Chikkaballapur News: ಶಿಕ್ಷಣ ವ್ಯವಸ್ಥೆಯಲ್ಲಿ ಪೋಷಕರು ಸಕ್ರಿಯ ಪಾತ್ರ ವಹಿಸಬೇಕಾದ್ದು ಅತ್ಯಗತ್ಯ: ಸದ್ಗುರು ಶ್ರೀ ಮಧುಸೂದನ ಸಾಯಿ
ಶಿಕ್ಷಣ ವ್ಯವಸ್ಥೆಗೆ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೇ ಆಧಾರ ಸ್ತಂಭಗಳು. ಇಲ್ಲಿಯವರೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಮಾತ್ರವೇ ಸಂಯೋಜಿಸಲಾಗುತ್ತಿತ್ತು. ನಮ್ಮಲ್ಲಿ ಪೋಷಕರು ಸಹ ಈ ವ್ಯವಸ್ಥೆಯಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎನ್ನುವ ಚಿಂತನೆ ಇತ್ತು. ಅದೇ ರೀತಿ ನಮ್ಮ ಶಿಕ್ಷಣ ವ್ಯವಸ್ಥೆ ರೂಪಿಸಿದೆವು

-

ಚಿಕ್ಕಬಳ್ಳಾಪುರ : ಸೇವೆಗಾಗಿ ಸತ್ಯ ಸಾಯಿ ಗ್ರಾಮಕ್ಕೆ ಬರುವ ಪೋಷಕರು ತಮ್ಮಲ್ಲಿರುವ ಕೆಟ್ಟ ಅಭ್ಯಾಸಗಳನ್ನು ಬಿಟ್ಟಿರುವ ಸಾಕಷ್ಟು ನಿದರ್ಶನಗಳಿವೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಮಹೋತ್ಸವ'ದ ೬೪ನೇ ದಿನವಾದ ಶನಿವಾರ ಆಶೀರ್ವಚನ ನೀಡಿದ ಸದ್ಗುರು, ವೈದ್ಯಕೀಯ ವಿದ್ಯಾರ್ಥಿಗಳು, ಪ್ಯಾರಾ ಮೆಡಿಕಲ್ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳ ಪೋಷಕರು ಇಲ್ಲಿಗೆ ಬಂದು ಸೇವೆ ಮಾಡುವ ಮೂಲಕ ತಮ್ಮ ಸಮಯ ಮತ್ತು ಕೌಶಲ್ಯ ವಿನಿಯೋಗಿಸಬೇಕೆಂದು ಹೇಳಿದರು.
ಶಿಕ್ಷಣ ವ್ಯವಸ್ಥೆಗೆ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೇ ಆಧಾರ ಸ್ತಂಭಗಳು. ಇಲ್ಲಿಯವರೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಮಾತ್ರವೇ ಸಂಯೋಜಿಸಲಾಗುತ್ತಿತ್ತು. ನಮ್ಮಲ್ಲಿ ಪೋಷಕರು ಸಹ ಈ ವ್ಯವಸ್ಥೆಯಲ್ಲಿ ಸಕ್ರಿಯ ಪಾತ್ರ ವಹಿಸಬೇಕು ಎನ್ನುವ ಚಿಂತನೆ ಇತ್ತು. ಅದೇ ರೀತಿ ನಮ್ಮ ಶಿಕ್ಷಣ ವ್ಯವಸ್ಥೆ ರೂಪಿಸಿದೆವು ಎಂದು ವಿವರಿಸಿದರು.
