ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಜಮೀನು ವಿಚಾರಕ್ಕೆ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

Murder Case: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭೂಮಿಶೆಟ್ಟಿಹಳ್ಳಿ ಗ್ರಾಮದಲ್ಲಿ ಯುವಕನ ಕೊಲೆ ನಡೆದಿದೆ. ಜಮೀನು ವಿಚಾರಕ್ಕೆ ಒಂದೇ ಕುಟುಂಬದ ಇಬ್ಬರ ಯುವಕರ ನಡುವೆ ಗಲಾಟೆ ನಡೆದಿದ್ದು, ಒಬ್ಬ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಜಮೀನು ವಿಚಾರಕ್ಕೆ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

ಕೊಲೆಯಾದ ಯುವಕ ಶಿವ ಮತ್ತು ಆರೋಪಿ ನರೇಶ್‌

Profile Prabhakara R May 31, 2025 4:11 PM

ಚಿಂತಾಮಣಿ: ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭೂಮಿಶೆಟ್ಟಿಹಳ್ಳಿ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಒಂದೇ ಕುಟುಂಬದ ಇಬ್ಬರ ಯುವಕರ ನಡುವೆ ಗಲಾಟೆ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ (Murder Case) ಶುಕ್ರವಾರ ರಾತ್ರಿ ನಡೆದಿದೆ. ಶಿವ ಆಲಿಯಾಸ್‌ ಶಿವಶಂಕರ (35) ಮೃತ ಯುವಕ, ನರೇಶ್ (27) ಕೊಲೆ ಆರೋಪಿಯಾಗಿದ್ದಾನೆ. ಕೊಲೆಯಾದ ಶಿವ ಮತ್ತು ಈತನ ತಾಯಿ ತಮ್ಮನ ಮಗ ನರೇಶ್ ನಡುವೆ ಜಮೀನಿನ ವಿವಾದ ಇದ್ದು, ನಿವೇಶನ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ನರೇಶ್ ಮಾರಕ್ರಾಸ್ತ್ರಗಳಿಂದ ಹೊಟ್ಟೆಯ ಭಾಗಕ್ಕೆ ತಿವಿದ ಪರಿಣಾಮ ಶಿವ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕೊಲೆ ಆರೋಪಿ ನರೇಶ್ ಪರಾರಿಯಾಗಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ಪೋಲೀಸರು ಭೇಟಿ ನೀಡಿ ಮೃತ ಶವವನ್ನು ಮರಣಾಂತರ ಪರೀಕ್ಷೆಗಾಗಿ ಚಿಂತಾಮಣಿ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ರಕ್ಷಣಾಧಿಕಾರಿ ಕುಶಾಲ್ ಚೌಕ್ಸೆ ಅವರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮೃತನ ಶವ ಪರಿಶೀಲಿಸಿ, ಕೊಲೆ ನಡೆದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡಿವೈಎಸ್ಪಿ ಪಿ.ಮುರಳೀಧರ್, ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಕೆಂಚಾರ್ಲಹಳ್ಳಿ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಮತ್ತು ಸಿಬ್ಬಂದಿ ಇದ್ದರು.

