ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ekka Movie: ಸಿದ್ಧಗಂಗಾ ಮಠದ ಬಳಿ ಮಹಿಳೆಗೆ ʼಎಕ್ಕʼ ಚಿತ್ರತಂಡದ ಕಾರು ಡಿಕ್ಕಿ; ತಿರುಗಿಯೂ ನೋಡದೆ ಹೋದ ಬೌನ್ಸರ್‌ಗಳು!

Ekka Movie: ಎಕ್ಕ ಚಿತ್ರತಂಡವು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ಅಪಘಾತ ನಡೆದಿದೆ. ಬೌನ್ಸರ್ ಕಾರು ರಸ್ತೆ ಬದಿಯಿದ್ದ ಮಹಿಳೆಯೊಬ್ಬರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಪೆಟ್ಟಾಗಿದೆ ಎಂದು ತಿಳಿದುಂದಿದೆ.

ಸಿದ್ಧಗಂಗಾ ಮಠದ ಬಳಿ ಮಹಿಳೆಗೆ ಎಕ್ಕ ಚಿತ್ರತಂಡದ ಕಾರು ಡಿಕ್ಕಿ

Profile Prabhakara R Jun 15, 2025 6:52 PM

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಯುವ ರಾಜ್‌ಕುಮಾರ್ (Yuva Rajkumar) ನಟನೆಯ ಎಕ್ಕ ಚಿತ್ರತಂಡ (Ekka Movie) ಭೇಟಿ ನೀಡಿದ್ದ ವೇಳೆ ಎಡವಟ್ಟು ನಡೆದಿದ್ದು, ನಟನ ಬೌನ್ಸರ್‌ಗಳು ಇದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಹೀಗಿದ್ದರೂ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸದೇ ಅಮಾನವೀಯ ವರ್ತನೆ ತೋರಿರುವ ಆರೋಪ ಕೇಳಿ ಬಂದಿದೆ.

ಎಕ್ಕ ಚಿತ್ರತಂಡವು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ಅಪಘಾತ ನಡೆದಿದೆ. ಬೌನ್ಸರ್ ಕಾರು ರಸ್ತೆ ಬದಿಯಿದ್ದ ಮಹಿಳೆಯೊಬ್ಬರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಪೆಟ್ಟಾಗಿದೆ. ಇದರಿಂದ ಮಹಿಳೆ ನರಳಾಡುತ್ತ ಆಸ್ಪತ್ರೆಗೆ ಸೇರಿಸುವಂತೆ ಕೋರಿದರೂ ಗಮನಸದೇ ಎಕ್ಕ ಚಿತ್ರತಂಡ ಸ್ಥಳದಿಂದ ತೆರಳಿದೆ. ಚಿತ್ರತಂಡದ ಜತೆ ನಟ ಯುವರಾಜ್ ಕುಮಾರ್ ಸಹ ಇದ್ದರು ಎಂದು ತಿಳಿದುಬಂದಿದೆ.

ಸಿದ್ಧಗಂಗಾ ಮಠದ ಶಾಲೆಗೆ ಮಗುವನ್ನು ಬಿಟ್ಟು ಹೋಗಲು ಮಹಿಳೆ ಬಂದಿದ್ದರು. ವಾಪಸ್ ತೆರಳುತ್ತಿದ್ದ ವೇಳೆ ಎಕ್ಕ ಚಿತ್ರತಂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲೇ ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಬಳ್ಳಾರಿ ಮೂಲದ ಲಿಂಗಮ್ಮ ಎಂಬುವರ ಕಾಲಿಗೆ ಪೆಟ್ಟು ಬಿದ್ದಿದ್ದು, ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Drown In River: ಗೋದಾವರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಬಾಲಕರು ಸಾವು