ಇದನ್ನೂ ಓದಿ: chitradurga News: ಒಂದೇ ದಿನ ಇಬ್ಬರು ಯುವತಿಯರನ್ನು ಮದುವೆಯಾದ ವರ ಮಹಾಶಯ
ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರು ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವ್ಯವಸ್ಥೆಗಾಗಿ ಸಾಫ್ಟ್ವೇರ್ ಅಭಿವೃದ್ಧಿಪಡಿಸಲಾಗಿದೆ. ಸೇವೆಯ ಅವಕಾಶಗಳಿಗಾಗಿ ಸ್ಲಾಟ್ಗಳನ್ನು ಮಾಡಲಾಗಿದೆ. ಇಲ್ಲಿಗೆ ಬರುವ ಪೋಷಕರ ಪ್ರಯಾಣಕ್ಕಾಗಿ ಮುಂಗಡ ಬುಕಿಂಗ್ ಕೂಡ ಮಾಡಲಾಗುತ್ತದೆ. ಭಕ್ತರಲ್ಲಿಯೂ ಹಲವರಿಗೆ ದೇಣಿಗೆ ನೀಡಲು ಸಾಧ್ಯವಾಗುವುದಿಲ್ಲ. ಅಂಥವರು ಶರೀರ ಶ್ರಮದ ಮೂಲಕ ಸೇವೆ ಸಲ್ಲಿಸಬಹುದು. ಇಲ್ಲಿಗೆ ಬಂದವರಲ್ಲಿ ಕೆಲವರು ಧೂಮಪಾನ, ಮದ್ಯಪಾನದಂತಹ ಕೆಲವು ಕೆಟ್ಟಭ್ಯಾಸಗಳಿಂದ ದೂರ ಇರುವುದಾಗಿ ಹೇಳಿದ್ದಾರೆ ಎಂದು ಅನುಭವ ಹಂಚಿಕೊಂಡರು.
ಅತಿಥಿ ರಾಷ್ಟ್ರ ಜಾಂಬಿಯಾ ಬಗ್ಗೆ ಮಾತನಾಡಿ, ಜಾಂಬಿಯಾದಲ್ಲಿ ಶಿಕ್ಷಣ ಮತ್ತು ಆರೋಗ್ಯವನ್ನು ಉತ್ತೇಜಿಸಲು 'ಒಂದು ಜಗತ್ತು ಒಂದು ಕುಟುಂಬ ಮಿಷನ್'ನಿಂದ ಕೈಲಾದಷ್ಟು ಮಾಡುತ್ತೇವೆ ಎಂದು ಹೇಳಿದರು.
'ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ'ಗೆ ಬೆಂಬಲ ನೀಡುತ್ತಿರುವ 'ರಂಕಾ ಗ್ರೂಪ್'ಗೆ 'ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ' ನೀಡಿ ಗೌರವಿಸಲಾಯಿತು. ರಂಕಾ ಸ್ಟೀಲ್ಸ್ ಕಂಪನಿಯ ನಿರ್ದೇಶಕರಾದ ಅಶೋಕ್ ರಂಕಾ ಪ್ರಶಸ್ತಿ ಸ್ವೀಕರಿಸಿದರು.
ಎಂಎ???ನ್ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಮಣ್ಣೆ ಸತ್ಯನಾರಾಯಣ ರೆಡ್ಡಿ ಹಾಗೂ ಮಣಿಪಾಲ್ ಸಮೂಹದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಗೌತಮ್ ಪೈ ಅವರಿಗೆ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ನಾಯಕತ್ವ' ಪುರಸ್ಕಾರ ನೀಡಿ ಗೌರವಿಸಲಾಯಿತು. ಜಾಂಬಿಯಾ ದೇಶದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಶ್ರಮಿಸು ತ್ತಿರುವ ಲೇಟ್ ಡಾ ಕೆನ್ನೆತ್ ಡೇವಿಡ್ ಕೌಂಡಾ ಮತ್ತು ಕೌಂಡಾ ಕುಟುಂಬಕ್ಕೆ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಮಾನವೀಯ ಪುರಸ್ಕಾರ' ಘೋಷಿಸಲಾಯಿತು. ಡಾ ಕೆನ್ನೆತ್ ಅವರ ಮೊಮ್ಮಗ ಮಝುಭಾ ಕೌಂಡಾ ಅವರು ಪ್ರಶಸ್ತಿ ಸ್ವೀಕರಿಸಿದರು. ಜಾಂಬಿಯಾ ದೇಶದ ಪ್ರತಿನಿಧಿ ಕಸಂಬಾ ಸಿಕಾಪಿಜ್ಯೆ ಅವರು ತಮ್ಮ ದೇಶದ ಮಾಹಿತಿಯನ್ನು ಹಂಚಿಕೊಂಡರು.