Heart Failure: ಪ್ರೀತಿಸಿ ಮದುವೆಯಾದ ಮೂರೇ ದಿನದಲ್ಲಿ ವರ ಹೃದಯಾಘಾತಕ್ಕೆ ಬಲಿ
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾಗಿದ್ದ ಶಶಾಂಕ್ ಎನ್ನುವ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಪುರಸಭೆ ಸದಸ್ಯ ಕೆಸಿ ಮಂಜುನಾಥ್ ಪುತ್ರ ಶಶಾಂಕ್ (28) ಹೀಗೆ ಸಾವನ್ನಪ್ಪಿದವರು.

ಮೃತ ಶಶಾಂಕ್

ಮಂಡ್ಯ: ಇತ್ತೀಚೆಗೆ ಪೂರ್ವಹಿನ್ನೆಲೆ ಇಲ್ಲದಿದ್ದರೂ ಆಕಸ್ಮಿಕವಾಗಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ (Heart Failure) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಮಂಡ್ಯ (Mandya News) ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮೂರು ದಿನದ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾಗಿದ್ದ ಶಶಾಂಕ್ ಎನ್ನುವ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಪುರಸಭೆ ಸದಸ್ಯ ಕೆಸಿ ಮಂಜುನಾಥ್ ಪುತ್ರ ಶಶಾಂಕ್ (28) ಹೀಗೆ ಸಾವನ್ನಪ್ಪಿದವರು. ಕಳೆದ ಭಾನುವಾರ ಶಶಾಂಕ್ ಹಸೆಮಣೆ ಏರಿದ್ದು, ಜಾರ್ಖಂಡ್ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ನಿನ್ನೆ ಹೃದಯಾಘಾತದಿಂದ ಶಶಾಂಕ್ ಸಾವನ್ನಪ್ಪಿದ್ದಾರೆ.
ಹುಣಸೂರಿನಲ್ಲಿ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿ ಕೊಲೆ
ಮೈಸೂರು: ಹುಣಸೂರು (Hunsur) ತಾಲ್ಲೂಕಿನ ನಾಡಪ್ಪನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವೃದ್ಧ ದಂಪತಿಯನ್ನು (Senior couple) ಭೀಕರವಾಗಿ ಹತ್ಯೆ (Double murder Case) ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ದೊಡ್ಡ ಗಾತ್ರದ ಕಲ್ಲಿನಿಂದ ಹೊಡೆದು ಕೊಂದಿದ್ದಾರೆ. ಮೃತರನ್ನು ಬಿಲ್ಕೆರೆ ಹೋಬಳಿಯ ನಾಡಪ್ಪನಹಳ್ಳಿ ನಿವಾಸಿಗಳಾದ ರಂಗಸ್ವಾಮಿಗೌಡ (65) ಮತ್ತು ಅವರ ಪತ್ನಿ ಶಾಂತಮ್ಮ (52) ಎಂದು ಗುರುತಿಸಲಾಗಿದೆ.
ದಂಪತಿಗೆ ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಮತ್ತು ಒಬ್ಬ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಒಣಗಿದ ಶುಂಠಿಯನ್ನು ಸಂಗ್ರಹಿಸಲು ಕೆಲಸಗಾರ ಗಣೇಶ್ ಸಂಜೆ ತೋಟದ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳನ್ನು ಕಂಡು ಗಾಬರಿಗೊಂಡು ತಕ್ಷಣ ದೇವರಾಜ್ಗೆ ಮಾಹಿತಿ ನೀಡಿದರು.
ದೇವರಾಜ್ ಸ್ಥಳಕ್ಕೆ ಬರುವ ಹೊತ್ತಿಗೆ, ಅವರ ಪೋಷಕರಿಬ್ಬರೂ ಸಾವನ್ನಪ್ಪಿದ್ದರು. ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ, ಎಸ್ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಸಬ್ ಇನ್ಸ್ಪೆಕ್ಟರ್ ಲೋಲಾಕ್ಷಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನಿಂದ ಬಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ವಿಧಿವಿಜ್ಞಾನ ತಂಡವನ್ನು ಸಹ ಸಾಕ್ಷ್ಯಗಳನ್ನು ಸಂಗ್ರಹಿಸಲು ನಿಯೋಜಿಸಲಾಗಿತ್ತು. ದುಷ್ಕರ್ಮಿಗಳು ದರೋಡೆ ಪ್ರಯತ್ನಿಸಿ ಅಥವಾ ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: Ranya Rao: ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್ಗೆ 14 ದಿನ ನ್ಯಾಯಾಂಗ ಬಂಧನ