ಆರ್ಸಿಬಿ 11 ಜನರ ಸಾವಿಗೆ ಕಾರಣರಾದ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಯಾವುದೇ ಸಿದ್ಧತೆ ಮಾಡಿಕೊಳ್ಳದೆ ತರಾತುರಿಯಲ್ಲಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಆಯೋಜಿಸ ಲಾಗಿದೆ. ಕಾರ್ಯಕ್ರಮ ಆಯೋಜಿಸಬಾರದು ಎಂದು ಪೊಲೀಸ್ ಇಲಾಖೆ ಪತ್ರ ಬರೆದಿದ್ದರೂ ನಿರ್ಲಕ್ಷಿಸಿ ಸರ್ಕಾರ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಲು ಅವಕಾಶ ಕಲ್ಪಿಸಿ ೧೧ ಅಭಿಮಾನಿಗಳ ಬಲಿ ಪಡೆದಿದೆ.

ಆರ್ಸಿಬಿ ಸಂಭ್ರಮಾಚರಣೆ ವೇಳೆ ೧೧ ಜನರ ಸಾವಿಗೆ ಕಾರಣರಾದ ಸಿಎಂ.ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಚಿಕ್ಕಬಳ್ಳಾಪುರ : ಆರ್ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯಲ್ಲಿ ಖಂಡಿಸಿ, ೧೧ ಜನರ ಸಾವಿಗೆ ಕಾರಣರಾದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಸೋಮವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್ ಯಾವುದೇ ಸಿದ್ಧತೆ ಮಾಡಿಕೊಳ್ಳದೆ ತರಾತುರಿಯಲ್ಲಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಆಯೋಜಿಸ ಲಾಗಿದೆ. ಕಾರ್ಯಕ್ರಮ ಆಯೋಜಿಸಬಾರದು ಎಂದು ಪೊಲೀಸ್ ಇಲಾಖೆ ಪತ್ರ ಬರೆದಿದ್ದರೂ ನಿರ್ಲಕ್ಷಿಸಿ ಸರ್ಕಾರ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಲು ಅವಕಾಶ ಕಲ್ಪಿಸಿ ೧೧ ಅಭಿಮಾನಿಗಳ ಬಲಿ ಪಡೆದಿದೆ. ಆದ್ದರಿಂದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: Chikkanayakanahalli (Tumkur) News: ಬಸ್ ಸೌಲಭ್ಯಕ್ಕೆ ಒತ್ತಾಯ
ಸರ್ಕಾರದ ವೈಫಲ್ಯಗಳನ್ನು ಮರೆ ಮಾಚಲು ಭದ್ರತಾ ವೈಫಲ್ಯದ ಹೆಸರಲ್ಲಿ ಪೊಲೀಸ್ ಅಧಿಕಾರಿ ಗಳನ್ನು ಅಮಾನತುಗೊಳಿಸಲಾಗಿದೆ. ಈ ದುರ್ಘಟನೆ ರಾಜ್ಯದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆ. ಕಾಲ್ತುಳಿತ ದುರ್ಘಟನೆ ಮರೆಮಾಚಲು ಮತ್ತೊಮ್ಮೆ ಜಾತಿಗಣತಿ ಮಾಡಲು ಸರ್ಕಾರ ನಿರ್ಧರಿಸಿದೆ. ಹಿಂದಿನ ಗಣತಿಗೆ 167 ಕೋಟಿ ರು. ವೆಚ್ಚವಾಗಿದ್ದು, ಈ ಬಗ್ಗೆ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.
ಎಲ್ಲರ ಬಂಧನ ಏಕಿಲ್ಲ?: ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಬೇಕು ಎಂದು ಆರ್ಸಿಬಿ ತಂಡದವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ. ಆದರೆ ಡಿಪಿಎಆರ್ ಕಾರ್ಯದರ್ಶಿಗಳು ‘ಎಲ್ಲರೂ ಚಿನ್ನಸ್ವಾಮಿ ಸ್ಟೇಡಿಯಂಗೆ ಬರಬೇಕು’ ಎಂದು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರೂ ಇದೇ ಹೇಳಿಕೆ ನೀಡಿದ್ದಾರೆ. ಇವರಿಬ್ಬರನ್ನೂ ಏಕೆ ಬಂಧಿಸಿಲ್ಲ. ಎಲ್ಲರಿಗೂ ಒಂದೇ ಕಾನೂನಲ್ಲವೇ ಎಂದು ಪ್ರಶ್ನಿಸಿದರು.
