ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kodi Mutt Swamiji: ಕೋಡಿಮಠದ ಶ್ರೀಗಳ ಚಿನ್ನಾಭರಣ ಕಳ್ಳತನ; 7 ವರ್ಷದ ಬಳಿಕ ಆರೋಪಿ ಅರೆಸ್ಟ್

Kodi Mutt Swamiji: ಉತ್ತರಾಖಂಡ್‌ನ ನೈನಿತಾಲ್ ಮೂಲದ ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. 2018ರಲ್ಲಿ ಕೋಡಿಮಠದ ಶ್ರೀಗಳು, ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಅವರ ಚಿನ್ನಾಭರಣ, ನಗದು ಕಳವಾಗಿತ್ತು. ಇದೀಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಕೋಡಿಮಠದ ಶ್ರೀಗಳ ಚಿನ್ನಾಭರಣ ಕಳ್ಳತನ; 7 ವರ್ಷದ ಬಳಿಕ ಆರೋಪಿ ಅರೆಸ್ಟ್

Profile Prabhakara R Jun 28, 2025 7:03 PM

ಬೆಂಗಳೂರು: ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swamiji) ಅವರ ಬಳಿಯಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿ 7 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಸ್ವಾಮೀಜಿ ಬಳಿ ಆರೋಪಿಯು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಉತ್ತರಾಖಂಡ್‌ನ ನೈನಿತಾಲ್ ಮೂಲದ ಜಿತೇಂದ್ರ ಕುಮಾರ್ ಬಂಧಿತ ಆರೋಪಿ.

2018ರಲ್ಲಿ ಶ್ರೀಗಳು ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲೆದರ್ ಬ್ಯಾಗ್‌ನಲ್ಲಿ ಚಿನ್ನದ ಆಭರಣ, ನಗದನ್ನು ಇಟ್ಟು ಸ್ವಾಮೀಜಿ ನಿದ್ದೆಗೆ ಜಾರಿದ್ದರು. ತಡರಾತ್ರಿ ಎಚ್ಚರಗೊಂಡು ನೋಡಿದ ವೇಳೆ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನವಾಗಿತ್ತು.

ಚಿನ್ನದ ಸರ 250 ಗ್ರಾಂ, ಗೌರಿಶಂಕರ ರುದ್ರಾಕ್ಷಿ ಪದಕ, ಎರಡು ಚಿನ್ನದ ಉಂಗುರಗಳು 50 ಗ್ರಾಂ, 1.62 ಲಕ್ಷ ನಗದು ಕಳ್ಳತನವಾಗಿತ್ತು. ಈ ಬಗ್ಗೆ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು, ಏಳು ವರ್ಷಗಳ ನಂತರ ಆರೋಪಿ ಜಿತೇಂದ್ರ ಕುಮಾರ್ ಬಂಧನ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | Road Accident: ಮಂಗಳೂರಲ್ಲಿ ಘೋರ ಘಟನೆ; ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

ಬಂಧಿತನಿಂದ 13 ಕೇಸ್‌ಗಳು ಪತ್ತೆಯಾಗಿದ್ದು, ಎಸಿ ಕೋಚ್‌ಗಳಲ್ಲಿ ಪ್ರಯಾಣ ಮಾಡುತ್ತಿದ್ದ ಆರೋಪಿ, ಶ್ರೀಮಂತ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಕಳವು ಮಾಡುತ್ತಿದ್ದ. ಈ ವಿಚಾರ ರೈಲ್ವೆ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ನೈತಿಕ ಪೊಲೀಸ್‌ಗಿರಿ; ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

Kalaburagi News (5)

ಕಲಬುರಗಿ: ತುರ್ತು ಕೆಲಸವಿದೆ ನನ್ನನ್ನೂ ಬೈಕ್ ಮೇಲೆ ಡ್ರಾಪ್ ಮಾಡು ಎಂದು ಕೇಳಿದ ಯುವತಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಗರದ ಸಂತ್ರಾಸವಾಡಿ ಪ್ರದೇಶದಲ್ಲಿ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಪೊಲೀಸ್ ಪೊಲೀಸ್‌ಗಿರಿ ನಡೆದಿತ್ತು. ಈ ಕುರಿತು ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಇದರಿಂದ ಎಚ್ಚೆತ್ತುಕೊಂಡ ಎಂ.ಬಿ. ನಗರ ಠಾಣೆಯ ಪೊಲೀಸರು, ಆರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ.

ಮಹ್ಮದ್ ಸಲ್ಮಾನ್, ಮಹ್ಮದ್ ಆದಿಲ್, ಮಹ್ಮದ್ ರೆಹಾನ್, ಮಹ್ಮದ್ ಉಜೈರ್, ಮಹ್ಮದ್ ಫೈಜ್, ಮಹ್ಮದ್ ಆಸಿಫ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಬೈಲಪ್ಪ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಬೈಕ್ ಮೇಲೆ ಡ್ರಾಪ್ ನೀಡಿದ್ದ. ಇದನ್ನು ಕಂಡ ಅನ್ಯಕೋಮಿನ 15 ಯುವಕರು ಬೈಕ್ ಅಡ್ಡಗಟ್ಟಿ, ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆರೋಪಿಗಳ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.