Road Accident: ಭೀಕರ ಅಪಘಾತ, ಲಾರಿ ಡಿಕ್ಕಿಯಾಗಿ ಬೈಕ್ ಸವಾರರ ಸಾವು; ಒಬ್ಬನ ರುಂಡವೇ ಕಟ್
ಅಪಘಾತದಲ್ಲಿ (Road accident) ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಮೃತರನ್ನು ಶೇಖರ್ (26) ಹಾಗೂ ಶಂಕರ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಪಿರಿಯಾಪಟ್ಟಣ ತಾಲೂಕು ಹಿಟ್ನೆಬಾಗಿಲು ಗ್ರಾಮದ ಯುವಕರು ಎಂದು ತಿಳಿದು ಬಂದಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೈಸೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ (Road Accident) ಸಂಭವಿಸಿದ್ದು, ಮೈಸೂರಿನಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿ (lorry hit bike) ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು (bike riders death) ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಓರ್ವ ಬೈಕ್ ಸವಾರನ ರುಂಡವೇ ಮುಂಡದಿಂದ ಕತ್ತರಿಸಿ ಬೇರ್ಪಟ್ಟಿದೆ. ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ತಲೆ ಕಟ್ ಆಗಿ ಹಾರಿಹೋದ ಘಟನೆ ಮೈಸೂರು ಜಿಲ್ಲೆಯ ಗೊರಹಳ್ಳಿ ಕೆರೆ ಏರಿಯ ಮೇಲೆ ನಡೆದಿದೆ.
ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಮೃತರನ್ನು ಶೇಖರ್ (26) ಹಾಗೂ ಶಂಕರ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಪಿರಿಯಾಪಟ್ಟಣ ತಾಲೂಕು ಹಿಟ್ನೆಬಾಗಿಲು ಗ್ರಾಮದ ಯುವಕರು ಎಂದು ತಿಳಿದು ಬಂದಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತ್ಯು
ತಿಪಟೂರು: ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ (Tiptur Accident) ತಾಲೂಕಿನ ಕಸಬಾ ಹೋಬಳಿ ಮತ್ತಿಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿದೆ. ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಪರಸ್ವರ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಅಯ್ಯನ ಬಾವಿಯ ನಿವಾಸಿಗಳಾದ ಉಮೇಶ್ (32), ರಜಿನಿಕಾಂತ್ (33) ಮೃತಪಟ್ಟ ದುರ್ದೈವಿಗಳು.
ಇದನ್ನೂ ಓದಿ: Sandur Accident: ಸಂಡೂರಿನಲ್ಲಿ ಭೀಕರ ಅಪಘಾತ; ಟಿಪ್ಪರ್ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