ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ದೇಶಕ್ಕೇ ಮಾದರಿಯಾಗುವಂತೆ ಗ್ರೇಟರ್ ಬೆಂಗಳೂರು ನಿರ್ಮಾಣ: ಡಿಕೆಶಿ

DK Shivakumar: ಗ್ರೇಟರ್ ಬೆಂಗಳೂರು ನಗರ ಇಡೀ ದೇಶಕ್ಕೇ ಮಾದರಿಯಾಗುವಂತಹ ನಗರವನ್ನಾಗಿ ಮಾಡುತ್ತೇವೆ. ದೆಹಲಿ‌, ಚಂಡೀಗಡ್ ಮಾದರಿಗಿಂತ ಉತ್ತಮವಾಗಿ 10 ಸಾವಿರ ಎಕರೆಯಲ್ಲಿ ಬೆಂಗಳೂರು ನಗರಕ್ಕಿಂತ ಚೆನ್ನಾಗಿ ರೂಪಿಸಲಾಗುವುದು. ಇದಕ್ಕಾಗಿ ಯೋಜನೆ ಸಿದ್ಧವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ದೇಶಕ್ಕೇ ಮಾದರಿಯಾಗುವಂತೆ ಗ್ರೇಟರ್ ಬೆಂಗಳೂರು ನಿರ್ಮಾಣ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Apr 25, 2025 5:12 PM

ಮೈಸೂರು: ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿರುಗೇಟು ನೀಡಿದರು. ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್‌ಗೆ ದೇವೇಗೌಡರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, ʼದೇವೇಗೌಡರು ದೊಡ್ಡವರು. ಪಾಪ ಅವರು ಮರೆತಿರಬೇಕು. ಬಿಡದಿ, ಸಾತನೂರು, ನಂದಗುಡಿ ಈ ಭಾಗದಲ್ಲಿ ಟೌನ್ ಶಿಪ್‌ಗೆ ನೋಟಿಫಿಕೇಶನ್ ಹೊರಡಿಸಿದ್ದು ಅವರ ಸುಪುತ್ರ ಕುಮಾರಸ್ವಾಮಿ. ಅವರೇ ಈ ತೀರ್ಮಾನ ಮಾಡಿ ಡಿಎಲ್‌ಎಫ್ ಅವರಿಂದ 300 ಕೋಟಿ ರೂ. ಹಣ ಕಟ್ಟಿಸಿಕೊಂಡಿದ್ದರು. ಆನಂತರ ಬಿಜೆಪಿ ಸರ್ಕಾರ ಬಂದಾಗ ಯೋಜನೆ ಮಾಡಲು ಸಾಧ್ಯವಿಲ್ಲ ಎಂದು ಹಣ ವಾಪಸ್ ನೀಡಿದ್ದರುʼ ಎಂದು ನೆನಪಿಸಿದರು.

ನಾನು ಈಗ ಯಾವುದೇ ಜಮೀನು ಡಿನೋಟಿಫಿಕೇಷನ್ ಮಾಡಲು ತಯಾರಿಲ್ಲ. ಇದು ಮಾಡಿದ ತಕ್ಷಣ ದುಡ್ಡು-ಕಾಸು ಹೊಡೆದರು ಎನ್ನುವ ಆರೋಪ ಬರುತ್ತದೆ. ಈಗಾಗಲೇ ನಾನು ಕೋರ್ಟ್, ಕಚೇರಿ ಅಲೆದು, ಜೈಲು ವಾಸವನ್ನೂ ಅನುಭವಿಸಿದ್ದೇನೆ. ನನ್ನ ಸ್ವಂತ ಜಮೀನಿನ ಬಗ್ಗೆಯೂ ಇವರುಗಳೇ ಆರೋಪ ಮಾಡಿದ್ದಾರೆ. ದೇವೇಗೌಡರೇ ನಿಮ್ಮ ಮಗ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅವರೇ ಯಾಕೆ ಈ ಜಮೀನು ಡಿನೋಟಿಫಿಕೇಷನ್ ಮಾಡಲಿಲ್ಲ. ಈಗೇಕೆ ಮಾತನಾಡುತ್ತಿದ್ದೀರಿ? ನಾನು ಎಲ್ಲಾ ರೈತರ ಬಳಿ ಮಾತನಾಡಿದ್ದೇನೆ. ಗ್ರೇಟರ್ ಬೆಂಗಳೂರು ನಗರ ಇಡೀ ದೇಶಕ್ಕೇ ಮಾದರಿಯಾಗುವಂತಹ ನಗರವನ್ನಾಗಿ ಮಾಡುತ್ತೇವೆ. ದೆಹಲಿ‌, ಚಂಡೀಗಡ್ ಮಾದರಿಗಿಂತ ಉತ್ತಮವಾಗಿ 10 ಸಾವಿರ ಎಕರೆಯಲ್ಲಿ ಬೆಂಗಳೂರು ನಗರಕ್ಕಿಂತ ಚೆನ್ನಾಗಿ ರೂಪಿಸಲಾಗುವುದು. ಇದಕ್ಕಾಗಿ ಯೋಜನೆ ಸಿದ್ಧವಾಗುತ್ತಿದೆ ಎಂದರು.

