Road Accident: ಮಂಗಳೂರಲ್ಲಿ ಘೋರ ಘಟನೆ; ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!
Road Accident: ಮಂಗಳೂರು ನಗರದ ಹೊರವಲಯದ ಪಾವಂಜೆ ಬಳಿ ಘಟನೆ ನಡೆದಿದೆ. ಚೆನ್ನೈನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಯುವತಿ, ಸಹೋದರನ ಅಂತ್ಯ ಸಂಸ್ಕಾರಕ್ಕೆಂದು ಮನೆಗೆ ಬಂದಿದ್ದಳು. ತಂದೆ ಜತೆ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾಳೆ.


ಮಂಗಳೂರು: ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ಕೂಡ ಅಪಘಾತದಲ್ಲಿ ಮೃತಪಟ್ಟಿರುವ ಘೋರ ಘಟನೆ (Road Accident) ನಗರದ ಹೊರವಲಯದ ಪಾವಂಜೆ ಬಳಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತೆ.
ಕಂಪ್ಯೂಟರ್ ಎಂಜಿನಿಯರಿಂಗ್ ಮುಗಿಸಿರುವ ಶ್ರುತಿ, ಚೆನ್ನೈನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದರು. ಮೆಕ್ಯಾನಿಕ್ ಆಗಿದ್ದ ತನ್ನ ಸಹೋದರ ಸುಜಿತ್, ಜೂನ್ 10ರಂದು ಮೃತಪಟ್ಟ ಹಿನ್ನೆಲೆಯಲ್ಲಿ ಅವರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಕೆಲಸಕ್ಕೆ ರಜೆ ಹಾಕಿ ಮನೆಗೆ ಬಂದಿದ್ದಳು.
ಈ ನಡುವೆ ಬ್ಯಾಂಕ್ ಕೆಲಸಕ್ಕೆಂದು ತಂದೆಯೊಂದಿಗೆ ಸ್ಕೂಟರ್ನಲ್ಲಿ ಕಿನ್ನಿಗೋಳಿ ಕಡೆಗೆ ಹೋಗಿ ಮತ್ತೆ ಮನೆಯತ್ತ ಹಿಂದೆ ಬರುತ್ತಿದ್ದಳು. ಮಳೆ ಬಂದ ಹಿನ್ನೆಲೆಯಲ್ಲಿ ಪಾವಂಜೆ ಬಳಿ ಸ್ಕೂಟರ್ ನಿಲ್ಲಿಸಿ, ರೈನ್ ಕೋಟ್ ಹಾಕುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಅಲ್ಲೇ ನಿಂತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದ ಕಾರು, ಯುವತಿಯ ಸಹಿತ ಎಳೆದೊಯ್ದು ಹೆದ್ದಾರಿ ಬದಿಯಿದ್ದ ಸಿಮೆಂಟ್ ಸ್ಲ್ಯಾಬ್ಗೆ ಅಪ್ಪಳಿಸಿದೆ.
ಇದರಿಂದ ಗಂಭೀರ ಗಾಯಗೊಂಡ ಶ್ರುತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಕೆಯ ಜತೆಗಿದ್ದ ತಂದೆ ಗೋಪಾಲ ಆಚಾರ್ಯ (57) ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಅವರ ಕಾಲಿನ ಮೂಳೆ ಮುರಿದಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆಯೂ ಗಾಯಗೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ | Murder Case: 3ನೇ ಹೆಂಡ್ತಿಯನ್ನು ಕೊಂದು ಶವವನ್ನು ಲಗೇಜ್ ಎಂದು ಬಸ್ನಲ್ಲಿ ಹಾಕಿದ್ದ ಭೂಪ; 23 ವರ್ಷಗಳ ಬಳಿಕ ಅರೆಸ್ಟ್!