ಕಾಂತಾರ ಚಿತ್ರತಂಡಕ್ಕೆ ಶಿವಮೊಗ್ಗ ಜಿಲ್ಲಾಡಳಿತದಿಂದ ನೋಟಿಸ್

ಶಿವಮೊಗ್ಗ: ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಬಹು ನಿರೀಕ್ಷಿತ ʼಕಾಂತಾರ ಚಾಪ್ಟರ್‌ 1ʼ (Kantara: Chapter 1) ಚಿತ್ರೀಕರಣ ಆರಂಭದಿಂದಲೂ ಒಂದಲ್ಲ ಒಂದು ಅಡಚಣೆ ಎದುರಾಗುತ್ತಲೇ ಬಂದಿದೆ. ಈ ನಡುವೆ ತೀರ್ಥಹಳ್ಳಿಯಲ್ಲಿ ಶನಿವಾರ ಶೂಟಿಂಗ್‌ ನಡೆಸುತ್ತಿದ್ದಾಗ ಕಲಾವಿದರಿದ್ದ ದೋಣಿ ಜಲಾಶಯದಲ್ಲಿ ಮಗುಚಿತ್ತು. ಅದೃಷ್ಟವಶಾತ್‌ ಯಾರಿಗೂ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಆದರೆ, ಇದೀಗ ಮತ್ತೊಂದು ಶಾಕ್‌ ಎದುರಾಗಿದ್ದು, ಚಿತ್ರಿಕರಣಕ್ಕೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಚಿತ್ರತಂಡಕ್ಕೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

ಚಿತ್ರದ ಕೊನೆಯ ಹಂತದ ಶೂಟಿಂಗ್‌ಗಾಗಿ ರಿಷಬ್‌ ಶೆಟ್ಟಿ ಮತ್ತು ತಂಡ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬೀಡುಬಿಟ್ಟಿದೆ. ಅದರಂತೆ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಶೂಟಿಂಗ್‌ ನಡೆಸುತ್ತಿದ್ದಾಗ ಅವಘಡ ಸಂಭವಿಸಿತ್ತು. ಈ ವೇಳೆ ರಿಷಬ್‌ ಸೆಟ್ಟಿ ಸೇರಿದಂತೆ ಸುಮಾರು 30 ಮಂದಿ ಕಲಾವಿದರು ಸ್ಥಳದಲ್ಲಿದ್ದರು. ಅಲ್ಲದೆ ಮಗುಚಿದ ದೋಣಿಯಲ್ಲಿ ರಿಷಬ್‌ ಕೂಡ ಇದ್ದರು ಎನ್ನಲಾಗಿದ್ದು, ಎಲ್ಲರೂ ಈಜಿ ಸುರಕ್ಷಿತವಾಗಿ ದಡ ಸೇರಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಆಡಳಿತದಿಂದ ಅನುಮತಿ ಇಲ್ಲದೆ ಕಾಂತಾರ ಸಿನಿಮಾ ಶೂಟಿಂಗ್ ನಡೆಸುತ್ತಿದ್ದಾರೆ. ಹಾಗಾಗಿ ಚಿತ್ರತಂಡಕ್ಕೆ ನೋಟಿಸ್ ನೀಡುವುದಕ್ಕೆ ಜಿಲ್ಲಾಧಿಕಾರಿ ಗುರುದತ್ ಹೆಗ್ಡೆ ಸೂಚನೆ ನೀಡಿದ್ದಾರೆ. ಹೀಗಾಗಿ ತಹಶೀಲ್ದಾರ್ ರಶ್ಮಿ ಮೂಲಕ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Kantara Chapter 1: ಕಾಂತಾರ ಚಾಪ್ಟರ್ 1 ಬಿಡುಗಡೆ ಅಪ್‌ಡೇಟ್‌, ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ

ಇನ್ನು ನೋಟಿಸ್‌ಗೆ ಉತ್ತರ ನೀಡಿರುವ ಕಾಂತಾರ ಚಿತ್ರಕಂಡವು, ಬೆಂಗಳೂರಿನಿಂದ ಅನುಮತಿ ಪಡೆದಿದ್ದೇವೆ ಎಂದು ಹೇಳಿಕೆ ನೀಡಿದೆ. ಆದರೆ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿಲ್ಲ ಎಂದು ಉತ್ತರಿಸಿದ್ದಾರೆ. ಬೆಂಗಳೂರಿನಿಂದ ಅನುಮತಿ ಪಡೆದರೂ ಯಾವುದೇ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬೇಕಾದರೆ ಅಲ್ಲಿಯ ಸ್ಥಳೀಯ ಆಡಳಿತದ ಅನುಮತಿ ಪಡೆಯಬೇಕು ಎಂಬ ನಿಯಮವಿದೆ ಹಾಗಾಗಿ ಇದೀಗ ಕಾಂತಾರ ಚಿತ್ರಕ್ಕೆ ಜಿಲ್ಲಾಧಿಕಾರಿಗಳು ನೋಟಿಸ್ ನೀಡಿದ್ದಾರೆ.