ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಹೋದ ಬಾಲಕ ನೀರುಪಾಲು

Mysore News: ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ದುರ್ಘಟನೆ ನಡೆದಿದೆ. ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ತೆರಳಿದ್ದ ವೇಳೆ ಸ್ನಾನಕ್ಕೆಂದು ನದಿಗೆ ಇಳಿದಾಗ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಶವವನ್ನು ಹೊರ ತೆಗೆದಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಹೋದ ಬಾಲಕ ನೀರುಪಾಲು

-

Prabhakara R
Prabhakara R Mar 30, 2025 2:07 PM

ಮೈಸೂರು: ಜಿಲ್ಲೆಯಲ್ಲಿ ಯುಗಾದಿ ಹಬ್ಬದ ದಿನದಂದು ಘೋರ ದುರಂತ ನಡೆದಿದೆ. ಯುಗಾದಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನದಿಗೆ ಇಳಿದಿದ್ದ ಬಾಲಕ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ (Mysore News) ಟಿ.ನರಸೀಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಶರಣ್ (13) ಎಂದು ಗುರುತಿಸಲಾಗಿದೆ. ಮೃತ ಶರಣ್ ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿದ್ದಾನೆ.

ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಬಂದಿದ್ದ. ಈ ವೇಳೆ ಸ್ನಾನಕ್ಕೆಂದು ನದಿಗೆ ಇಳಿದಾಗ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಶವವನ್ನು ಹೊರ ತೆಗೆದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸುದ್ದಿಯನ್ನೂ ಓದಿ | Murder Case: ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಸಹೋದರರು!

ಸೊಸೈಟಿ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ಗೆ ವೋಟು ಹಾಕಿಸಿದ್ದಕ್ಕೆ ಯುವತಿ ಮೇಲೆ ಮಾರಣಾಂತಿಕ ಹಲ್ಲೆ!

ಮಂಡ್ಯ: ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವೋಟ್ ಹಾಕಿಸಿದ್ದಕ್ಕಾಗಿ ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ( Assault Case) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಯಿಂದ ಯುವತಿಯ ತುಟಿ ಕಟ್‌ ಆಗಿದ್ದು, ಹಲ್ಲುಗಳು ಮುರಿದಿವೆ. ಈ ಸಂಬಂಧ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ. ಜೆಡಿಎಸ್ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಶಾಂತ್, ಪ್ರತಾಪ್ ರಾಜು, ಪ್ರಮೋದ್ ಹಾಗೂ ಹರೀಶ್ ಎಂಬುವರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಪಕ್ಷಕ್ಕೆ ಓಟು ಹಾಕಿಸಿದ್ದಕ್ಕೆ ಯುವತಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೆಡಿಎಸ್ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಶಾಂತ್ ಮತ್ತು ಗ್ಯಾಂಗ್ ಗೂಂಡಾಗಿರಿ ನಡೆಸಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ. ದೂರು ಕೊಟ್ಟಿದ್ದಕ್ಕೆ ರಘು ಮತ್ತು ವಿಕಾಸ್ ಕುಟುಂಬಸ್ಥರ ಮೇಲೂ ಹಲ್ಲೆ ನಡೆಸಲಾಗಿದೆ.

ಈ ಸುದ್ದಿಯನ್ನೂ ಓದಿ | Road Accident: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವು; ರೊಚ್ಚಿಗೆದ್ದು ಲಾರಿಗೆ ಬೆಂಕಿ ಹಚ್ಚಿದ ಜನ