Gims Hospital: ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್; ಗೋಡೆ ಒಡೆದು 9 ಮಂದಿ ರಕ್ಷಣೆ
Gims Hospital: ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಲಿಫ್ಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಎಚ್ಚೆತ್ತುಕೊಂಡು ಎಲ್ಲರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೆವೆ ಎಂದು ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶಿವಕುಮಾರ್ ತಿಳಿಸಿದ್ದಾರೆ.


ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ (GIMS) ಏಕಾಏಕಿ ಲಿಫ್ಟ್ ಕೈ ಕೊಟ್ಟಿದ್ದರಿಂದ ಲಿಫ್ಟ್ ಒಳಗೆ 9 ಮಂದಿ ಸಿಲುಕಿ ಪರದಾಡಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಲಿಫ್ಟ್ ದುರಸ್ತಿ ಆಗದ ಕಾರಣ ಡ್ರಿಲ್ಲಿಂಗ್ ಮಷಿನ್ ಬಳಸಿ ತಡೆಗೋಡೆಯನ್ನು ಒಡೆದು ಲಿಫ್ಟ್ ಒಳಗಿದ್ದವರನ್ನು ರಕ್ಷಿಸಲಾಗಿದೆ. ಲಿಫ್ಟ್ ಒಳಗೆ ಸಿಲುಕಿದ್ದರಿಂದ ಒಂಬತ್ತು ಜನ ಸಿಬ್ಬಂದಿ ಉಸಿರಾಡಲು ಪರದಾಡುತ್ತಿದ್ದರು. ತಕ್ಷಣವೇ ಲಿಫ್ಟ್ನಲ್ಲಿದ್ದ ಒಬ್ಬ ಸಿಬ್ಬಂದಿ ತಾಂತ್ರಿಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಈ ವೇಳೆ ಲಿಫ್ಟ್ ದುರಸ್ತಿ ಮಾಡಲು ಸಾಧ್ಯವಾಗದ ಹಿನ್ನೆಲೆ ತಡೆ ಗೋಡೆಯನ್ನು ಒಡೆದು ಒಳಗಿದ್ದವರನ್ನು ರಕ್ಷಣೆ ಮಾಡಲಾಗಿದೆ.
ಕೆಟ್ಟು ಹೋಗಿರುವ ಲಿಫ್ಟ್ ಇರುವ ಕಟ್ಟಡವನ್ನು ಈ ಹಿಂದೆ ಜಯದೇವ ಆಸ್ಪತ್ರೆಯವರು ಬಳಸುತ್ತಿದ್ದರು. ಹೀಗಾಗಿ ಜಿಮ್ಸ್ ಆಸ್ಪತ್ರೆಯ ರೋಗಿಗಳು ಹಾಗೂ ಸಿಬ್ಬಂದಿ ಬರಬಾರದು ಎಂದು ಲಿಫ್ಟ್ ಅನ್ನು ಮೂರನೇ ಅಂತಸ್ತಿನಲ್ಲಿ ನಿಲ್ಲದಂತೆ ಮಾಡಲು ಗೋಡೆ ಕಟ್ಟಲಾಗಿತ್ತು. ದುರಂತ ಎಂದರೆ, ಅದೇ ಮೂರನೇ ಮಹಡಿಯ ವಾಲ್ ಡೋರ್ ಬಳಿಯೇ ಲಿಫ್ಟ್ ಕೆಟ್ಟು ನಿಂತಿದೆ.
ಲಿಫ್ಟ್ ಕೆಟ್ಟು ನಿಂತಾಗ 10 ರಿಂದ 15 ನಿಮಿಷಗಳಲ್ಲಿ ದುರಸ್ತಿ ಆಗಬಹುದು ಎಂದು ಸಿಬ್ಬಂದಿ ಹಾಗೆಯೇ ಅದರೊಳಗಡೆ ನಿಂತಿದ್ದರು. ಆದರೆ, ಲಿಫ್ಟ್ ಸರಿ ಹೋಗುವ ಸಾಧ್ಯತೆ ಕಾಣದ ಹಿನ್ನೆಲೆ ಒಳಗಿದ್ದವರು ಲಿಫ್ಟ್ ಬಾಗಿಲನ್ನು ಬಲವಂತದಿಂದ ಎಳೆದು ತೆಗೆದಿದ್ದಾರೆ. ಆದರೆ ಬಾಗಿಲು ತೆರೆಯುತ್ತಿದ್ದಂತೆಯೇ ಎದುರಿಗೆ ದೊಡ್ಡ ಗೋಡೆ ಕಾಣಿಸಿದೆ. ಬಳಿಕ ಎಲ್ಲಾ ಸಿಬ್ಬಂದಿ ಕಿರುಚಾಡಲು ಆರಂಭಿಸಿದ್ದಾರೆ. ಅದಾದ ಒಂದೂವರೆ ಗಂಟೆ ಬಳಿಕ ಡ್ರಿಲ್ ಮಷಿನ್ನಿಂದ ಗೋಡೆ ಒಡೆದು ಎಲ್ಲರನ್ನೂ ರಕ್ಷಿಸಲಾಗಿದೆ. ಲಿಫ್ಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಎಚ್ಚೆತ್ತುಕೊಂಡು ಎಲ್ಲರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೆವೆ ಎಂದು ಜಿಮ್ಸ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶಿವಕುಮಾರ್ ತಿಳಿಸಿದ್ದಾರೆ.