ಮೃತನ ಪತ್ನಿ ಅಂಬಿಕಾ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಗಂಡ ಶಿವ ಹಾಗೂ ನರೇಶ್ ನಡುವೆ ಮೂರು ತಿಂಗಳಿನಿಂದ ಸೈಟ್ ವಿಚಾರಕ್ಕೆ ವಿವಾದ ಇತ್ತು. ರಾತ್ರಿ ಏಕಾಏಕಿ ನರೇಶ್ ನನ್ನ ಗಂಡನನ್ನು ಮಚ್ಚಿನಿಂದ ಹಲ್ಲೆ ಮಾಡಿ ಕೊಂದಿದ್ದಾನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Lokayukta Raid: ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ (Micro Finance harassment) ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ (self harmed) ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ (coorg news) ನಡೆದಿದೆ. ಮಡಿಕೇರಿಯ (Madikeri) ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಕ್ರೋಫೈನಾನ್ಸ್‌ ಕಿರುಕುಳ ಇತ್ತೀಚೆಗೆ ರಾಜ್ಯದಲ್ಲಿ ಅಧಿಕವಾಗಿದ್ದು, ಹಲವಾರು ಸಾವುಗಳ ವರದಿಯಾಗಿದ್ದವು. ಇದನ್ನು ಗಮನಿಸಿದ್ದ ರಾಜ್ಯ ಸರಕಾರ ಮೈಕ್ರೋಫೈನಾನ್ಸ್‌ ವಿಧೇಯಕವನ್ನು ಮಂಡಿಸಿ ಅಂಗೀಕರಿಸಿತ್ತು. ಅದಕ್ಕೆ ರಾಜ್ಯಪಾಲರು ಕಳೆದ ಫೆಬ್ರವರಿಯಲ್ಲಿ ಅಂಕಿತ ಹಾಕಿದ್ದರು. ಈ ಸುಗ್ರೀವಾಜ್ಞೆಯು, ಕಿರುಕುಳ ನೀಡಿದವರಿಗೆ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ಮತ್ತು ಐದು ಲಕ್ಷ ರೂ.ಗಳವರೆಗೆ ವಿಸ್ತರಿಸಬಹುದಾದ ದಂಡವನ್ನು ವಿಧಿಸಲು ಅವಕಾಶ ಹೊಂದಿದೆ. ಈ ಸುಗ್ರೀವಾಜ್ಞೆಯ ಅಡಿಯಲ್ಲಿರುವ ಅಪರಾಧಗಳು ಜಾಮೀನು ರಹಿತವಾಗಿವೆ.

ಇದನ್ನೂ ಓದಿ: Micro Finance harassment: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರ ಬಲಿ, ನಾಲೆಗೆ ಹಾರಿ ಆತ್ಮಹತ್ಯೆ

ಈ ವಿಧೇಯಕದ ಪ್ರಕಾರ, ಸಾಲಗಾರರು ಅಥವಾ ಅವರ ಕುಟುಂಬ ಸದಸ್ಯರ ಮೇಲೆ ಬಲವಂತದ ಕ್ರಮಗಳನ್ನು ಹೇರುವುದು, ಅಡ್ಡಿಪಡಿಸುವುದು, ಹಿಂಸೆ ನೀಡುವುದು, ಅವಮಾನಿಸುವುದು, ಬೆದರಿಸುವುದು ಅಥವಾ ಸಾಲಗಾರರು, ಅವರ ಕುಟುಂಬ ಸದಸ್ಯರನ್ನು ನಿರಂತರವಾಗಿ ಹಿಂಬಾಲಿಸುವುದು ಅಥವಾ ಅವರ ಒಡೆತನದ ಅಥವಾ ಬಳಸಿದ ಯಾವುದೇ ಆಸ್ತಿಯಲ್ಲಿ ಹಸ್ತಕ್ಷೇಪ ಮಾಡುವುದನ್ನು ತಡೆಯುವುದು ಶಿಕ್ಷಾರ್ಹ ಅಪರಾಧಗಳಾಗಿವೆ. ಸಾಲಗಾರರು ವಾಸಿಸುವ ಮನೆ ಅಥವಾ ಇತರ ಸ್ಥಳಗಳಿಗೆ ಆಗಾಗ್ಗೆ ಹೋಗುವುದು, ಹಣವನ್ನು ವಸೂಲಿ ಮಾಡಲು ಹೊರಗುತ್ತಿಗೆ ನೀಡುವುದು ಮತ್ತು ಸಾಲಗಾರರಿಂದ ಯಾವುದೇ ದಾಖಲೆಯನ್ನು ಬಲವಂತವಾಗಿ ತೆಗೆದುಕೊಳ್ಳುವುದು ಸಹ ದಂಡದ ಕ್ರಮಕ್ಕೆ ಆಹ್ವಾನ ನೀಡುತ್ತದೆ.