ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HS Venkateshmurthy Passed Away: ಕವಿ ಎಚ್‌ಎಸ್‌ವಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸಂತಾಪ

HS Venkateshmurthy Passed Away: ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಬರೆದಿದ್ದಾರೆ.

ಕವಿ ಎಚ್‌ಎಸ್‌ವಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸಂತಾಪ

ಹರೀಶ್‌ ಕೇರ ಹರೀಶ್‌ ಕೇರ May 30, 2025 1:01 PM

ಬೆಂಗಳೂರು: ಹಿರಿಯ ಸಾಹಿತಿ, ಕವಿ ಎಚ್ ಎಸ್ ವೆಂಕಟೇಶಮೂರ್ತಿ ಅವರ ನಿಧನಕ್ಕೆ (HS Venkateshmurthy Passed Away) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಸೇರಿದಂತೆ ನಾಡಿನ ನಾನಾ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. ಕಾವ್ಯದಿಂದ ಚಿತ್ರಗೀತೆಗಳವರೆಗೂ ನಾನಾ ಪ್ರಕಾರಗಳಲ್ಲಿ ಬರೆದು ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದ ಎಚ್‌ ಎಸ್‌ ವೆಂಕಟೇಶಮೂರ್ತಿಯವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾಗದ ನಷ್ಟವುಂಟುಮಾಡಿದೆ ಎಂದಿದ್ದಾರೆ.

"ಹಿರಿಯ ಸಾಹಿತಿ ಎಚ್ ಎಸ್ ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟುಮಾಡಿದೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು" ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಬರೆದಿದ್ದಾರೆ.



"ನಗುತ ಹುಟ್ಟಿ ನಗುತ ಮುಗಿವ ನಗುವ ಹೂವೆ ಮಾದರಿ - ಎಚ್ಚೆಸ್ವಿ. ಭಾವಗೀತೆಗಳ ಮೂಲಕ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಹೆಚ್ಚಿಸಿದ ಹಿರಿಯ ಕವಿ ಎಚ್ಚೆಸ್ವಿ ಎಂದೇ ಜನಜನಿತರಾಗಿದ್ದ ಎಚ್.ಎಸ್. ವೆಂಕಟೇಶಮೂರ್ತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಕಾದಂಬರಿ, ಕತೆ, ವಿಮರ್ಶೆ, ಕವನ, ಮಕ್ಕಳ ಸಾಹಿತ್ಯ, ಸಿನಿಮಾ ಸಾಹಿತ್ಯ, ರಂಗಭೂಮಿ ಹೀಗೆ ಎಲ್ಲಾ ಸಾಹಿತ್ಯ ಪ್ರಕಾರಗಳಲ್ಲೂ ಎಚ್ಚೆಸ್ವಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಅಪಾರ ಅಭಿಮಾನಿ ವರ್ಗಕ್ಕೆ, ಕುಟುಂಬಕ್ಕೆ, ಆಪ್ತರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಭಾವಗಳ ಕವಿಗೆ ಭಾವಪೂರ್ಣ ವಿದಾಯ‌" ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.



"ಕನ್ನಡಿಗರ ಜೀವನೋತ್ಸಾಹವನ್ನು ಹೆಚ್ಚಿಸಿದ ಕವಿ ಎಚ್‌ ಎಸ್‌ ವೆಂಕಟೇಶ್‌ ಮೂರ್ತಿ ಅವರಿಗೆ ಗೌರವಪೂರ್ವಕ ನಮನಗಳು. ಎಚ್.ಎಸ್.ವೆಂಕಟೇಶಮೂರ್ತಿ (ಜೂನ್ ೨೩,೧೯೪೪ – ಮೇ ೩೦, ೨೦೨೫) ಅಂದರೆ ಕನ್ನಡಿಗರಿಗೆ ಬಹಳ ಪ್ರೀತಿ. ಅವರ ಕವಿತೆಗಳೆಲ್ಲ ಹಾಡುಗಳಾಗಿ ಕನ್ನಡಿಗರ ಮನೆ ಮನೆ ತಲುಪಿದ್ದು ನಮಗೆ ಗೊತ್ತೇ ಇದೆ. ವೆಂkಟೇಶಮೂರ್ತಿಯವರ ಬರೆಹದ ವಿಸ್ತಾರ ದೊಡ್ಡದು. ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಹಳಗನ್ನಡ ಇತ್ಯಾದಿ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಮೂರ್ತಿಯವರು ಒಳ್ಳೆಯ ಭಾಷಣಕಾರರಾಗಿದ್ದರು. ಸ್ನೇಹಕ್ಕೆ ಬಹಳ ಬೆಲೆ ಕೊಡುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಅವರದು. ಅವರಿಗೆ ಅಂತಿಮ ನಮಗಳು" ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: HS Venkateshmurthy Passed Away: ಅಗಲಿದ ಕವಿ ಎಚ್‌ಎಸ್‌ ವೆಂಕಟೇಶಮೂರ್ತಿಗೆ ಶೋಕದ ಮಹಾಪೂರ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