NEET exam: ಇಂದು ದೇಶಾದ್ಯಂತ ನೀಟ್ ಪರೀಕ್ಷೆ: ಮೂಗುತಿ, ಹೈಹೀಲ್ಸ್ ಕೂಡ ನಿಷೇಧ
ನೀಟ್ ಪರೀಕ್ಷೆಗೆ (NEET exam) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್ಟಿಎ ಕೆಲವೊಂದು ವಸ್ತ್ರಸಂಹಿತೆಯನ್ನ (Dress code) ನೀಡಿದೆ. ನೀಟ್ ಪರೀಕ್ಷೆಗೆ ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್, ನತ್ತು, ಹೈ ಹೀಲ್ ಚಪ್ಪಲಿ ನಿಷೇಧವಿದೆ. ಯಾವುದೇ ಲೋಹದ ಉಪಕರಣ ಧರಿಸಲು ಅವಕಾಶವಿಲ್ಲ.

ಸಾಂದರ್ಭಿಕ ಚಿತ್ರ

ಬೆಂಗಳೂರು: 2025-26ನೇ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ಇಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವತಿಯಿಂದ ನೀಟ್ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ದೇಶಾದ್ಯಂತ ಏಕಕಾಲಕ್ಕೆ ನಡೆಯುವ ಈ ಪರೀಕ್ಷೆಗೆ ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲ್ಲಿದೆ. ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
ಇಂದು ನಡೆಯುವ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ.
ನೀಟ್ ಪರೀಕ್ಷೆಯ ಮಾರ್ಗಸೂಚಿಗಳು
ನೀಟ್ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್ಟಿಎ ಕೆಲವೊಂದು ವಸ್ತ್ರಸಂಹಿತೆಯನ್ನ (Dress code) ನೀಡಿದೆ. ನೀಟ್ ಪರೀಕ್ಷೆಗೆ ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್, ನತ್ತು, ಹೈ ಹೀಲ್ ಚಪ್ಪಲಿ ನಿಷೇಧವಿದೆ. ಯಾವುದೇ ಲೋಹದ ಉಪಕರಣ ಧರಿಸಲು ಅವಕಾಶವಿಲ್ಲ. ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ ದೊಡ್ಡ ಬಟನ್ ಗಳಿರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್ ಧರಿಸುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಅಥವಾ ಧರಿಸಲು ಕೂಡ ಅವಕಾಶವಿಲ್ಲ.
ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಹಾಜರಿರಬೇಕು. ಪರೀಕ್ಷೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ. ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸರಿಯಾದ ಸಮಯದೊಳಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಇತ್ತೀಚೆಗೆ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಬೀದರ್ ಮತ್ತು ಶಿವಮೊಗ್ಗದಲ್ಲಿ ಜನಿವಾರ ತೆಗೆಸಿ ತೀವ್ರ ವಿವಾದವಾಗಿತ್ತು. ಆದರೆ ತಾಳಿ ಹಾಗೂ ಜನಿವಾರ ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಸಚಿವ ಸೋಮಣ್ಣ ಇತ್ತೀಚೆಗೆ ಹೇಳಿದ್ದರು.
ಇದನ್ನೂ ಓದಿ: CET 2025: ಜನಿವಾರ ವಿವಾದ; ಸುಚಿವ್ರತ್ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