Mangaluru News: ಪತ್ನಿ ಮೇಲೆಯೇ ಅತ್ಯಾಚಾರ ಎಸಗಲು ಪೊಲೀಸ್ ಪೇದೆಗೆ ಸಹಕರಿಸಿದ ಪತಿ; ಇಬ್ಬರು ಅರೆಸ್ಟ್
Physical Abuse: ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲವೇ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದು, ಬ್ಲ್ಯಾಕ್ಮೇಲ್ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜತೆ ಮಲಗಬೇಕು ಅಂತ ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಪತ್ನಿ ಮೇಲೆ ಅತ್ಯಾಚಾರ ಎಸಗಲು ಪೊಲೀಸ್ ಪೇದೆಗೆ ಸಹಕರಿಸದ ಆರೋಪ ಕೇಳಿಬಂದಿದೆ.

ಬಂಧಿತ ಆರೋಪಿ ಕಾನ್ಸ್ಟೇಬಲ್ ಚಂದ್ರನಾಯಕ್

ಮಂಗಳೂರು: ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆ ಪೊಲೀಸ್ ಕಾನ್ಸ್ಸ್ಟೇಬಲ್ನನ್ನು ಮಂಗಳೂರಿನ (Mangaluru News) ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಪತ್ನಿಯ ಮೇಲೆ ಅತ್ಯಾಚಾರ ಎಸಗಲು ಸಹಕರಿಸಿದ್ದ ಹಿನ್ನೆಲೆಯಲ್ಲಿ ಮಹಿಳೆಯ ಪತಿಯನ್ನೂ ಬಂಧಿಸಲಾಗಿದೆ. ಕಾವೂರು ಪೊಲೀಸ್ ಠಾಣೆ ಕಾನ್ಸ್ಟೇಬಲ್ ಚಂದ್ರನಾಯಕ್ ಬಂಧಿತ ಆರೋಪಿ. ಇದೇ ಪ್ರಕರಣದಲ್ಲಿ ಪತ್ನಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಗಂಡನನ್ನೂ ಅರೆಸ್ಟ್ ಮಾಡಲಾಗಿದೆ.
ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ಗೆ ಮಹಿಳೆ ದೂರು ನೀಡಿದ್ದರು. ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದಿದ್ದ. ಈ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜತೆ ಮಲಗಬೇಕು ಅಂತ ಟಾರ್ಚರ್ ಕೊಡುತ್ತಿದ್ದ. ಇದರಿಂದ ತುಂಬಾ ನೊಂದಿದ್ದ ಸಂತ್ರಸ್ತೆ ಪೊಲೀಸನ ಸಂಪರ್ಕ ಮಾಡಿದ್ದಾರೆ.
ಬೇರೆಯವರ ಮೂಲಕ ಕಾವೂರು ಪೊಲೀಸ್ ಚಂದ್ರನಾಯಕ್ ಪರಿಚಯವಾಗಿದೆ. ವಿಡಿಯೋ ಡಿಲೀಟ್ ಮಾಡಿಸುವಂತೆ ಚಂದ್ರನಾಯಕನಿಗೆ ಸಂತ್ರಸ್ತೆ ಮನವಿ ಮಾಡಿದ್ದರು. ಆ ಮೂಲಕ ಚಂದ್ರನಾಯಕ್ ತನ್ನ ಪೊಲೀಸ್ ಪವರ್ ಬಳಸಿ ವಿಡಿಯೋವನ್ನು ಡಿಲೀಟ್ ಮಾಡಿಸಿದ್ದ. ಬಳಿಕ ದಂಪತಿ ನಡುವೆ ರಾಜಿ ಮಾಡಿಸಿದ್ದ.
ಈ ಸುದ್ದಿಯನ್ನೂ ಓದಿ | Physical Abuse: ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ; ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರಿಂದಲೇ ಅತ್ಯಾಚಾರ!
ಈ ವೇಳೆ ಪೊಲೀಸ್ ಪೇದೆ, ಸಂತ್ರಸ್ತೆ ಪತಿ ಬಳಿ ವಿಶ್ವಾಸದಿಂದ ಇದ್ದ. ಪತಿಯ ಸಹಕಾರ ಪಡೆದು ಮಹಿಳೆಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಚಂದ್ರನಾಯಕ್ ಪದೇ ಪದೇ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ತನ್ನ ಮೇಲೆ ಅತ್ಯಾಚಾರ ಎಸಗಲು ಪತಿಯೇ ಸಹಕರಿಸಿದ್ದರಿಂದ ದಾರಿ ಕಾಣದೆ ಸಂತ್ರಸ್ತೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮೊರೆ ಹೋಗಿದ್ದರು. ಇದೀಗ ಇಬ್ಬರ ಬಂಧನವಾಗಿದೆ.
ಮುಸ್ಲಿಂ ಯುವತಿಯಿಂದ ಹಿಂದೂ ಗಂಡನ ಮತಾಂತರ

