ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಮದ್ಯಪಾನ, ಅತಿವೇಗದಿಂದ ಕಾರು ಅಪಘಾತ, ಕಾಂಗ್ರೆಸ್‌ ಮುಖಂಡ ಸೇರಿ ಇಬ್ಬರು ಸಾವು

Road Accident: ಮಧ್ಯರಾತ್ರಿವರೆಗೂ ಪಾರ್ಟಿ ಮಾಡಿದ್ದ ಐವರು ಯುವಕರು ಬಳಿಕ ಕಾರಿನಲ್ಲಿ ತಲಪಾಡಿಯಿಂದ ಮಂಗಳೂರಿನ ಕಡೆಗೆ ಹೊರಟಿದ್ದರು. ಪೊಲೀಸರ ಪ್ರಕಾರ ಕಾರು ಗಂಟೆಗೆ 192 ಕಿಲೋಮೀಟರ್ ವೇಗದಲ್ಲಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಮದ್ಯಪಾನ, ಅತಿವೇಗದಿಂದ ಕಾರು ಅಪಘಾತ, ಕಾಂಗ್ರೆಸ್‌ ಮುಖಂಡ ಸೇರಿ ಇಬ್ಬರು ಸಾವು

ಹರೀಶ್‌ ಕೇರ ಹರೀಶ್‌ ಕೇರ Jun 20, 2025 9:30 AM

ಮಂಗಳೂರು: ಜೂನ್ 17ರ ಮಧ್ಯರಾತ್ರಿ ನಗರದ (Mangaluru news) ಹೊರವಲಯದ ಜಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ್ದ ಕಾರು ಅಪಘಾತದಲ್ಲಿ (Road accident) ಕಾಂಗ್ರೆಸ್ ಮುಖಂಡ (Congress leader) ಸೇರಿ ಇಬ್ಬರು ಯುವಕರು (two death) ಸಾವಿಗೀಡಾಗಿದ್ದಾರೆ. ಎನ್ಎಸ್​ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಹಾಗೂ ಕದ್ರಿ‌ ನಿವಾಸಿ ಅಮನ್ ರಾವ್​ ಮೃತಪಟ್ಟವರು. ರಾತ್ರಿ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಮದ್ಯಪಾನ ಮಾಡಿ ಅತಿವೇಗವಾಗಿ ಕಾರು ಚಾಲನೆ ಮಾಡಿರುವುದೇ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಅತಿಯಾದ ವೇಗ, ಡ್ರಿಂಕ್​ & ಡ್ರೈವ್ (Drink and Drive) ಅಡಿ ಪ್ರಕರಣ ದಾಖಲಾಗಿದೆ.

ಮಧ್ಯರಾತ್ರಿವರೆಗೂ ಪಾರ್ಟಿ ಮಾಡಿದ್ದ ಐವರು ಯುವಕರು ಬಳಿಕ ಕಾರಿನಲ್ಲಿ ತಲಪಾಡಿಯಿಂದ ಮಂಗಳೂರಿನ ಕಡೆಗೆ ಹೊರಟಿದ್ದರು. ಪೊಲೀಸರ ಪ್ರಕಾರ ಕಾರು ಗಂಟೆಗೆ 192 ಕಿಲೋಮೀಟರ್ ವೇಗದಲ್ಲಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಐವರು ಯುವಕರ ಪೈಕಿ ಓಂಶ್ರೀ ಪೂಜಾರಿ ಹಾಗೂ ಕದ್ರಿ‌ ನಿವಾಸಿ ಅಮನ್ ರಾವ್​ ಮೃತಪಟ್ಟಿದ್ದು, ವಂಶಿ ಮತ್ತು ಆಶಿಕ್​ಗೆ ಗಂಭೀರ ಗಾಯಗಳಾಗಿವೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಟಲಿ ಮೂಲದ ಇನ್ನೊಬ್ಬ ಗೆಳೆಯ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಅತೀ ವೇಗಕ್ಕೆ ಫೋಕ್ಸ್ ವೇಗನ್ ಕಾರು ಅಪ್ಪಚ್ಚಿಯಾಗಿದೆ.

ಬೈಕಿಗೆ ಇನ್ನೋವಾ ಕಾರು ಡಿಕ್ಕಿ, ಸವಾರ ಸಾವು

ಚಿಂತಾಮಣಿ: ಶಿಡ್ಲಘಟ್ಟ ರಸ್ತೆಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ARTO ಮುಂಭಾಗದಲ್ಲಿ ರಾತ್ರಿ ಬೈಕ್ ಗೆ ಇನೋವಾ ಕಾರು ಡಿಕ್ಕಿಯಾಗಿ ಬೈಕ್ ನ ಹಿಂಬದಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದು ಸವಾರನಿಗೆ ಕಾಲು ಮುರಿದು ಗಾಯಗೊಂಡಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡದಾಸೇನಹಳ್ಳಿಯ ನಾರಾಯಣಸ್ವಾಮಿ(68) ಮೃತಪಟ್ಟಿರುವ ವ್ಯಕ್ತಿ.ಬೈಕ್ ಚಾಲನೆ ಮಾಡುತ್ತಿದ್ದ ಮಧುಗೆ ಕಾಲು ಮುರಿದಿದೆ.

ರಾತ್ರಿ ಬೈಕ್ ನಲ್ಲಿ ಶಿಡ್ಲಘಟ್ಟ ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದರು.ಬೆಂಗಳೂರಿನ ರಾಜಾಜಿ ನಗರದ ಇನೋವಾ ಕಾರು ಚಿಂತಾಮಣಿಯ ಮದುವೆಯೊಂದರಲ್ಲಿ ಭಾಗವಹಿಸಲು ಆಗಮಿಸಿದ್ದು, ಮುಗಿಸಿಕೊಂಡು ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಗೊಂಡಿದ್ದ ಇಬ್ಬರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ನಾರಾಯಣ ಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿಸಿ ಗಾಯಾಳು ಮಧು ವನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident: ಬೆಂಗಳೂರು, ಬೆಳಗಾವಿಯಲ್ಲಿ ಭೀಕರ ಅಪಘಾತ; ನಾಲ್ವರು ಸಾವು