Self Harming: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ
Mandya News: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯಲ್ಲಿ ಘಟನೆ ನಡೆದಿದೆ. ಯುವತಿಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಹೇಳಿದ್ದರು. ಇದರಿಂದ ಮನನೊಂದ ಯುವತಿ, ಕಚೇರಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

-

ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯಲ್ಲಿ ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಘಟನೆ ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ (26) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಈಕೆಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ, ಕಚೇರಿಯಲ್ಲಿ ಶುಕ್ರವಾರ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಮದುವೆಯಾಗುವುದಾಗಿ ನಂಬಿಸಿ ವಕೀಲೆಗೆ ಅತ್ಯಾಚಾರ, ಕಾನ್ಸ್ಟೇಬಲ್ ಸೆರೆ
ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ವಕೀಲೆಯೊಬ್ಬರಿಗೆ (Advocate) ಮದುವೆಯಾಗುತ್ತೇನೆ ಎಂದು ಹೇಳಿ ನಂಬಿಸಿ ಅತ್ಯಾಚಾರ ಎಸಗಿರುವ (Physical Abuse) ಆರೋಪದ ಮೇಲೆ ಸ್ಪೆಷಲ್ ಆಕ್ಷನ್ ಫೋರ್ಸ್ ಅಲ್ಲಿದ್ದ ಸಿದ್ದೇಗೌಡ ಎನ್ನುವವರ ಮೇಲೆ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ಇದೀಗ ಪೊಲೀಸ್ ಕಾನ್ಸ್ಟೇಬಲ್ (police constable) ಸಿದ್ದೇಗೌಡನನ್ನು ಆರೆಸ್ಟ್ ಮಾಡಿದ್ದಾರೆ.
ಸಿದ್ದೇಗೌಡನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಮಂಗಳೂರಿನ ಪಾಂಡೇಶ್ವರ SAF ನಲ್ಲಿದ್ದ ಪಿಸಿ ಸಿದ್ದೇಗೌಡ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಸಿದ್ದೇಗೌಡ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ನಿವಾಸಿ. ಹುಬ್ಬಳ್ಳಿಯಲ್ಲಿ ನಡೆದ ಮದುವೆಯೊಂದರಲ್ಲಿ ಸಿದ್ದೇಗೌಡನಿಗೆ ಯುವತಿಯ ಪರಿಚಯವಾಗಿದೆ.
ಇದನ್ನೂ ಓದಿ: Actress Shilpa Shetty: 60 ಕೋಟಿ ವಂಚನೆ-ರೆಸ್ಟೋರೆಂಟ್ ಮುಚ್ಚಿದ ಶಿಲ್ಪಾ ಶೆಟ್ಟಿ
ಮೊದಲಿಗೆ ಮದುವೆಯಾಗುವುದಾಗಿ ಸಿದ್ದೇಗೌಡ ಹೇಳಿದ್ದ. ಮದುವೆಗೂ ಮುಂಚೆ ಯುವತಿಯನ್ನು ಕರೆಸಿ ಅತ್ಯಾಚಾರ ಎಸಗಿದ್ದಾನೆ. ಬೆಂಗಳೂರಿನ ಕೆಲವು ಕಡೆ ಲಾಡ್ಜ್ ಬುಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಜಾತಿ ವಿಚಾರ ಎತ್ತಿ, ಈ ಮದುವೆ ಬೇಡ ಎಂದು ಸಿದ್ದೇಗೌಡ ಹೇಳಿದ್ದಾನೆ. ನಿಮ್ಮದು ಕೀಳು ಜಾತಿ, ಮದುವೆಗೆ ನಮ್ಮ ಮನೆಯಲ್ಲಿ ಒಪ್ಪಲ್ಲ ಅಂತ ಹೇಳಿದ್ದಾನೆ. ಜೊತೆಗೆ ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿದ್ದಾನೆ ಎಂದು ವಕೀಲೆ ಬಸವೇಶ್ವರನಗರ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಿಸಿ ಸಿದ್ದೇಗೌಡನನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ.