ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಜ್ಯ ಸರ್ಕಾರದಿಂದ ಪ್ರತಿ ವ್ಯಕ್ತಿಯ ಮೇಲೆ 1 ಲಕ್ಷ ರೂ. ಹೆಚ್ಚುವರಿ ಸಾಲದ ಹೊರೆ; ಬಸವರಾಜ ಬೊಮ್ಮಾಯಿ ಆರೋಪ

Basavaraj Bommai: ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸತ್ಯ ಹೇಳಿದ್ದಾರೆ. ಸುಳ್ಳನ್ನು ಎಷ್ಟು ದಿನ ಅಂತ ಮರೆಮಾಚಲು ಆಗುತ್ತದೆ? ಸತ್ಯ ಹೊರಬರಲೇ ಬೇಕು, ಪರಮೇಶ್ವರ ಬಾಯಲ್ಲಿ ಬಂದರೆ ಶಿವನ ಬಾಯಲ್ಲಿ ಬಂದ ಹಾಗೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ: ಬೊಮ್ಮಾಯಿ

Profile Siddalinga Swamy Jun 26, 2025 8:00 PM

ಹಾವೇರಿ: ರಾಜ್ಯ ಸರ್ಕಾರ ಆರ್ಥಿಕವಾಗಿ ಸರ್ಕಾರ ದಿವಾಳಿ ಆಗಿದೆ. ಇವರ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ 1 ಲಕ್ಷ ರೂಪಾಯಿ ಸಾಲ ಹೊರೆಸುತ್ತಿದ್ದಾರೆ. ಇದಕ್ಕಿಂತ ದೊಡ್ಡ ಶ್ವೇತ ಪತ್ರ ಬೇಕಾ? ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)‌ ಪ್ರಶ್ನಿಸಿದ್ದಾರೆ‌. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸತ್ಯ ಹೇಳಿದ್ದಾರೆ. ಸುಳ್ಳನ್ನು ಎಷ್ಟು ದಿನ ಅಂತ ಮರೆಮಾಚಲು ಆಗುತ್ತದೆ? ಸತ್ಯ ಹೊರಬರಲೇ ಬೇಕು, ಪರಮೇಶ್ವರ ಬಾಯಲ್ಲಿ ಬಂದರೆ ಶಿವನ ಬಾಯಲ್ಲಿ ಬಂದ ಹಾಗೆ ಎಂದು ಹೇಳಿದರು.

ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಶ್ವೇತ ಪತ್ರ ಹೊರಡಿಸಲು ಬಿಜೆಪಿ ಆಗ್ರಹಿಸುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರದ ಬಳಿ ಶ್ವೇತ ಪತ್ರ ಇಲ್ಲ, ಬ್ಲಾಕ್ ಪೇಪರ್ ಇದೆ. ಆರ್ಥಿಕವಾಗಿ ಸರ್ಕಾರ ದಿವಾಳಿ ಆಗಿದೆ. ಎಲ್ಲ ದರಗಳು, ತೆರಿಗೆ ಹೆಚ್ಚಾಗಿದೆ. ಇದಕ್ಕಿಂತ ಶ್ವೇತ ಪತ್ರ ಬೇಕಾ? ಜನ ಪ್ರತಿನಿತ್ಯ ಅನುಭವಿಸುತ್ತಿದ್ದಾರೆ. ಪ್ರತಿ ಕುಟುಂಬದ ಮೇಲೆ ಪ್ರತಿ ವರ್ಷ 50 ಸಾವಿರ ರೂಪಾಯಿ ಹೊರೆ ಆಗುತ್ತಿದೆ. ಪ್ರತಿಯೊಂದು ಕುಟುಂಬದ ವ್ಯಕ್ತಿಯ ಮೇಲೆ ಹೆಚ್ಚುವರಿಯಾಗಿ 1 ಲಕ್ಷ ರೂಪಾಯಿ ಸಾಲ ಹೊರೆಸುತ್ತಿದ್ದಾರೆ. ಇದಕ್ಕಿಂತ ದೊಡ್ಡ ಶ್ವೇತ ಪತ್ರ ಬೇಕಾ? ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | Namma Metro: ಇನ್ನು ಮುಂದೆ ನಮ್ಮ ಮೆಟ್ರೋ ಟಿಕೆಟ್ ಈ ಐದು ಆ್ಯಪ್‌ಗಳಲ್ಲೂ ಲಭ್ಯ

ಕೃಷಿ ಇಲಾಖೆ ನಿರ್ಲಕ್ಷ್ಯ

ರೈತರಿಗೆ ಸರಿಯಾಗಿ ಬೀಜ ಗೊಬ್ಬರ ಸಿಗದಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಮೊನ್ನೆ ಸೋಯಾಬಿನ್ ವಿಚಾರ ಹೇಳಿದ್ದೆ. ರಾಣೆಬೆನ್ನೂರಿನಲ್ಲಿ ಕಳಪೆ ಬೀಜ ಮಾರಾಟ ಮಾಡಲಾಗಿದೆ ಎಂದು ಕೇಸ್ ಮಾಡಿದ್ದಾರೆ‌. ಮಳೆ ಆಗುತ್ತಿದೆ. ಗೊಬ್ಬರ ಸಿಗುತ್ತಿಲ್ಲ. ಮಳೆ ಹೆಚ್ಚಾಗುತ್ತಿರುವುದರಿಂದ ಯೂರಿಯಾ ಗೊಬ್ಬರ ಬೇಕು. ಆದರೆ ಯೂರಿಯಾ ಕೊರತೆ ಆಗುತ್ತಿದೆ. ಬಂದಿದ್ದೆಲ್ಲ ಹೋಲ್ ಸೇಲ್‌ನಲ್ಲಿ ದುಡ್ಡಿಗೆ ಮಾರಾಟ ಮಾಡಿಕೊಂಡಿದ್ದಾರೆ. ಕೃಷಿ ಇಲಾಖೆ ಮೇಲೆ ನಾನು ನೇರವಾಗಿ ಆರೋಪ ಮಾಡುತ್ತಿದ್ದೇನೆ. ದುಡ್ಡು ತೆಗೆದುಕೊಂಡು ಮಾರಾಟ ಮಾಡಿಕೊಂಡಿದ್ದಾರೆ. ಯೂರಿಯಾ ಗೊಬ್ಬರ ಅತ್ಯಂತ ಅವಶ್ಯಕತೆ ಇದೆ. ಆದರೆ ಸಿಗುತ್ತಿಲ್ಲ. ಸೊಸೈಟಿಗಳಿಗೂ ಕೊಡುತ್ತಿಲ್ಲ, ಲೋಕಲ್ ಡೀಲರ್ಸ್‌ಗೂ ಕೊಡುತ್ತಿಲ್ಲ. ಮನ್ಸೂನ್‌ನಲ್ಲಿ ರೈತರಿಗೆ ಏನು ಸಿಗಬೇಕೋ ಅದು ಸಿಗುತ್ತಿಲ್ಲ. ಜಿಲ್ಲೆಗೆ ಯಾರು ಬರುತ್ತಾರೆ ಹೋಗುತ್ತಾರೆ ಮುಖ್ಯವಲ್ಲ. ಕಾಲಕಾಲಕ್ಕೆ ರೈತರಿಗೆ ಏನು ಸಿಗಬೇಕೊ ಅದು ಸಿಗುತ್ತಿಲ್ಲ. ಕೃಷಿ ಇಲಾಖೆ ಹಾವೇರಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.