ಗದಗ : ಗದಗದಲ್ಲಿ (Gadag news) ಒಂದು ವಿಚಿತ್ರ ಲವ್ ಜಿಹಾದ್ (love jihad) ಪ್ರಕರಣ ಘಟಿಸಿದೆ. ಮುಸ್ಲಿಂ ಯುವಕ ಹಿಂದೂ ಯುವತಿಯರನ್ನು ಪ್ರೀತಿಸಿ, ಓಡಿ ಹೋಗಿ ಮದುವೆ ಆಗುವುದನ್ನು ಲವ್ ಜಿಹಾದ್ ಎನ್ನುವ ರೂಢಿ ಬಂದಿದೆ. ಆದರೆ ಗದಗದಲ್ಲಿ ನಡೆದ ವಿಚಿತ್ರ ಘಟನೆಯಲ್ಲಿ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆಯಾಗಿ ಆತನನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸುವ (conversion) ಯತ್ನ ಮಾಡಿದ್ದಾಳೆ. ಈ ಕುರಿತು ವರನೇ ಆಕೆಯ ವಿರುದ್ಧ ಆರೋಪ ಮಾಡಿದ್ದಾನೆ. ಹಿಂದೂ ಸಂಘಟನೆಗಳು ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ತಹಸಿನ್ ಹೊಸಮನಿ ಎಂಬ ಯುವತಿ ಜೊತೆಗೆ ವಿಶಾಲ್ ಕುಮಾರ್ ಎಂಬಾತ ಪ್ರೇಮ ವಿವಾಹ ಆಗಿದ್ದ. ಗದಗದ ಗಾಂಧಿನಗರದ ಸೆಟಲ್ಮೆಂಟ್ ಏರಿಯಾದ ನಿವಾಸಿಯಾಗಿರುವ ವಿಶಾಲ್ ಕುಮಾರ್, ತಹಿಸನ್ ಜೊತೆಗೆ ನವೆಂಬರ್ 24, 2024ರಂದು ರಿಜಿಸ್ಟರ್ ಮದುವೆಯಾಗಿದ್ದ. ರಿಜಿಸ್ಟರ್ಡ್ ಮದುವೆ ಬಳಿಕ, ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗಲು ತಹಸೀನ್ ಒತ್ತಾಯಿಸಿದ್ದಾಳೆ. ಬಳಿಕ ಏಪ್ರಿಲ್ 25, 2025ರಂದು ಮುಸ್ಲಿಂ ಸಂಪ್ರದಾಯದಂತೆ ಮತ್ತೆ ಮದುವೆಯಾಗಿದ್ದಾರೆ.
ಮದುವೆ ವೇಳೆ ತನ್ನ ಹೆಸರು ಬದಲಾವಣೆ ಮಾಡಿದ್ದಾರೆ ಎಂದು ವಿಶಾಲ್ ಕುಮಾರ್ ಆರೋಪಿಸಿದ್ದಾನೆ. ಮುಸ್ಲಿಂ ಸಂಪ್ರದಾಯದಂತೆ ಮದುವೆ ಆದ ವಿಡಿಯೋ ಕೂಡ ವೈರಲ್ ಆಗಿದೆ. ಈ ವೇಳೆ ಜಮಾತ್ಗೆ ಹೋಗುವಂತೆ ತಹಸಿನ್ ಬಾನು ಮತ್ತು ಆಕೆಯ ತಾಯಿ ಬೇಗಂ ಈತನಿಗೆ ಒತ್ತಾಯ ಮಾಡಿದ್ದಾರೆ ಎಂದು ವಿಶಾಲ್ ಕುಮಾರ್ ಗಂಭೀರವಾದ ಆರೋಪ ಮಾಡಿದ್ದಾನೆ.
ಈ ಮೊದಲು, ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಒಪ್ಪಿಗೆ ನೀಡಿದ್ದ ತಹಸೀನ್ ಬಳಿಕ ಅದಕ್ಕೆ ನಿರಾಕರಿಸಿದ್ದಾಳೆ. ವಿಶಾಲ್ ಕುಮಾರ್ ತನ್ನ ಕೊರಮ ಸಮಾಜ ಬಿಟ್ಟು ಇಸ್ಲಾಂ ಧರ್ಮ ಸ್ವೀಕರಿಸಲು ತಹಸಿನ್ ಕುಟುಂಬ ಒತ್ತಾಯಿಸಿದೆ. ಇಸ್ಲಾಂಗೆ ಮತಾಂತರ ಆಗದಿದ್ರೆ ರೇಪ್ ಕೇಸ್ ಹಾಕುತ್ತೇನೆ ಎಂದು ಆಕೆ ಬೆದರಿಕೆ ಹಾಕಿದ್ದಾಳೆ ಎಂದು ವಿಶಾಲ್ ದೂರಿದ್ದಾನೆ. ಇಬ್ಬರ ವಿರುದ್ಧವೂ ಕಾನೂನು ಕ್ರಮಕ್ಕೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಬಲವಂತದ ಮತಾಂತರ ನಡೆದಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಗದಗ ಎಸ್ಪಿಗೆ ಹಿಂದೂ ಸಂಘಟನೆಗಳು ದೂರು ಸಲ್ಲಿಸಿವೆ.