ವ್ಹೀಲಿಂಗ್ ಮಾಡುವವರೇ ಎಚ್ಚರಿಕೆ, ನಿಮಗೆ ಜಾಮೀನು ಕೂಡ ಸಿಗೊಲ್ಲ!
ಬೆಂಗಳೂರು: ಶೋಕಿಗಾಗಿ, ಏರಿಯಾದಲ್ಲಿ ಹವಾ ಮೇಂಟೇನ್ ಮಾಡುವುದಕ್ಕಾಗಿ ವ್ಹೀಲಿಂಗ್ ಮಾಡುವುದನ್ನು ಮುಂದುವರಿಸಿರುವ ಪಡ್ಡೆಗಳು ಈ ನ್ಯೂಸನ್ನು ಗಮನವಿಟ್ಟು ಓದಬೇಕು. ಸಿಕ್ಕಿಬಿದ್ದರೆ ನಿಮಗೆ ಜಾಮೀನು ಕೂಡ ಸಿಗಲಾರದು. ʼಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಹೆಚ್ಚುತ್ತಿರುವ ವ್ಹೀಲಿಂಗ್ನಂಥ ಅಪಾಯಕಾರಿ ಚಟುವಟಿಕೆಗಳನ್ನು ನಿಗ್ರಹಿಸಲು ಕಾನೂನು ತಿದ್ದುಪಡಿ ಅಗತ್ಯವಿದೆʼ ಎಂದು ಹೇಳಿರುವ ಹೈಕೋರ್ಟ್, ಪದೇಪದೆ ವ್ಹೀಲಿಂಗ್ ಮಾಡಿ ಜನತೆಗೆ ಕಿರುಕುಳ ನೀಡುತ್ತಿದ್ದ ಗಂಗಾವತಿಯ ಆರೋಪಿಯೊಬ್ಬನಿಗೆ ಜಾಮೀನು ನಿರಾಕರಿಸಿದೆ.
ವ್ಹೀಲಿಂಗ್ ಆರೋಪಿ, ಕೊಪ್ಪಳ ಜಿಲ್ಲೆಯ ಗಂಗಾವತಿಯ ಅರ್ಬಾಜ್ ಖಾನ್ ಅಲಿಯಾಸ್ ಅರ್ಬಾಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. "ರಾಜ್ಯ ಸರಕಾರವು ಭಾರತೀಯ ನಾಗರಿಕ ಸಂಹಿತೆ (ಬಿಎನ್ಎಸ್) ಮತ್ತು ಭಾರತೀಯ ಮೋಟಾರು ವಾಹನ ಕಾಯಿದೆಗೆ ಕಠಿಣ ನಿಬಂಧನೆ ಸೇರ್ಪಡೆ ಮಾಡುವ ಮೂಲಕ ಅಗತ್ಯ ತಿದ್ದುಪಡಿ ಮಾಡಬೇಕು" ಎಂದು ಹೈಕೋರ್ಟ್ನ ಧಾರವಾಡ ಪೀಠ ಆದೇಶಿಸಿದೆ.
''ವಿವೇಚನಾರಹಿತ ಚಾಲನೆ ನಿಯಂತ್ರಿಸಲು ಹಾಲಿ ಇರುವ ಕಾನೂನಿನ ನಿಬಂಧನೆಗಳು ಸಾಕಾಗುವುದಿಲ್ಲ ಎಂಬುದನ್ನು ಶಾಸಕಾಂಗ ಮನಗಾಣಬೇಕು. ಶಾಸನದ ಕೊರತೆಯನ್ನು ಗಮನಿಸಿ ಹೊಂದಿಕೆಯಾಗುವ ಮತ್ತು ಕಠಿಣ ನಿಬಂಧನೆ ಒಳಗೊಂಡಂತೆ ಬಿಎನ್ಎಸ್ ಮತ್ತು ಮೋಟಾರು ವಾಹನಗಳ ಕಾಯಿದೆಗೆ ಸೂಕ್ತ ತಿದ್ದುಪಡಿ ಮಾಡಬೇಕು,'' ಎಂದು ನ್ಯಾಯಪೀಠ ಹೇಳಿದೆ.
