Youtube Channels: ಯೂಟ್ಯೂಬ್ ಚಾನೆಲ್ಗಳಿಗೆ ಲೈಸೆನ್ಸ್ ಕಡ್ಡಾಯ ಮಾಡಲು ಕ್ರಮ ಎಂದ ಸಿಎಂ
CM Siddaramaiah: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಆದರೆ ಬ್ಲ್ಯಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯೂಟ್ಯೂಬ್ ಚಾನೆಲ್ಗಳು ಸಮಾಜಕ್ಕೆ ಶಾಪ ಆಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

-

ಹುಬ್ಬಳ್ಳಿ ಸೆ.15: ಪತ್ರಕರ್ತರು ಮೊದಲು ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಬೇಕು. ಇದು ಸಮಾಜಕ್ಕೆ ಹಾನಿಕರ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕೆಲಸವನ್ನು ನಮ್ಮ ಸರ್ಕಾರ ಮಾಡಲ್ಲ. ಆದರೆ ಬ್ಲ್ಯಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯೂಟ್ಯೂಬ್ ಚಾನೆಲ್ಗಳು (Youtube Channels) ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಸಿಎಂ ಅವರು ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ, ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನೆಲ್ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಈ ಸುದ್ದಿಯನ್ನೂ ಓದಿ | CM Siddaramaiah: ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ಯೂಟ್ಯೂಬ್ ಚಾನೆಲ್ಗಳ ಹಾವಳಿಗೆ ತಡೆ
ಬ್ಲ್ಯಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯೂಟ್ಯೂಬ್ ಚಾನೆಲ್ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯೂಟ್ಯೂಬ್ ಚಾನೆಲ್ಗಳ (Youtube Channel) ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.