ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CET Exam: ಸಿಇಟಿ ಪರೀಕ್ಷೆಗೆ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು, ಖಂಡನೆ

ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

ಸಿಇಟಿ ಪರೀಕ್ಷೆಗೆ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು, ಖಂಡನೆ

ಹರೀಶ್‌ ಕೇರ ಹರೀಶ್‌ ಕೇರ Apr 18, 2025 7:06 AM

ಶಿವಮೊಗ್ಗ: ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಬ್ರಾಹ್ಮಣ (Brahmin) ವಿದ್ಯಾರ್ಥಿಗಳ (Students) ಜನಿವಾರ (Sacred thread) ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ. ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ.

ಈ ರೀತಿ ಗಾಯತ್ರಿ ದೀಕ್ಷೆ ಪಡೆದು ಆತ್ಮಸಾಕ್ಷಾತ್ಕಾರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದು ಅವಮಾನಕಾರಿಯಾಗಿದೆ. ಈ ಘಟನೆ ಖಂಡನೀಯವಾಗಿದೆ ಎಂದು ಬ್ರಾಹ್ಮಣ ಸಂಘಗಳ ಒಕ್ಕೂಟ ಖಂಡಿಸಿದೆ. ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

ಕೂಡಲೇ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ, ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋಧಿ ಕೃತ್ಯ ಎಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ’ಬ್ರಾಹ್ಮಣರ ಕಾಫಿ ಬಾರ್‌’ ಯಶಸ್ಸಿನ ಹಿಂದೆ ರಾಧಾಕೃಷ್ಣ ಅಡಿಗ