''ನ್ಯಾಯಾಲಯವು ತನ್ನ ಅಧಿಕಾರ ಚಲಾಯಿಸುವಾಗ ಏರುಗತಿಯಲ್ಲಿರುವ ಅಪಾಯಕಾರಿಯಾದ ವ್ಹೀಲಿಂಗ್ನಂತಹ ದುಸ್ಸಾಹಸ ಚಟುವಟಿಕೆಗಳನ್ನು ಹತ್ತಿಕ್ಕುವುದನ್ನು ಪರಿಗಣಿಸಬೇಕಿದ್ದು, ಸಮಾಜದ ಮೇಲೆ ಗಂಭೀರ ಪರಿಣಾಮವನ್ನುಂಟು ಮಾಡಿ ಆ ಮೂಲಕ ಸಾರ್ವಜನಿಕ ಸುವ್ಯವಸ್ಥೆ ಮತ್ತು ಜನರ ರಕ್ಷಣೆ, ಭದ್ರತೆಯ ಮೇಲೆ ಪರಿಣಾಮ ಉಂಟು ಮಾಡುವ ಕೆಲವು ನಿರ್ಲಜ್ಜ ಶಕ್ತಿಗಳ ಹುಟ್ಟಡಗಿಸಬೇಕಿದೆ. ಹಾಲಿ ಪ್ರಕರಣದಲ್ಲಿ ಅರ್ಜಿದಾರನ ವಿರುದ್ಧದ ಆರೋಪಗಳು ಜಾಮೀನು ಸಹಿತವಾಗಿವೆ. ಆದರೆ, ಆತ ಪದೇ ಪದೆ ಅಂತಹ ತಪ್ಪೆಸಗಿದ್ದಾನೆ. ಆರೋಪಿ ವಿರುದ್ಧ ಸಕ್ಷಮ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದ ಮಾತ್ರಕ್ಕೆ ಜಾಮೀನು ನೀಡಬೇಕು ಎಂದೇನೂ ಇಲ್ಲ,'' ಎಂದು ನ್ಯಾಯಾಲಯ ಹೇಳಿದೆ.
ಈ ಸುದ್ದಿಯನ್ನೂ ಓದಿ | provocative video: "ಮೋದಿ ಮನೆ ಮೇಲೆ ಬಾಂಬ್ ಹಾಕಿ" ಎಂದು ವಿಡಿಯೋ ಮಾಡಿದ ನವಾಜ್ ಬಂಧನ
''ಮೊದಲಿಗೆ ವ್ಹೀಲಿಂಗ್ ಬೃಹತ್ ನಗರ ಪ್ರದೇಶಗಳ ಹೆದ್ದಾರಿಗಳಿಗೆ ಸೀಮಿತವಾಗಿತ್ತು. ಇತ್ತೀಚಿನ ದಿನಗಳಲ್ಲಿ ಅಂತಹ ಅಪಾಯಕಾರಿ ಚಟುವಟಿಕೆ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆಯಾಗುತ್ತಿದೆ. ಯುವ ಸಮುದಾಯವು ವ್ಹೀಲಿಂಗ್ ಎದೆಗಾರಿಕೆ ಎಂದು ನಂಬಿದ್ದು, ಇಂತಹ ಚಟುವಟಿಕೆಯಿಂದ ಆಗಬಹುದಾದ ಗಂಭೀರ ಹಾನಿಯ ಬಗ್ಗೆ ಅರಿವಿಲ್ಲ. ವ್ಹೀಲಿಂಗ್ ದ್ವಿಚಕ್ರ ವಾಹನ ಚಾಲಕ, ಹಿಂಬದಿಯ ಸವಾರ ಮಾತ್ರವಲ್ಲದೇ ಸಾಮಾನ್ಯ ಜನರಿಗೂ ಗಂಭೀರ ಬೆದರಿಕೆಯಾಗಿದೆ. ಈ ಕೃತ್ಯದಲ್ಲಿ ತೊಡಗುವ ವಿವೇಚನಾರಹಿತ ಕೆಲವು ಯುವಕರು ನಿಸ್ಸಂಶಯವಾಗಿ ಸಮಾಜದ ಸ್ವಾಸ್ಥ್ಯ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದಾರೆ," ಎಂದು ನ್ಯಾಯಾಲಯ ಹೇಳಿದೆ.