KTPP Bill: ಕೆಟಿಪಿಪಿ ವಿಧೇಯಕ 3ನೇ ಬಾರಿ ರಾಜ್ಯಪಾಲರಿಗೆ ಕಳುಹಿಸಿದ ರಾಜ್ಯ ಸರಕಾರ
ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ (ಪ್ರವರ್ಗ 2ಬಿ) ಶೇ.4ರಷ್ಟು ಮೀಸಲಾತಿ ನೀಡುವುದರ ಹಿಂದಿನ ತಾರ್ಕಿಕತೆ ಮತ್ತು ಕಾನೂನುಬದ್ಧತೆಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಗೆಹ್ಲೋಟ್ ಅವರನ್ನು ಭೇಟಿಯಾದಾಗ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ-2025ನ್ನು (KTPP bill) ರಾಜ್ಯ ಸರ್ಕಾರ (Karnataka government) ಮೂರನೇ ಬಾರಿಗೆ ರಾಜಭವನಕ್ಕೆ ವಾಪಸ್ ಕಳುಹಿಸಿದೆ. ಸರ್ಕಾರವು ನಿರ್ದಿಷ್ಟ ವಿವರಣೆಗಳೊಂದಿಗೆ ಮೇ 22 ರಂದು (ಗುರುವಾರ) ಮಸೂದೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Governor Thawar Chand Gehlot) ಅವರಿಗೆ ವಾಪಸ್ ಕಳುಹಿಸಿತು. ರಾಜ್ಯಪಾಲರು ಮಸೂದೆಯನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಾಯ್ದಿರಿಸಿದ್ದಾರೆ.
ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ (ಪ್ರವರ್ಗ 2ಬಿ) ಶೇ.4ರಷ್ಟು ಮೀಸಲಾತಿ ನೀಡುವುದರ ಹಿಂದಿನ ತಾರ್ಕಿಕತೆ ಮತ್ತು ಕಾನೂನುಬದ್ಧತೆಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಗೆಹ್ಲೋಟ್ ಅವರನ್ನು ಭೇಟಿಯಾದಾಗ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ಈ ವಿಧೇಯಕವನ್ನು ಮುಸ್ಲಿಂ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ತಂದಿದೆ ಎಂದು ಬಿಜೆಪಿ ಆರೋಪಿಸಿದೆ. 2023ರಲ್ಲಿ ರಾಷ್ಟ್ರಪತಿಗಳ ಒಪ್ಪಿಗೆಗಾಗಿ 10 ವಿಧೇಯಕಗಳನ್ನು ಕಾಯ್ದಿರಿಸುವ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ನಿರ್ಧಾರವು “ಕಾನೂನುಬಾಹಿರ” ಮತ್ತು “ತಪ್ಪು” ಎಂದು ಏಪ್ರಿಲ್ 7ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಗೆಹ್ಲೋಟ್ ಅವರ ಮುಂದಿನ ನಿರ್ಧಾರ ಮಹತ್ವದ್ದಾಗಿದೆ.
ಇದನ್ನೂ ಓದಿ: Greater Bengaluru: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ; ಇಂದಿನಿಂದ ಜಾರಿ