ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM- DCM Meeting: ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಬ್ರೇಕ್‌ಫಾಸ್ಟ್‌ ಬಳಿಕ ಸಿಎಂ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಜಂಟಿ ಹೇಳಿಕೆ

ನಮ್ಮ ನಡುವೆ ಭಿನ್ನಾಭಿಪ್ರಾಯ ಇರಲಿಲ್ಲ. ನಾವು ಒಗ್ಗಟ್ಟಾಗಿ ಸರಕಾರ ಮುನ್ನಡೆಸಲಿದ್ದೇವೆ. ನಮ್ಮ ಎಲ್ಲ ಶಾಸಕರೂ ಒಗ್ಗಟ್ಟಾಗಿದ್ದಾರೆ. ಅಭಿಪ್ರಾಯ ವ್ಯಕ್ತಪಡಿಸಿದ ಕೂಡಲೇ ಭಿನ್ನಾಭಿಪ್ರಾಯ ಎಂದರ್ಥವಲ್ಲ. 2028ಕ್ಕೂ ನಾವು ಒಟ್ಟಿಗೇ ಕೆಲಸ ಮಾಡುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ನಾವು ಯಾವಾಗಲೂ ಬ್ರದರ್ಸೇ. ನಮ್ಮದು ಒಂದೇ ವಿಚಾರ- ಸಿದ್ಧಾಂತ ಎಂದು ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿಕೆ ನೀಡಿದರು.

ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ, ಡಿಸಿಎಂ ಜಂಟಿ ನುಡಿ

ಸಿಎಂ- ಡಿಸಿಎಂ ಪತ್ರಿಕಾಗೋಷ್ಠಿ -

ಹರೀಶ್‌ ಕೇರ
ಹರೀಶ್‌ ಕೇರ Dec 2, 2025 11:54 AM

ಬೆಂಗಳೂರು, ಡಿ.02: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಇಂದು ಮತ್ತೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ (CM- DCM Meeting) ನಡೆಸಿದ್ದಾರೆ. ಆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ನಾವು ಯಾವಾಗಲೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್‌ ಸೂಚನೆಯಂತೆ ನಡೆಯುತ್ತೇವೆ. ಪಕ್ಷದ ವಿಚಾರ ಹಾಗು ಬೆಳಗಾವಿ ಅಧಿವೇಶನದ ಕುರಿತು ನಾವು ಚರ್ಚಿಸಿದ್ದೇವೆ ಎಂದು ಸಿಎಂ ಹೇಳಿದರು. ʼನಮ್ಮದು ಒಂದೇ ಧ್ವನಿ, ಒಂದೇ ಆಚಾರ- ವಿಚಾರʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

2028ಕ್ಕೂ ನಾವು ಒಟ್ಟಿಗೇ ಕೆಲಸ ಮಾಡುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ನಾವು ಯಾವಾಗಲೂ ಬ್ರದರ್ಸೇ. ನಮ್ಮದು ಒಂದೇ ವಿಚಾರ- ಸಿದ್ಧಾಂತ ಎಂದರು.

ಬ್ರೇಕ್ ಫಾಸ್ಟ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಇವತ್ತೋ ಮೊನ್ನೆಯೋ ಒಗ್ಗಟ್ಟಾಗಿರುವುದಲ್ಲ. ಯಾವತ್ತೂ ಒಗ್ಗಟ್ಟಾಗಿದ್ದೇವೆ. ಬ್ರೇಕ್ ಫಾಸ್ಟ್ ವೇಳೆ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ. ಡಿಸೆಂಬರ್ 8 ರಿಂದ ಬೆಳಗಾವಿ ಅಧಿವೇಶನ ಆರಂಭ ಆಗುತ್ತದೆ. ಅಧಿವೇಶನ ಹಿನ್ನೆಲೆಯಲ್ಲಿ ನಾವು ಚರ್ಚೆ ಮಾಡಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದ್ರೂ ಎದುರಿಸಿತ್ತೇವೆ ಎಂದು ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ನಮ್ಮ ಸರ್ಕಾರ ಯಾವಾಗಲು ರೈತರ ಪರ ಇರುತ್ತದೆ. ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರ ಜತೆ ಚರ್ಚೆ ಮಾಡಲಾಗಿದೆ. ರಾಜ್ಯದ ಸಮಸ್ಯೆ ಬಗ್ಗೆಯೂ ನಾನು ಡಿಸಿಎಂ ಚರ್ಚೆ ಮಾಡಿದ್ದೇವೆ. ರಾಜ್ಯದಲ್ಲಿ ಈ ಬಾರಿ ರೈತರು ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ ಎಂದು ಸಿಎಂ ತಿಳಿಸಿದರು.

