ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Road Accident: ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತರ ವಿವರ ಇಲ್ಲಿದೆ

ಚಿಕ್ಕಮಗಳೂರು ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಮೃತಪಟ್ಟವರನ್ನು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ, ವೀಣಾ (42), ಸುನೀಲ್ (40), ಪುಟ್ಟಮ್ಮ(55), ಲೋಲಾಕ್ಷಿ, ಯಶೋಧಾ(60) ಹಾಗೂ ಬಾಲಕಿ ಬೆಳ್ಳಿ(5) ಎಂದು ಗುರುತಿಸಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತರ ವಿವರ ಇಲ್ಲಿದೆ

ಅಪಘಾತದ ದೃಶ್ಯ -

ಹರೀಶ್‌ ಕೇರ
ಹರೀಶ್‌ ಕೇರ Apr 16, 2026 10:10 AM

ರಾಯಚೂರು, ಏ.16: ಆಂಧ್ರಪ್ರದೇಶದ (Andhra Pradesh) ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತಪಟ್ಟವರನ್ನು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ, ವೀಣಾ (42), ಸುನೀಲ್ (40), ಪುಟ್ಟಮ್ಮ(55), ಲೋಲಾಕ್ಷಿ, ಯಶೋಧಾ(60) ಹಾಗೂ ಬಾಲಕಿ ಬೆಳ್ಳಿ(5) ಎಂದು ಗುರುತಿಸಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಚಿಕ್ಕಮಗಳೂರು ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲುದೇವಕುಂಟ ಬಳಿ ಎದುರುಗಡೆಯಿಂದ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್, ಬೊಲೆರೊ ವಾಹನಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರು ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಉಳಿದ 13 ಭಕ್ತರನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಿಂದಾಗಿ ಮಂತ್ರಾಲಯಕ್ಕೆ ಹೋಗುವ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ಸದ್ಯ ಘಟನೆ ಸಂಬಂಧ ಟ್ಯಾಂಕರ್ ಚಾಲಕನನ್ನು ಮಂತ್ರಾಲಯ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Chikkaballapuara news: ಮಂತ್ರಾಲಯ ಬಳಿ ಭೀಕರ ಅಪಘಾತ, ಚಿಕ್ಕಮಗಳೂರಿನ 8 ಮಂದಿ ಭಕ್ತರು ದುರ್ಮರಣ