ಗೋಪಾಲ ಆಚಾರ್ಯರಿಗೆ ಇಬ್ಬರೇ ಮಕ್ಕಳಿದ್ದು, ಪುತ್ರ 15 ದಿನಗಳ ಹಿಂದಷ್ಟೇ ಮೃತಪಟ್ಟಿದ್ದ. ಆ ನೋವು ಮಾಸುವ ಮುನ್ನವೇ ಪುತ್ರಿಯೂ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾಳೆ. ಅಪಘಾತದ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದುವೆಯಾದ ಎರಡೇ ತಿಂಗಳಲ್ಲಿ ಅತ್ತೆ ಜೊತೆಗೆ ಓಡಿಹೋದ ಅಳಿಯ!

ದಾವಣಗೆರೆ: ಅಳಿಯನ ಜೊತೆ ಅತ್ತೆ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ (Davanagere crime news) ನಡೆದಿದೆ. ಎರಡು ತಿಂಗಳ ಹಿಂದೆ ಮದುವೆಯಾಗಿ ದಾಂಪತ್ಯ ಜೀವನದ ಕನಸು ಕಾಣುತ್ತಿದ್ದ ಯುವತಿಗೆ ಹೆತ್ತ ತಾಯಿಯೇ ಆ ಮೂಲಕ ಕಂಟಕಳಾಗಿದ್ದಾಳೆ. ಮದುವೆ ನಡೆದ 15 ದಿನಕ್ಕೇ 55 ವರ್ಷದ ಅತ್ತೆಯ ಜೊತೆಗೆ ಅಳಿಯ ಅಕ್ರಮ ಸಂಬಂಧ ಬೆಳೆಸಿದ್ದು, ಇವರಿಬ್ಬರ ಸರಸದ ವಿಡಿಯೋಗಳನ್ನು ಕಂಡು ಮಗಳೇ ಶಾಕ್ ಆಗಿದ್ದಾಳೆ.
55 ವರ್ಷದ ಶಾಂತ ಹಾಗೂ 25 ವರ್ಷದ ಗಣೇಶ್ ಪರಾರಿಯಾದವರು. ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ನಿವಾಸಿ ಶಾಂತ, ನಾಗರಾಜ್ ಎಂಬವರನ್ನು 13 ವರ್ಷಗಳ ಹಿಂದೆ 2ನೇ ಮದುವೆಯಾಗಿದ್ದಳು. ನಾಗರಾಜ್ಗೆ ಅದಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಆ ಪೈಕಿ ಹೇಮಾಳಿಗೆ ಶಾಂತಾಳೇ ಹುಡುಗನನ್ನು ಹುಡುಕಿ ಮದುವೆ ಮಾಡಿದ್ದಳು. ನಂತರ ಶಾಂತಾಗೆ ಅಳಿಯನ ಜೊತೆ ರೀಲ್ಸ್ ಮಾಡುವ ಖಯಾಲಿ ಶುರುವಾಗಿದೆ. ಬರಬರುತ್ತಾ ಇಬ್ಬರ ನಡುವೆ ಸಲುಗೆ ಬೆಳೆದು ಪರಸ್ಪರ ಹತ್ತಿರವಾಗಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೇ ತಮ್ಮ ಸರಸದ ದೃಶ್ಯಗಳನ್ನು ವಿಡಿಯೋ ಸಹ ಮಾಡಿದ್ದಾರೆ.
ಇದನ್ನೂ ಓದಿ: Murder Case: "ಅವಳು ಬೇರೊಬ್ಬನೊಂದಿಗೆ ಓಡಿ ಹೋದಳು"; ಸೊಸೆಯನ್ನೇ ಕೊಂದು ಹೊಂಡದಲ್ಲಿ ಮುಚ್ಚಿದ ಅತ್ತೆ ಮಾವ!
ಮೊಬೈಲ್ನಲ್ಲಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ನೋಡಿ ಮಗಳು ಶಾಕ್ ಆಗಿದ್ದಾಳೆ. ಇವರಿಬ್ಬರ ಬಣ್ಣ ಬಯಲಾಗುತ್ತಿದ್ದಂತೆ ಹಣ, ಆಭರಣ ಕದ್ದುಕೊಂಡು ಗಣೇಶ್ ಜೊತೆ ಶಾಂತ ಪರಾರಿಯಾಗಿದ್ದಾಳೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.