ್ವಾಧೀನ ಪ್ರಕ್ರಿಯೆ ಕೈ ಬಿಡಲು, ಏ.25 ರಂದು ನಡೆಸಿದ ರೈತರಿಂದ ಅಭಿಪ್ರಾಯ ಸಂಗ್ರಹವು ಪಾರದರ್ಶಕವಾಗಿ ನಡೆದಿಲ್ಲ ಹಾಗೂ ರೈತರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಲಘುವಾದ ಹೇಳಿಕೆ ವಿರುದ್ದ ಹಸಿರು ಸೇನೆ ರೈತ ಸಂಘ, ಕೆಐಎಡಿಬಿ ಭೂ ವಿರೋಧಿ ಹೋರಾಟ ಸಮಿತಿ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಶಿಡ್ಲಘಟ್ಟ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಹಸಿರು ಸೇನೆ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ನಾವು ಕೈಗಾರಿಕೆಗಳ ವಿರೋಧಿಗಳಲ್ಲ. ಆದರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗಳಿಗೆ ಸ್ವಾಧೀನಪಡಿಸಿಕೊಳ್ಳುವುದನ್ನು ಬಲವಾಗಿ ವಿರೋಧಿಸುತ್ತೇವೆ ಎಂದರು.

ರೈತರು ಭೂಮಿಯನ್ನು ನೀಡಲು ಒಪ್ಪಿದರೆ ಮಾತ್ರವೇ ರಾಜ್ಯ ಸರ್ಕಾರ, ಕೆಐಎಡಿಬಿಯು ಕೈಗಾರಿಕೆ ಗಳ ಸ್ಥಾಪನೆಗೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಿ. ಅದು ಬಿಟ್ಟು ರೈತರ ವಿರೋಧದ ನಡುವೆ ಯೂ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ, ಜಿಲ್ಲಾ ಆಡಳಿತ, ತಾಲ್ಲೂಕು ಆಡಳಿತವು ಫಲವತ್ತಾದ ಕೃಷಿ ಭೂಮಿಯನ್ನು ಏಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆಯೋ ಅರ್ಥವಾಗುತ್ತಿಲ್ಲ ಎಂದರು.

ರೈತರ ಪರ ಎಂದು ಹೇಳಿಕೊಳ್ಳುವ ಸರ್ಕಾರ, ಜನಪ್ರತಿನಿಧಿಗಳು ಬಂಡವಾಳಶಾಯಿಗಳ ಮರ್ಜಿಗೆ ಬಿದ್ದು ಫಲವತ್ತಾದ ಕೃಷಿ ಭೂಮಿಯನ್ನು ರೈತರ ಒಪ್ಪಿಗೆ ಇಲ್ಲದೆ ಬಲವಂತಕ್ಕೆ ಸ್ವಾಧೀನಪಡಿಸಿ ಕೊಳ್ಳಲು ಮುಂದಾಗಿದ್ದು ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ. ರಕ್ತ ಕೊಡುತ್ತೇವೆ ಜೀವವನ್ನಾ ದರೂ ಕೊಡುತ್ತೇವೆ ಆದರೆ ಭೂಮಿಯನ್ನ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ ಎಂದು ಹೇಳಿದರು.

ಏ.25 ರಂದು ಕೆಐಎಡಿಬಿಗೆ ಜಮೀನು ನೀಡುವ ಮತ್ತು ನೀಡದಿರುವ ಬಗ್ಗೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತವು ರೈತರಿಂದ ಅಭಿಪ್ರಾಯ ಸಂಗ್ರಹ ಮಾಡಿದ್ದು ಸರಿ. ಜಮೀನು ನೀಡುವ ರೈತರು ಬಿಳಿ ಚೀಟಿಯಲ್ಲೂ, ನೀಡದಿರುವ ರೈತರು ಪಿಂಕ್ ಚೀಟಿಯಲ್ಲೂ ತಮ್ಮ ಅಭಿಪ್ರಾಯವನ್ನು ಬರೆದು ಕೊಟ್ಟರು.

