Kodi Mutt Swamiji: ದೇಶದಲ್ಲಿ ಮೇಘ ಸ್ಫೋಟ, ನಿರೀಕ್ಷೆಗೆ ಮೀರಿ ನೋವು ಕಾಡಲಿದೆ: ಕೋಡಿಮಠ ಶ್ರೀ ಭವಿಷ್ಯ!
Kodi Mutt Swamiji: ಕೋಡಿಮಠದ ಸ್ವಾಮೀಜಿ ಅವರು ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿದ್ದು, ನಿರೀಕ್ಷೆಗೂ ಮೀರಿ ನೋವು ಭಾರತವನ್ನು ಕಾಡಲಿದೆ. ಅದರ ಜತೆಗೆ ರಾಜಕೀಯದಲ್ಲಿ ನಿರೀಕ್ಷೆ ಮಾಡದ ರೀತಿಯಲ್ಲಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ಹೇಳಿದ್ದಾರೆ.


ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಅಚ್ಚರಿ ಭವಿಷ್ಯವಾಣಿ ನುಡಿಯುವ ಮೂಲಕ ಗಮನ ಸೆಳೆದಿರುವ ಕೋಡಿಮಠದ ಸ್ವಾಮೀಜಿ(Kodi Mutt Swamiji), ಇದೀಗ ಮತ್ತೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಮಳೆ, ಕರೋನಾ ಹಾಗೂ ರಾಜ್ಯ ರಾಜಕೀಯದ ಬಗ್ಗೆ ಅವರು ಮಾತನಾಡಿದ್ದಾರೆ.
ಸಂಸದ ವಿ.ಸೋಮಣ್ಣ ಅವರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ಅವರು ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿದ್ದು, ನಿರೀಕ್ಷೆಗೂ ಮೀರಿ ನೋವು ಭಾರತವನ್ನು ಕಾಡಲಿದೆ. ಅದರ ಜತೆಗೆ ರಾಜಕೀಯದಲ್ಲಿ ನಿರೀಕ್ಷೆ ಮಾಡದ ರೀತಿಯಲ್ಲಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ಹೇಳಿದ್ದಾರೆ. ಸೋಳೆಯಾ ಮಗನುಟ್ಟಿ, ಆಳುವನು ಮುನಿಪುರವ. ಯುದ್ಧವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು ಎಂದು ಗೂಡಾರ್ಥವಾಗಿ ಹೇಳಿದ್ದು, ಇದರ ಅರ್ಥ ಮುಂದಿನ ದಿನಗಳಲ್ಲಿ ಹೇಳುವುದಾಗಿ ಕುತೂಹಲ ಹುಟ್ಟಿಸಿದ್ದಾರೆ.
ಸಿಎಂ ಬಗ್ಗೆ ಭವಿಷ್ಯ ನುಡಿದ ಸ್ವಾಮೀಜಿ, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಈ ಬಾರಿ ಮಳೆ ಹೆಚ್ಚಾಗುವುದರಿಂದ ಜಲಸ್ಫೋಟ ಉಂಟಾಗುತ್ತದೆ. ಇದರಿಂದ ಸ್ವಲ್ಪ ಸಮಸ್ಯೆ ಆಗಬಹುದು. ದೇಶದಲ್ಲಿ ಮೇಘ ಸ್ಫೋಟ ಆಗಲಿದ್ದು, ಯುದ್ಧ ಇದ್ದು, ಕಾರ್ಮೋಡ ಕವಿಯಲಿದೆ. ಕರೋನಾ ಇನ್ನೊಂದು ರೂಪ ತಾಳಲಿದೆ, ಇದರಿಂದ ಸಾವು ನೋವು ಕಡಿಮೆ ಇದ್ದರೂ ಸಮಸ್ಯೆ ಇದ್ದೇ ಇದೆ. ರಾಜ್ಯ ಹಾಗೂ ದೇಶಕ್ಕೆ ಕಂಟಕ ಇದ್ದು, ಕೆಲ ಜನರು ಬಲಿಯಾಗಲಿದ್ದಾರೆ ಎಂದಿದ್ದಾರೆ.
ಈ ಸುದ್ದಿಯನ್ನೂ ಓದಿ | Pralhad Joshi: ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದ ಪ್ರಲ್ಹಾದ್ ಜೋಶಿ