ಹೆಸರಿಗಷ್ಟೇ ಡಾ.ಪರಮೇಶ್ವರ್ ಗೃಹ ಮಂತ್ರಿಗಳಾಗಿದ್ದಾರೆ, ಅವರ ಹೆಸರಲ್ಲಿ ಮುಖ್ಯಮಂತ್ರಿಗಳು ಅಧಿಕಾರ ಚಲಾಯಿಸುತ್ತಿದ್ದಾರೆ. ಆದರೆ ಡಾ.ಪರಮೇಶ್ವರ್ ರಿಗೆ ಅಧಿಕಾರ ಕೊಟ್ಟರೆ ತಾನೇ ಅವರು ಕಾರ್ಯನಿರ್ವಹಿಸಲು ಸಾಧ್ಯ. ಒಬ್ಬ ಅನುಭವಿ ಹಾಗೂ ಕಾರ್ಯದಕ್ಷತೆ ಇರುವ ಪರಮೇಶ್ವರ್ ರಿಗೆ ಸಂಪೂರ್ಣವಾಗಿ ಅವರ ಖಾತೆಯ ಅಧಿಕಾರ ನಿರ್ವಹಿಸಲು ಬಿಟ್ಟಿದ್ದರೆ ಮತ್ತು ಚಿನ್ನಸ್ವಾಮಿ ಸ್ಠೇಡಿಯಂ ಬಳಿ ಜನ ಸೇರಿದಾಗ ಅವರನ್ನು ಸ್ಟೇಡಿಯಂ ಒಳಗೆ ಬಿಟ್ಟಿದ್ದರೆ ಎಲ್ಲ ಅಭಿಮಾನಿಗಳು ಕುಳಿತು ಮತ್ತು ನಿಂತುಕೊAಡು ತಮ್ಮ ನೆಚ್ಚಿನ ಕ್ರಿಕೇಟ್ ಆಟಗಾರರನ್ನು ನೋಡಿ ಕೊಂಡು ತೆರಳುತ್ತಿದ್ದರು.ಆಗ ಈ ಅನಾಹುತವಾಗಿ ೧೧ ಜನ ಸಾಯುತ್ತಿರಲಿಲ್ಲ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಮಾತನಾಡಿ, ಹೆಣದ ಮೇಲೆ ರಾಜಕೀಯವೆಂದು ಟೀಕಿಸುವ ಕಾಂಗ್ರೆಸ್ಸಿಗರಿಗೆ ತಪ್ಪಿನ ಅರಿವಾಗಿದೆ. ಪಶ್ಚಾತ್ತಾಪ ಪಡುವ ಬದಲು ಪೊಲೀಸರ ಮೇಲೆ, ನಂತರ ಕೆಎಸ್ಸಿಎ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಮುಂದೆ ಅದು ವಿಧಾನಸೌಧಕ್ಕೂ ಬಂದರೆ ಅಚ್ಚರಿಪಡಬೇಕಾಗಿಲ್ಲ. ಉದ್ಯಮಿ ಮಲ್ಯ ಅವರು ತಮ ವಿಸ್ಕಿ ಬ್ರಾಂಡ್ ಪ್ರಚಾರಕ್ಕಾಗಿ ತಂಡಕ್ಕೆ ಆರ್ಸಿಬಿ ಎಂದು ಹೆಸರಿಟ್ಟಿದ್ದರು. ಈಗ ಸಿಎಂ ಡಿಸಿಎಂಗಳೇ ಹೊಸ ರಾಯಭಾರಿಗಳಾಗಿದ್ದಾರೆ ಎಂದು ಟೀಕಿಸಿದರು. ಕ್ರಿಕೆಟ್ ಅಭಿಮಾನಿಗಳು ಮೃತಪಟ್ಟಿದ್ದಾರೆಂಬ ಮಾಹಿತಿ ಇದ್ದರೂ, ಕಾರ್ಯಕ್ರಮ ಮುಂದುವರೆಸಿದ್ದು, ಟ್ರೋಫಿಗೆ ಮುತ್ತಿಟ್ಟಿದ್ದು, ನಂತರ ಕೆಎಸ್ಸಿಎಯಲ್ಲಿ ಒಂದು ಕೋಟಿ ರೂ. ಪಟಾಕಿ ಸಿಡಿಸಿದ್ದನ್ನು ನೋಡಿದರೆ, ಮಾನವೀಯತೆ ಅಧೋಗತಿಗೆ ಇಳಿದಿದೆ ಎಂಬುದು ಗೊತ್ತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಸರ್ಕಾರದ ಕುತ್ತಿಗೆಗೆ ಬರುತ್ತಿದ್ದಂತೆಯೇ ಕೆಎಸ್?ಸಿಎ ಬಲಿಪಶು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಇದರ ನಡುವೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೆರಿಗೆ ಮತ್ತು ಜಾಹೀರಾತಿನ ಬಾಕಿ ನೆಪದಲ್ಲಿ ಬಿಬಿಎಂಪಿ ಮೂಲಕ ಕೆಎಸ್ಸಿಎ ವಿರುದ್ಧ ಬೊಟ್ಟು ಮಾಡಿ ತಮ ತಪ್ಪನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರಲ್ಲದೇ, ತಪ್ಪು ಮಾಡಿ ಈಗ ಕೈತೊಳೆದುಕೊಳ್ಳಲು ಸಾಧ್ಯವಿಲ್ಲ. ನಾ ಮುಂದು ತಾ ಮುಂದು ಎಂಬಂತೆ ಪೈಫೋಟಿಗೆ ಬಿದ್ದು, ಆರ್ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ ಮಾಡಿ ೧೧ ಜನರನ್ನು ನೀವು ಕೊಂದಿದ್ದೀರಿ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಿರ್ಗಮಿತ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ,ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎಸ್.ಮುರಳೀಧರ್, ಕೆ.ಬಿ.ಮುರಳಿ, ಮಧು ಸೂಧನ ನಾರಾಯಣ , ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಮುಖಂಡರಾದ ಡಾ.ಹೆಚ್.ಎಸ್.ಮುರಳೀಧರ್, ವೇಣುಗೋಪಾಲ್, ಸುರೇಂದ್ರಗೌಡ, ಅನು ಆನಂದ್, ಪ್ರೇಮಲೀಲಾ, ಕಲಾವತಿ, ನಾಗರಾಜ್, ರಾಮಣ್ಣ, ಅಶೋಕ್ ಕುಮಾರ್,ಮಧುಚಂದ್ರ,ಶ್ರೀನಾಥ್, ಎಬಿಕೆ ಬಾಲು ಮತ್ತಿತರರು ಇದ್ದರು.