ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸದ್ಯದಲ್ಲೇ ತೆರೆ: ಎಸ್‌ಐಟಿಗೆ ಡೆಡ್‌ಲೈನ್‌ ಫಿಕ್ಸ್

SIT: ದೂರುದಾರ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದಾನೆ. ದೂರುದಾರ ತೋರಿಸಿದ ಜಾಗದಲ್ಲಿ ಅನುಮಾನಾಸ್ಪದ ಅಸ್ಥಿಪಂಜರಗಳು ಸಿಗದ ಹಿನ್ನೆಲೆಯಲ್ಲಿ ಧರ್ಮಸ್ಥಳ ಕೇಸ್ ಹಿಂದೆ ಷಡ್ಯಂತ್ರ ಅಡಗಿದೆ ಎನ್ನುವ ಆರೋಪಗಳೂ ಕೇಳಿ ಬಂದಿವೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ವರದಿ ನೀಡಲು ಎಸ್‌ಐಟಿಗೆ ಸರಕಾರ ಸೂಚಿಸಿದೆ.

ಧರ್ಮಸ್ಥಳ ಪ್ರಕರಣಕ್ಕೆ ಸದ್ಯದಲ್ಲೇ ತೆರೆ: ಎಸ್‌ಐಟಿಗೆ ಡೆಡ್‌ಲೈನ್‌ ಫಿಕ್ಸ್

-

ಹರೀಶ್‌ ಕೇರ ಹರೀಶ್‌ ಕೇರ Oct 24, 2025 9:52 AM

ಬೆಂಗಳೂರು, ಅ.23: ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala case) ಪ್ರಕರಣದ ರಹಸ್ಯ ಬಯಲಾಗುವ ದಿನಗಳು ಹತ್ತಿರ ಬಂದಿದೆ. ಎಸ್​ಐಟಿ ತನಿಖೆ ಕೂಡ ಅಂತಿಮ ಹಂತ ತಲುಪಿದೆ. ಇದರ ನಡುವೆಯೇ​ ಸರ್ಕಾರ ಕೂಡ ಎಸ್​ಐಟಿ ವರದಿ (SIT Report) ಸಲ್ಲಿಕೆಗೆ ಡೆಡ್​ಲೈನ್ (Deadline) ಕೊಟ್ಟಿದೆ. ಈ ತಿಂಗಳಲ್ಲೇ ಪ್ರಕ್ರಿಯೆ ಮುಗಿಸಲು ಸರ್ಕಾರದಿಂದಲೂ ಖಡಕ್​ ಸೂಚನೆ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಸಂಬಂಧ ಎಸ್​ಐಟಿ ಮುಖ್ಯಸ್ಥ ಪ್ರಣಬ್​ ಮೊಹಂತಿ ಆ್ಯಂಡ್ ಟೀಮ್ ತನಿಖೆ ನಡೆಸಿದೆ. ​ಕೇಸ್​ಗೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿರುವ ಎಸ್​ಐಟಿ ಅಧಿಕಾರಿಗಳು, ರಿಪೋರ್ಟ್ ಸಲ್ಲಿಸಲು‌ ಸಿದ್ಧತೆ ಮಾಡಿಕೊಂಡಿದ್ದಾರಂತೆ. ಈ ತಿಂಗಳಲ್ಲೇ ಎಲ್ಲಾ ಪ್ರಕ್ರಿಯೆ ಮುಗಿಸಲು ಸರ್ಕಾರ ಸೂಚನೆ ನೀಡಿದೆ. ಮುಂದಿನ ವಾರದಲ್ಲಿ ಧರ್ಮಸ್ಥಳ ಕೇಸ್​ ತನಿಖೆಯ ಎಸ್​ಐಟಿ ರಿಪೋರ್ಟ್ ಸಲ್ಲಿಸುವ ಸಾಧ್ಯತೆ ಇದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾಗಿತ್ತು. ಅಂದಿನಿಂದ ಧರ್ಮಸ್ಥಳ ಕೇಸ್ ಭಾರೀ ಸದ್ದು ಮಾಡಿತ್ತು. ಈ ನಡುವೆ ದೂರುದಾರರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಎದುರು ವಿವರವಾದ ಹೇಳಿಕೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: Dharmasthala Case: ಧರ್ಮಸ್ಥಳ ಪ್ರಕರಣ: ಗೃಹ ಇಲಾಖೆ, ಎಸ್‌ಐಟಿ, ಇಡಿ, ಐಟಿ ಇಲಾಖೆಗೆ ಹೈಕೋರ್ಟ್ ನೋಟಿಸ್

ದೂರುದಾರ ತಾನೇ ಹೂತಿಟ್ಟಿದ್ದ ತಲೆ ಬುರುಡೆ ಎಂದು ಹೇಳಿ ಅಸ್ತಿಪಂಜರದ ಸಮೇತ ದೂರು ಕೊಟ್ಟಿದ್ದ. ಈ ಬಗ್ಗೆ ಪರ-ವಿರೋಧ ಚರ್ಚೆ ಜೋರಾದ ಬಳಿಕ ಸರ್ಕಾರ ಈ ಪ್ರಕರಣದ ತನಿಖೆಯನ್ನ ಎಸ್​ಐಟಿ ಹೆಗಲಿಗೆ ನೀಡಿತು. ಅನಾಮಿಕನ ಹೇಳಿಕೆ ಮೇಲೆ ಎಸ್​ಐಟಿ ತಂಡ ಶೋಧ ಕಾರ್ಯ ನಡೆಸಿತು. 13ಕ್ಕೂ ಹೆಚ್ಚು ಪಾಯಿಂಟ್​​ಗಳಲ್ಲಿ ಅಸ್ಥಿಪಂಜರದ ಅವಶೇಷಗಳಿಗೆ ಉತ್ಖನನ ನಡೆಸಲಾಗಿದೆ. ಸಿಕ್ಕ ಅವಶೇಷಗಳನ್ನ ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದರು.

ಅನೇಕರ ವಿಚಾರಣೆ ನಡೆಸಿದ ಬಳಿಕ ದೂರುದಾರನನ್ನೇ ವಶಕ್ಕೆ ಪಡೆಯಲಾಗಿದ್ದು, ಇದೀಗ ದೂರುದಾರ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದಾನೆ. ದೂರುದಾರ ತೋರಿಸಿದ ಜಾಗದಲ್ಲಿ ಅನುಮಾನಾಸ್ಪದ ಅಸ್ಥಿಪಂಜರಗಳು ಸಿಗದ ಹಿನ್ನೆಲೆಯಲ್ಲಿ ಧರ್ಮಸ್ಥಳ ಕೇಸ್ ಹಿಂದೆ ಷಡ್ಯಂತ್ರ ಅಡಗಿದೆ ಎನ್ನುವ ಆರೋಪಗಳೂ ಕೇಳಿ ಬಂದಿವೆ.

ಈ ನಡುವೆ, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ ಜಯಂತ್ ಹಾಗೂ ಎಂಡಿ ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ (Karnataka high court) ಅರ್ಜಿ ಸಲ್ಲಿಕೆಯಾಗಿದ್ದು ನ್ಯಾಯಾಲಯ ಈ ಬಗ್ಗೆ ರಾಜ್ಯ ಸರಕಾರಕ್ಕೆ ಹಾಗೂ ತನಿಖಾ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದೆ.