ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hassan News: ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್‌ ಮಾಡಿ ಹಿಂದಕ್ಕೆ ತಳ್ಳಿದ ಬೈಕ್‌ ಸವಾರ; ಮುಂದೇನಾಯ್ತು?

Hassan News: ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್​ ಹಿಂದೆ ಆಟೋ ಪಾರ್ಕ್​ ಮಾಡಲಾಗಿತ್ತು. ಇದರಿಂದ ಸಿಟ್ಟಿಗೆದ್ದ ಯುವಕ ಆಟೋವನ್ನು ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿದ್ದಾನೆ. ಇದರಿಂದ ಆಟೋ ಹಿಂದಕ್ಕೆ ಹೋಗಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಘಟನೆ ನಡೆದಿದೆ.

ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್‌ ಮಾಡಿ ಹಿಂದಕ್ಕೆ ತಳ್ಳಿದ ಬೈಕ್‌ ಸವಾರ!

Profile Prabhakara R Jun 8, 2025 3:46 PM

ಹಾಸನ: ಯುವಕನೊಬ್ಬ ರಸ್ತೆಯಲ್ಲಿ ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿದ ಅಮಾನವೀಯ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಆಟೋ ಹಿಂದಕ್ಕೆ ಹೋಗುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣ ಓಡಿ ಹೋಗಿ ನಿಲ್ಲಿಸಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್​ ಹಿಂದೆ ಆಟೋ ಪಾರ್ಕ್​ ಮಾಡಲಾಗಿತ್ತು. ಇದರಿಂದ ಬೈಕ್ ತೆಗೆಯಲಾಗದೆ ಯುವಕ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳಿರುವುದು ನೋಡಿಯೂ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿದ್ದಾನೆ. ಆಟೋ ವೇಗವಾಗಿ ಹಿಂದೆ ಚಲಿಸುವುದನ್ನು ಕಂಡು ಸ್ಥಳದಲ್ಲಿದ್ದವರು ಕೂಗಾಡಿದ್ದಾರೆ. ಕೂಡಳೇ ಸ್ಥಳಕ್ಕೆ ಓಡಿ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ.

ಈ ಸುದ್ದಿಯನ್ನೂ ಓದಿ | Bengaluru Stampede: ಕಬ್ಬನ್ ಪಾರ್ಕ್‌ನ ಗಿಡ-ಮರಗಳಿಗೆ ಹಾನಿ; ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ದೂರು ದಾಖಲು

ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ. ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ.

ದಾವಣಗೆರೆಯಲ್ಲಿ ತಡರಾತ್ರಿ ಭಾರೀ ಸ್ಪೋಟದ ಶಬ್ದ; ಬೆಚ್ಚಿ ಬಿದ್ದ ಜನ

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಿನ್ನೆ ತಡರಾತ್ರಿ ಏಕಾಏಕಿ ಸ್ಫೋಟದ(Heavy explosion) ಸದ್ದೊಂದು ಕೇಳಿಬಂದಿದೆ. ಗಾಢ ನಿದ್ದೆಯಲ್ಲಿದ್ದ ಜನ ಸ್ಫೋಟದ ಸದ್ದು ಕೇಳಿ ಬೆಚ್ಚಿ ಬಿದ್ದಿದ್ದು, ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಜಗಳೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಏನಿದು ಸ್ಫೋಟ? ಈ ಸ್ಫೋಟಕ್ಕೆ ಕಾರಣ ಏನೆಂಬುದು ಇನ್ನೂ ನಿಗೂಢವಾಗಿದೆ. ಇನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಗಳೂರು ಪಟ್ಟಣದಲ್ಲಿ 5 ದಶಕಗಳ ನಂತರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಬೃಹತ್ ಕಲ್ಲು ಬಂಡೆ, ಕಲ್ಲುಬಂಡೆ ತೆರವು ಮಾಡಲು ಸ್ಫೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ಜನವಸತಿ ಪ್ರದೇಶದಲ್ಲಿ ಸ್ಪೋಟಕ ಬಳಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Terrorists convicted: ಚರ್ಚ್‌ಸ್ಟ್ರೀಟ್‌ ಸ್ಫೋಟಕ್ಕೆ ಸ್ಫೋಟಕ ಪೂರೈಕೆ, ಭಟ್ಕಳದ ಮೂವರು ಉಗ್ರರಿಗೆ ಶಿಕ್ಷೆ