CM- DCM Meeting: ಇಡ್ಲಿ-ನಾಟಿಕೋಳಿ ಸಾರು ಸವಿದ ಸಿದ್ದರಾಮಯ್ಯ; ಸಿಎಂ-ಡಿಸಿಎಂ ಸಭೆಯ Exclusive​ ಫೋಟೋಸ್‌ ಇಲ್ಲಿವೆ

ಈ ನಡುವೆ ನಾವು ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿದ್ದೇವೆ. ವೇಣುಗೋಪಾಲ್‌ ಅವರನ್ನು ನಾಳೆ ಮಂಗಳೂರಿನಲ್ಲಿ ಭೇಟಿಯಾಗಿದ್ದೇವೆ. ಸಮಯ ಸಿಕ್ಕರೆ ಸಂಪುಟ ವಿಸ್ತರಣೆ ವಿಚಾರ ಚರ್ಚಿಸಲಿದ್ದೇವೆ ಎಂದರು.

ನಮ್ಮ ನಡುವೆ ಭಿನ್ನಾಭಿಪ್ರಾಯ ಇರಲಿಲ್ಲ. ನಾವು ಒಗ್ಗಟ್ಟಾಗಿ ಸರಕಾರ ಮುನ್ನಡೆಸಲಿದ್ದೇವೆ. ನಮ್ಮ ಎಲ್ಲ ಶಾಸಕರೂ ಒಗ್ಗಟ್ಟಾಗಿದ್ದಾರೆ. ಅಭಿಪ್ರಾಯ ವ್ಯಕ್ತಪಡಿಸಿದ ಕೂಡಲೇ ಭಿನ್ನಾಭಿಪ್ರಾಯ ಎಂದರ್ಥವಲ್ಲ ಎಂದರು. ಇದೇ ವೇಳೆ, ಗತಿಸಿದ ಮಾಜಿ ಶಾಸಕ ಆರ್‌ವಿ ದೇವರಾಜ್‌ ಅವರಿಗೆ ಸಂತಾಪ ವ್ಯಕ್ತಪಡಿಸಿದರು. ಅವರ ಸಾವಿನಿಂದ ಪಕ್ಷಕ್ಕೆ ತುಂಬಲಾಗದ ನಷ್ಟವಾಗಿದೆ ಎಂದರು.

ಸಿಎಂ ಅವರಿಗೆ ಅವರದೇ ಆದ ಮೈಸೂರಿನ ಉಪಾಹಾರವನ್ನು ಒದಗಿಸಿದ್ದೇನೆ. ನಾವಿಬ್ಬರೂ ಬ್ರೇಕ್‌ಫಾಸ್ಟ್‌ ಸವಿದಿದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ವಿಚಾರ, ಎಂಎಲ್‌ಸಿಗಳನ್ನು ಆಯ್ಕೆ ಮಾಡುವ ವಿಚಾರವನ್ನು ಜೊತೆಯಾಗಿ ಚರ್ಚಿಸಿದ್ದೇವೆ ಎಂದು ಡಿಕೆ ಶಿವಕುಮಾರ್‌ ನುಡಿದರು. ಅವರೂ ಆರ್‌ವಿ ದೇವರಾಜ್‌ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

Karnataka Politics: ಸಿಎಂ ಸ್ವಾಗತಕ್ಕೆ ಡಿಕೆ ಶಿವಕುಮಾರ್ ಮನೆಯಲ್ಲಿ ಕಾಯ್ತಿದೆ ನಾಟಿ ಕೋಳಿ ಸಾರು!

ಬೆಳಗಿನ ಉಪಾಹಾರ ಸವಿಯಲು ಡಿಕೆಶಿ ನಿವಾಸಕ್ಕೆ ಆಗಮಿಸಿದ ಸಿಎಂ ಅವರನ್ನು ಡಿಕೆ ಸುರೇಶ್‌ ಹಾಗೂ ಶಿವಕುಮಾರ್‌ ಆತ್ಮೀಯವಾಗಿ ಬರಮಾಡಿಕೊಂಡರು. ಕಾವೇರಿ ನಿವಾಸದಿಂದ ಒಬ್ಬರೇ ಹೊರಟ ಸಿಎಂ ಬೆಳಗ್ಗೆ 9:40 ರ ವೇಳೆಗೆ ಡಿಕೆಶಿಯ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಿದರು.