ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಶಾಲಾ ಪ್ರಾರಂಭೊತ್ಸವಕ್ಕೆ ಚಾಲನೆ ನೀಡಿದ ಶಾಸಕ ಸುಬ್ಬಾರೆಡ್ಡಿ

ತಾಲ್ಲೂಕಿನ ಕಸಬಾ ಹೋಬಳಿ ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ 1ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. ಈ ವೇಳೆ ತಾವೇ ಮುಂದೆ ನಿಂತು ವಿದ್ಯಾರ್ಥಿ ಗಳಿಗೆ ಸಿಹಿ ತಿನ್ನಿಸಿ, ಗುಲಾಬಿ ಹೂವು ನೀಡಿ,ಶಾಲು ಹೊದಿಸಿ ಆತ್ಮೀಯ ವಾಗಿ ಸನ್ಮಾನಿಸುವ ಮೂಲಕ ಸ್ವಾಗತಿಸಿದರು

ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಶಾಲಾ ಪ್ರಾರಂಭೊತ್ಸವಕ್ಕೆ ಚಾಲನೆ

Profile Ashok Nayak Jun 3, 2025 1:38 PM

ಬಾಗೇಪಲ್ಲಿ: ತಾಲ್ಲೂಕಿನ ಕಸಬಾ ಹೋಬಳಿ ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ 1ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. ಈ ವೇಳೆ ತಾವೇ ಮುಂದೆ ನಿಂತು ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಗುಲಾಬಿ ಹೂವು ನೀಡಿ,ಶಾಲು ಹೊದಿಸಿ ಆತ್ಮೀಯ ವಾಗಿ ಸನ್ಮಾನಿಸುವ ಮೂಲಕ ಸ್ವಾಗತಿಸಿದರು.

ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸವಲತ್ತನ್ನು ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.

ಮೊದಲ ದಿನವೇ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ತಹಶೀಲ್ದಾರ್ ಮನೀಷಾ ಎನ್.ಪತ್ರಿ, ಇಒ ಜಿ.ವಿ.ರಮೇಶ್, ಬಿಇಒ ಎನ್.ವೆಂಕಟೇಶಪ್ಪ ಪಠ್ಯಪುಸ್ತಕ, ಸಮವಸ್ತ್ರ,ಬಾಳೆ ಹಣ್ಣು, ಮೊಟ್ಟೆ,ಇತರೆ ಸಾಮಾಗ್ರಿಗಳನ್ನು ವಿತರಿಸಿದರು.

ಇದನ್ನೂ ಓದಿ: Chikkanayakanahalli News: ಸಂಪೂರ್ಣ ಅಧಿಕಾರ ನಿಮ್ಮ ಕೈಯಲ್ಲಿದೆ, ಪಕ್ಷಾತೀತವಾಗಿ ಪಂಚಾಯಿತಿಗಳ ಅಭಿವೃದ್ಧಿಗೆ ಒತ್ತು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು

ದಾನಿಗಳಾದ ಲಕ್ಷ್ಮಿನಾರಾಯಣರೆಡ್ಡಿ ಅವರು 1.40 ಲಕ್ಷವೆಚ್ಚದಲ್ಲಿ ಶಾಲೆಗೆ ಸುಣ್ಣ, ದುರಸ್ತಿ, ಟೇಬಲ್, ಕುರ್ಚಿ ನೀಡಿದ್ದರು. ಧನ ಸಹಾಯ ಮಾಡಿದ ದಾನಿಗಳಿಗೆ  ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಶಾಲು ಹೊದಿಸಿ ಸನ್ಮಾನ ಮಾಡಿದರು.

ಈ ವೇಳೆ ಮಾತನಾಡಿದ ಶಾಸಕ ಸುಬ್ಬಾರೆಡ್ಡಿ ವಿದ್ಯಾರ್ಥಿ ಜೀವನದಲ್ಲಿ ಸಮಯಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡಾಗ ಮಾತ್ರ ಉತ್ತಮ ಅಂಕಗಳಿಸಲು ಸಾಧ್ಯವಾಗುತ್ತದೆ. ಸರ್ಕಾರಿ ಶಾಲೆ ಗಳಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉತ್ತಮವಾಗಿ ಬರೆಯಲು, ಓದಲು ಕಲಿಸಬೇಕಾಗಿದೆ ಎಂದು ಹೇಳಿದರು.

ತಹಶೀಲ್ದಾರ್ ಮನೀಷಾ ಎನ್.ಪತ್ರಿ ಮಾತನಾಡಿ, 'ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಅನೇಕರು ಮಹನೀಯರು, ಉನ್ನತ ಸ್ಥಾನಮಾನದಲ್ಲಿ ಇದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿ ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಆಕರ್ಷಣೆ ಮಾಡಲು, ಬಣ್ಣದ ಹಾಳೆಗಳಲ್ಲಿ ಟೋಪಿ, ಹಾರ ಹಾಕಿ, ಗುಲಾಬಿ ಹೂವು ನೀಡಿ ಸ್ವಾಗತಿಸಿದರು.

ತಾಲ್ಲೂಕಿನ ಕಸಬಾ ಹೋಬಳಿ ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ೧ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.

ಇಒ ಜಿ.ವಿ.ರಮೇಶ್, ತಾಲ್ಲೂಕು ಸಮನ್ವಯಾಧಿಕಾರಿ ಆರ್.ವೆಂಕಟರಾಮಪ್ಪ, ಸಿಡಿಪಿಒ ರಾಮ ಚಂದ್ರ, ಆರ್.ಹನುಮಂತರೆಡ್ಡಿ, ಶಂಕರಪ್ಪ, ಬಿ.ಎನ್.ನಟರಾಜ್, ಜಿ.ಆರ್.ರಮೇಶ್, ಎಲ್.ಬೈರೆಡ್ಡಿ, ಎನ್.ಶಿವಪ್ಪ, ಸರಸ್ವತಮ್ಮ, ಶಿವರಾಮರೆಡ್ಡಿ, ಉಮಾದೇವಿ, ವಿಶ್ವನಾಥ್, ಫಕೃದ್ದೀನ್, ಬಿ.ಎಂ.ಪ್ರಮೀಳ ಇದ್ದರು.