Karnataka Weather: ರಾತ್ರಿ ಗಡಗಡ ಚಳಿ, ಹಗಲು ಚುರುಚುರು ಬಿಸಿಲು; ವಿಜಯಪುರದಲ್ಲಿ ದಾಖಲಾಯ್ತು 7 ಡಿಗ್ರಿ ತಾಪಮಾನ
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್ಗೆ ತೆರಳದಂತೆ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ (Bengaluru weather) ಸಂಜೆ, ರಾತ್ರಿ ಹಾಗೂ ಮುಂಜಾನೆ ತಾಪಮಾನ ಎಂದಿಗಿಂತ ಕಡಿಮೆ ಪ್ರಮಾಣದಲ್ಲಿರಲಿದೆ. ಹಿರಿಯ ನಾಗರಿಕರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.
ಉತ್ತರ ಕರ್ನಾಟಕದಲ್ಲಿ ಚಳಿ -
ಬೆಂಗಳೂರು, ಡಿ.17: ಬೆಂಗಳೂರು (Bengaluru) ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಭಾಗಗಳಲ್ಲಿ ಚಳಿಯ ಅಬ್ಬರ (Karnataka Weather Forecast) ಹೆಚ್ಚಾಗಿದೆ. ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ರಾತ್ರಿ ನಡುಗಿಸುವ ಚಳಿ ಹಾಗೆಯೇ ಹಗಲು ಪ್ರಖರ ಬಿಸಿಲು ಕಂಡುಬರುತ್ತಿದೆ. ವಿಜಯಪುರದಲ್ಲಿ 20 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಈ ವಾರ ರಾತ್ರಿ ತಾಪಮಾನ 14 ಡಿಗ್ರಿಯಲ್ಲಿ ಕಂಡುಬರಲಿದೆ.
ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ 8 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನರು ಮೈಕೊರೆಯುವ ಚಳಿಯಿಂದ ತತ್ತರಿಸುತ್ತಿದ್ದು, ಕಳೆದ 20 ವರ್ಷಗಳಲ್ಲಿ ಮೂರನೇ ಬಾರಿ ಕನಿಷ್ಠ ತಾಪಮಾನ ದಾಖಲಾಗಿದೆ. 10 ವರ್ಷಗಳಲ್ಲಿ ಎರಡನೇ ಬಾರಿ ಅತಿ ಕಡಿಮೆ ಉಷ್ಣಾಂಶ ಕಂಡುಬಂದಿದೆ.
ಕಳೆದ ಡಿಸೆಂಬರ್ 13ರಂದು ತಾಪಮಾನ ಕೇವಲ 7 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿತ್ತು. ಡಿ.16ರಂದು ಕನಿಷ್ಠ 10.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್ಗೆ ತೆರಳದಂತೆ ಸಲಹೆ ನೀಡಿದ್ದಾರೆ.
Karnataka Weather: ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
Karnataka Weather: ತೀವ್ರವಾದ ಚಳಿ, ಉತ್ತರ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್