Chikkaballapur News: M.Sc PHYSICSನಲ್ಲಿ ಆರು ಚಿನ್ನದ ಪದಕ ಪಡೆದು ಮೊದಲ ರ್ಯಾಂಕ್ ಪಡೆದ ರೂಫಿಯಾ.ಕೆ.ಎಂ
ಚಿಂತಾಮಣಿ ಹಾಗೂ ಜಿಲ್ಲೆಯ ಹೆಸರು ಕೀರ್ತಿ ತಂದಿದ ಕಾರಣ ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಕಾಲೇಜ್ ಹಿಂಭಾಗ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿ ಗಳ ಚಾಲನೆ ಕಾರ್ಯಕ್ರಮದಲ್ಲಿ ಕೋಲಾರ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ರವರು ರೂಫಿಯಾ.ಕೆ.ಎಂ ವಿದ್ಯಾರ್ಥಿನಿಗೆ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು


ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಸ್ತೆನಹಳ್ಳಿ,ಕೈವಾರದಲ್ಲಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿನಿ ರೂಫಿಯಾ.ಕೆ.ಎಂ ಇವರು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ M.SC PHYSICS ನಲ್ಲಿ ಆರು ಚಿನ್ನದ ಪದಕಗಳನ್ನು ಪಡೆದು ರ್ಯಾಂಕ್ ಮೊದಲ ಗಳಿಸಿದ್ದು.
ಇದನ್ನೂ ಓದಿ: Chikkaballapur News: ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯರಾಗಿ ನೇಮಕವಾದ ಮಳ್ಳೂರು ಶಿವಣ್ಣನವರಿಗೆ ಸನ್ಮಾನ
ಇವರ ಈ ಸಾಧನೆಯಿಂದ ಚಿಂತಾಮಣಿ ಹಾಗೂ ಜಿಲ್ಲೆಯ ಹೆಸರು ಕೀರ್ತಿ ತಂದಿದ ಕಾರಣ ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಕಾಲೇಜ್ ಹಿಂಭಾಗ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿ ಗಳ ಚಾಲನೆ ಕಾರ್ಯಕ್ರಮದಲ್ಲಿ ಕೋಲಾರ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ರವರು ರೂಫಿಯಾ.ಕೆ.ಎಂ ವಿದ್ಯಾರ್ಥಿನಿಗೆ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿ ದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಿಟಿ ಶ್ರೀನಿವಾಸ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಮಲ್ಲೇಶ್ ಬಾಬು,ಜಿಲ್ಲಾಧಿಕಾರಿ ರವೀಂದ್ರ,ಎಂ ಕೆ ಬಿ ಶಾಲೆಯ ಮುಖ್ಯ ಶಿಕ್ಷಕಿ ಮಹಬೂಬ್ ಜಾನ್, ಮುಖಂಡರಾದ ಶೇಕ್ ಸಾದಿಕ್ ರಜ್ವಿ,ಇಂತಿಯಾಜ್,ಜಿಲ್ಲಾ ಪಂಚಾಯತಿ ಅಧಿಕಾರಿ ನವೀನ್ ಭಟ್,ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ್, ಸಮೀವುಲ್ಲಾ, ಬಾಬು ಕೋರಲಪರ್ತಿ ಸೇರಿದಂತೆ ಮತ್ತಿತರರು ಇದ್ದರು.