ಇಲ್ಲಿ ರೈತರು ತಮ್ಮ ಭೂಮಿ ಮಾರಲೂ ಆಗದೆ, ಅಭಿವೃದ್ಧಿಯನ್ನು ಮಾಡಲಾಗದೇ ಪರದಾಡುತ್ತಿದ್ದಾರೆ. ಏನಾದರೂ ಒಂದು ತೀರ್ಮಾನ ಮಾಡಿ ಎಂದು ರೈತರೇ ನನ್ನ ಬಳಿ ಬಂದು ಮನವಿ ಮಾಡಿದ್ದಾರೆ. ಅವರು ತಮ್ಮ ಆಸ್ತಿ ಕಳೆದುಹೋಯಿತು ಎನ್ನಬಾರದು, ಜತೆಗೆ ಖುಷಿ ಪಡಬೇಕು. ಭೂಮಿ ಹೋದರೂ ಉತ್ತಮ ಪರಿಹಾರ‌ ನೀಡಿದ್ದಾರೆ ಎನ್ನಬೇಕು. ರೈತರ ಮುಂದೆ ಎರಡು ಆಯ್ಕೆಗಳನ್ನು ನೀಡಿದ್ದು ಭೂಮಿಗೆ ಹಣದ ಪರಿಹಾರ ಅಥವಾ ಅಭಿವೃದ್ಧಿ ಪಡಿಸಿದ ಪರಿವರ್ತಿತ ಭೂಮಿ ಪಡೆಯಬಹುದು ಎಂದು ತಿಳಿಸಿದ್ದೇವೆ. ರಾಜಕೀಯವಾಗಿ ನಾವು ಏನೇ ಮಾಡಿದರೂ ವಿರೋಧ ಮಾಡುತ್ತಾರೆ ಎಂದು ಹೇಳಿದರು.

ಜಿಲ್ಲೆ ಮರುನಾಮಕರಣ ಹೇಗೆ ಮಾಡಬೇಕು ಎಂಬುದು ಗೊತ್ತಿದೆ

ನನಗೆ ರಾಮನಗರದ ಹೆಸರನ್ನು ಹೇಗೆ ಬದಲಾವಣೆ ಮಾಡಬೇಕು ಎಂಬುದು ನನಗೆ ಗೊತ್ತಿದೆ. ನಾನು ಮಾಡಿಯೇ ಸಿದ್ದ. ಇದು ಬೆಂಗಳೂರು ದಕ್ಷಿಣವೇ. ನಾವು ಯಾರೂ ಸಹ ಹೊರಗಡೆಯಿಂದ ಬಂದು ಹೆಸರು ಕೊಡಿ ಎಂದು ಕೇಳುತ್ತಿಲ್ಲ. ಇದು ನಮ್ಮ‌ ಹಕ್ಕು. ನಮ್ಮ ತಂದೆ ತಾಯಿ, ಹುಟ್ಟು ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಆಗುತ್ತದೆಯೇ? ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Grater Bangalore: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌

ಈ ಬಾರಿ ವಿನೂತನ ದಸರಾ; ಕಂಬಳ ಸೇರ್ಪಡೆ

ನಾಡ ಹಬ್ಬ ದಸರಾವನ್ನು ಸಹ ವಿನೂತನವಾಗಿ ಆಚರಿಸಲು ಚರ್ಚೆ ನಡೆಸಲಾಗಿದೆ. ಹಳೆಯ ಒಂದಷ್ಟು ಪದ್ದತಿಗಳನ್ನು ಕೈಬಿಟ್ಟು ಹೊಸ ಪೀಳಿಗೆಯನ್ನು ಸೆಳೆಯುವಂತೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಸಭೆ ನಡೆಸೋಣ ಎಂದು ಹೇಳಿದ್ದಾರೆ. ಕಂಬಳ ನಮ್ಮ ರಾಜ್ಯದ ಕರಾವಳಿ ಭಾಗ ವಿಶೇಷವಾದ ಆಚರಣೆ, ಹೀಗಾಗಿ ಕಂಬಳವನ್ನು ದಸರಾದಲ್ಲಿ ಸೇರಿಸಲಾಗುವುದು. ಇದಕ್ಕೆ ಸ್ಥಳ ಹುಡುಕಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.