ಆದರೆ ಬಿಳಿ ಚೀಟಿ ಹಾಗೂ ಪಿಂಕ್ ಚೀಟಿ ಎಣಿಕೆ ವೇಳೆ ಯಾವೊಬ್ಬ ರೈತರನ್ನು ಬಿಟ್ಟುಕೊಳ್ಳದೆ ಸಚಿವರು, ಅಧಿಕಾರಿಗಳು ಕೊಠಡಿಯಲ್ಲಿ ಕುಳಿತು ಮತ ಎಣಿಕೆ ಮಾಡಿ ಪ್ರಕಟಿಸಿದ ಅಂಕಿ ಅಂಶಗಳ ಬಗ್ಗೆ ನಮಗೆ ಅನುಮಾನ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಂತೆ ಪಾರದರ್ಶಕವಾಗಿ ಎಣಿಕೆ ಕಾರ್ಯ ಆಗಿಲ್ಲ. ತಮ್ಮ ಅನುಕೂಲಕ್ಕೆ ತಕ್ಕಂತೆ ಎಣಿಕೆ ಕಾರ್ಯ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ದರು.

ಹಸಿರು ಶಾಲು ಹಾಕಿಕೊಂಡ ಎಲ್ಲರೂ ರೈತರಲ್ಲ ಎಂದೆಲ್ಲಾ ಮಾತನಾಡಿದ್ದೀರಿ, ಕೆಐಎಡಿಬಿಗೆ ಏಕೆ ವಿರೋಧಿಸುತ್ತೀರಿ, ಡ್ರೀಮ್ಡ್ ಫಾರೆಸ್ಟ್ ಬಗ್ಗೆ ಏಕೆ ಧ್ವನಿ ಎತ್ತಲಿಲ್ಲ ಎಂದು ಪ್ರಶ್ನಿಸಿದ್ದೀರಿ.

ನಾವು ಡೀಮ್ಡ್ ಫಾರೆಸ್ಟ್ ಬಗ್ಗೆ ಧ್ವನಿ ಎತ್ತಿದ್ದೇವೆ, ಹೋರಾಟವನ್ನೂ ಮಾಡಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ರೈತರನ್ನು ಗುಳೆ ಎಬ್ಬಿಸದಂತೆ ತಡೆದಿದ್ದೇವೆ. ಹಸಿರು ಶಾಲು ಹಾಕಿರುವುದು ರೈತ ಕಷ್ಟಗಳಿಗೆ ಸ್ಪಂಧಿಸಲು, ಹಾಗಾಗಿಯೆ ಕೆಐಎಡಿಬಿಗೆ ಜಮೀನನ್ನು ನೀಡುವುದನ್ನು ವಿರೋಧಿಸು ತ್ತಿದ್ದೇವೆ. ಹಸಿರು ಶಾಲು ಬಗ್ಗೆ ಕೇವಲವಾಗಿ ಮಾತನಾಡಬೇಡಿ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಎನ್.ವೆಂಕಟೇಶ್ ಇನ್ನಿತರೆ ಮುಖಂಡರು ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದರು.

ಕೆಐಎಡಿಬಿ ಭೂ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಹೀರೆಬಲ್ಲ ಕೃಷ್ಣಪ್ಪ, ರೈತ ಸಂಘದ ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಸೀಕಲ್ ಆನಂದಗೌಡ, ರೈತ ಸಂಘದ ನಗರ ಘಟಕದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ವೀರಾಪುರ ಮುನಿನಂಜಪ್ಪ, ವೇಣುಗೋಪಾಲ್, ಅಜಿತ್ ಕುಮಾರ್ ಇನ್ನಿತರೆ ಮುಖಂಡರು ಪ್ರತಿಭಟನೆಯ ನೇತೃತ್ವವಹಿಸಿದ್ದರು.