ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಶಾಲಾ-ಕಾಲೇಜು, ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆ; 25 ಕೋಟಿ ರೂ. ಮೀಸಲು: ಡಿ.ಕೆ.ಶಿವಕುಮಾರ್

DK Shivakumar: ಸರ್ಕಾರದ ವತಿಯಿಂದ ಶಾಲಾ-ಕಾಲೇಜು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ವರ್ಷಕ್ಕೆ ಮೂರು ದಿನ ಏರ್ಪಡಿಸಲಾಗುವುದು. ಇದಕ್ಕಾಗಿ 25 ಕೋಟಿ ರೂ. ಮೀಸಲಿಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಸರ್ಕಾರದಿಂದ ಶಾಲಾ-ಕಾಲೇಜು, ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Jun 12, 2025 10:43 PM

ಬೆಂಗಳೂರು: ಶಾಲಾ-ಕಾಲೇಜು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ವರ್ಷಕ್ಕೆ ಮೂರು ದಿನ ಸರ್ಕಾರದ ವತಿಯಿಂದ ಏರ್ಪಡಿಸಲಾಗುವುದು. ಇದಕ್ಕಾಗಿ 25 ಕೋಟಿ ರೂ. ಮೀಸಲಿಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ಬ್ರಿಗೇಡ್ ಫೌಂಡೇಶನ್‌ನಿಂದ ನವೀಕರಣಗೊಂಡ ವೆಂಕಟಪ್ಪ ಆರ್ಟ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಗುರುವಾರ ಮಾತನಾಡಿದ ಅವರು, ಡಿಸೆಂಬರ್ ಕೊನೆ ವಾರದಲ್ಲಿ ಹೆಚ್ಚು ರಜೆಗಳು ಇರುತ್ತವೆ. ಇದರ ಬಗ್ಗೆ ರೂಪುರೇಷೆಗಳನ್ನು ಒಂದು ವಾರದಲ್ಲಿ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಯುವ ಪೀಳಿಗೆಗೆ ನಮ್ಮ ಇತಿಹಾಸ ತಿಳಿಯಬೇಕು ಎಂದು ವಿಧಾನಸೌಧ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಚಿತ್ರಸಂತೆ, ಪುಸ್ತಕ ಮೇಳೆ ಆಯೋಜಿಸಲಾಗಿದೆ. ಈ ಮೂಲಕ ಬೆಂಗಳೂರಿಗೆ ಹೊಸ ರೀತಿಯ ರೂಪ ನೀಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಶಾಲೆಗೆ ಒಟ್ಟಿಗೆ ಕರೆದರೆ 30- 40 ಸಾವಿರ ಜನರು ಬರುತ್ತಾರೆ. ಅದಕ್ಕಾಗಿ ಶಾಲೆಗಳ ನಡುವೆ ಮೊದಲು ಸ್ಪರ್ಧೆ ನಡೆಸಿ ನಂತರ ಅಂತಿಮ ಸ್ಪರ್ಧೆ ಏರ್ಪಡಿಸುವ ಬಗ್ಗೆ ಆಲೋಚನೆ ಮಾಡಲಾಗುವುದು. ಇದನ್ನು ಹೇಗೆ ರೂಪಿಸಬೇಕು ಎಂದು ಕಲಾವಿದರು, ‌ಕಲಾಸಕ್ತರು ಸಲಹೆ ನೀಡಬೇಕು ಎಂದು ತಿಳಿಸಿದರು. ನಮ್ಮ ಪರಂಪರೆ ನಮ್ಮ ಆಸ್ತಿ ಮುಂದಿನ ಪೀಳಿಗೆ ಇದನ್ನು ಉಳಿಸಿಕೊಂಡು ಹೋಗಬೇಕು. ಕಲೆ ಕಲೆಗಾಗಿ ಅಲ್ಲ ಕಲೆ ಸಮಾಜಕ್ಕಾಗಿ ಎನ್ನುವುದನ್ನು ನಾವು ಮರೆಯಬಾರದು. ವೆಂಕಟಪ್ಪ ಆರ್ಟ್ ಗ್ಯಾಲರಿ ಸರ್ಕಾರದ ಆಸ್ತಿಯಲ್ಲ, ಸಮಾಜದ ಆಸ್ತಿ ಎಂದರು.

ನಾನು ಶಾಲಾ ದಿನಗಳಲ್ಲಿ ಬೇಲೂರು,‌ ಹಳೇಬೀಡು ಹಾಗೂ ಹೈದರಾಬಾದ್‌ನ ಸಾಲಾರ್ ಜಂಗ್ ಮ್ಯೂಸಿಯಂಗೆ ಹೋಗಿದ್ದೆ. ಆಗ ನಮ್ಮ ಅಧ್ಯಾಪಕರಿಗೆ ನಮ್ಮಲ್ಲಿ ಈ ರೀತಿಯ ಮ್ಯೂಸಿಯಂ ಇಲ್ಲವೇ ಎಂದು ಕೇಳಿದ್ದೆ. ಇದಾದ ನಂತರ ನನ್ನನ್ನು ಮೂರು ತಿಂಗಳ ನಂತರ ಇಲ್ಲಿಗೆ ಕರೆದುಕೊಂಡು ಬಂದಿದ್ದರು ಎಂದು ನೆನಪುಗಳನ್ನು ಮೆಲುಕು ಹಾಕಿದರು.

ಬೆಂಗಳೂರಿನ ಟ್ರಾಫಿಕ್‌ ತೊಂದರೆಗಳನ್ನು ತಪ್ಪಿಸಲು ಪ್ರಯತ್ನ ಮಾಡುತ್ತಿದ್ದೇವೆ. ಒಂದು ದಿನಗಳಲ್ಲಿ ಇದಾಗುವ ಕೆಲಸವಲ್ಲ. ಆದರೆ ಪ್ರಯತ್ನ ‌ಬಿಡಬಾರದು. ಟನಲ್ ರಸ್ತೆ, ಫ್ಲೈ ಓವರ್, ಮೆಟ್ರೋ ಸೇರಿದಂತೆ ಅನೇಕ ಯೋಜನೆಗಳಿಗೆ ರೂಪುರೇಷೆಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.‌

ಈ ಸುದ್ದಿಯನ್ನೂ ಓದಿ | Karnataka Rains: ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್; ಕೊಡಗಿನ ಶಾಲಾ-ಕಾಲೇಜುಗಳಿಗೆ ರಜೆ

ಪ್ರಣವ್ ಮುಖರ್ಜಿ ಅವರು ಹಾಗೂ ಮನಮೋಹನ್ ಸಿಂಗ್ ಅವರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕು. ಅವರ ಕಾರಣಕ್ಕೆ ಸಿಎಸ್‌ಆರ್ ನಿಧಿಯನ್ನು ಇಂತಹ ಸಮಾಜಮುಖಿ ಕೆಲಸಗಳಿಗೆ ಬಳಸಿಕೊಳ್ಳಲು ಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ 1 ಲಕ್ಷ‌ ಕೋಟಿ ಯೋಜನೆ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.