ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BY Vijayendra: ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

BY Vijayendra: ಶಿಕಾರಿಪುರ ಮಂಡಲದಲ್ಲಿ ನಡೆದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಸ್ಮೃತಿ ದಿನ ಹಾಗೂ ಜಗನ್ನಾಥ ರಾವ್ ಜೋಶಿ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು, ಶ್ಯಾಮಪ್ರಸಾದ ಮುಖರ್ಜಿ ಮತ್ತು ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜಗನ್ನಾಥ ರಾವ್ ಜೋಶಿ ಅವರು ನಮಗೆ ಪ್ರೇರಣಾದಾಯಕರು ಎಂದು ತಿಳಿಸಿದ್ದಾರೆ.

ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

Profile Siddalinga Swamy Jun 23, 2025 4:52 PM

ಶಿಕಾರಿಪುರ: ಶ್ಯಾಮಪ್ರಸಾದ ಮುಖರ್ಜಿ ಮತ್ತು ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜಗನ್ನಾಥ ರಾವ್ ಜೋಶಿ ಅವರು ನಮಗೆ ಪ್ರೇರಣಾದಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದರು. ಶಿಕಾರಿಪುರ ಮಂಡಲದಲ್ಲಿ ನಡೆದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಸ್ಮೃತಿ ದಿನ ಹಾಗೂ ಜಗನ್ನಾಥ್ ರಾವ್ ಜೋಶಿ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1951 ರಲ್ಲಿ ಜನಸಂಘದ ಸ್ಥಾಪನೆಯಲ್ಲಿ ಇವರು ಸಹ ಪ್ರಮುಖರು. ಮುಖರ್ಜಿಯವರು ದೇಶಕ್ಕಾಗಿ ಹೋರಾಡಿದ ನಾಯಕರು. ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜೋಶಿಯವರು ಸಹ ದೇಶಕ್ಕಾಗಿ ಸಮರ್ಪಿಸಿಕೊಂಡವರು. ಈ ಇಬ್ಬರು ಮಹಾನ್ ಚೇತನಗಳಿಗೆ ಈ ದಿನ ಗೌರವ ಸಲ್ಲಿಸುವ ವಿಶೇಷ ಸಂದರ್ಭದಲ್ಲಿ ಅವರನ್ನು ಸ್ಮರಿಸುತ್ತ ಮುಂದಿನ ದಿನಗಳಲ್ಲಿ ಇವರ ಹೋರಾಟಗಳು ನಮಗೆ ಪ್ರೇರಣಾದಾಯಕ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಸಂಘಟನೆಯ ಮುಖಂಡರಾದ ಕೆ.ಎಸ್. ಗುರುಮೂರ್ತಿ, ಟಿ. ರಾಮನಾಯ್ಕ, ವಸಂತ ಗೌಡ, ಚೆನ್ನವೀರಪ್ಪ, ಶಿವಪ್ಪ ಬಿಎಸ್‍ಎನ್‍ಎಲ್, ಗಿರೀಶ್ ಧಾರವಾಡ, ಸುಧೀರ ಮಾರವಳ್ಳಿ, ಯುವ ಮೋರ್ಚಾದ ಅಧ್ಯಕ್ಷ ವೀರಣ್ಣ ಗೌಡ, ಬೆಣ್ಣೆ ಪ್ರವೀಣ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | SBI Recruitment 2025: ಬರೋಬ್ಬರಿ 2,964 ಹುದ್ದೆಗಳ ಭರ್ತಿಗೆ ಮತ್ತೊಮ್ಮೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ

ಬಿಎಸ್‌ವೈ ಪುಷ್ಪಾರ್ಚನೆ

BSY

ಬೆಂಗಳೂರು: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮೃತಿ ದಿನ ಮತ್ತು ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಅವರ ಜನ್ಮದಿನದ ಪ್ರಯುಕ್ತ ಇಂದು ನಗರ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಬಿ. ಎಸ್.‌ ಯಡಿಯೂರಪ್ಪ ಮತ್ತು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಮತ್ತು ಜಗನ್ನಾಥ್‌ ರಾವ್‌ ಜೋಶಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪರಿಷತ್‌ ಸದಸ್ಯರಾದ ಕೇಶವ ಪ್ರಸಾದ್‌, ಮಾಜಿ ಶಾಸಕರಾದ ಎಂ. ಡಿ. ಲಕ್ಷ್ಮೀನಾರಾಯಣ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಎಸ್. ದತ್ತಾತ್ರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.