Sira (Tumkur) News: ಭಾರತೀಯ ದಲಿತ ಸಂಘರ್ಷ ಸಮಿತಿಯಿಂದ 101 ಜೋಡಿಗಳ ಉಚಿತ ಸಾಮೂಹಿಕ ವಿವಾಹ; ಡಾ.ಎಚ್.ಪ್ರಕಾಶ ಬೀರಾವರ
ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜೂ.20ರ ಶುಕ್ರವಾರ ಬೆಳಿಗ್ಗೆ 10ಗಂಟೆಗೆ ಶಿವಮೊಗ್ಗ ವಿನೋಭ ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ನೂತನ ಯುವ ಘಟಕ ರಾಜ್ಯಾಧ್ಯಕ್ಷರ ಪದಗ್ರಹಣ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳ ಸಮಾವೇಶ ಹಾಗೂ 101 ಜೋಡಿಯ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಭಾರತೀಯ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಎಚ್.ಪ್ರಕಾಶ್ ಬೀರಾವರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಸಂಘದ ಉಪಾಧ್ಯಕ್ಷ ರಮೇಶ್.ಎಂ, ತಾಲೂಕು ಅಧ್ಯಕ್ಷ ಗೌನಹಳ್ಳಿ ರವಿಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

ಶಿರಾ: ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜೂ.20ರ ಶುಕ್ರವಾರ ಬೆಳಿಗ್ಗೆ 10ಗಂಟೆಗೆ ಶಿವಮೊಗ್ಗ ವಿನೋಭ ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ನೂತನ ಯುವ ಘಟಕ ರಾಜ್ಯಾಧ್ಯಕ್ಷರ ಪದಗ್ರಹಣ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳ ಸಮಾವೇಶ ಹಾಗೂ ೧೦೧ ಜೋಡಿಯ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಎಚ್.ಪ್ರಕಾಶ್ ಬೀರಾವರ ತಿಳಿಸಿದರು.
- ಅವರು ಈ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಭಾರತೀಯ ದಲಿತ ಸಂಘರ್ಷ ಸಮಿತಿಯು ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದು, ಅದೇ ರೀತಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ವಧು ವರರಿಗೂ ಉಚಿತವಾಗಿ ಬಟ್ಟೆ, ತಾಳಿ, ಕಾಲುಂಗುರ ನೀಡಲಾಗುತ್ತದೆ. ಹಾಗೂ ಒಂದು ದಿನ ಮುಂಚಿತವಾಗಿ ಬರುವವರಿಗೆ ಉಳಿದುಕೊಳ್ಳಲು ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ವಧು ವರರು ವಯಸ್ಸಿನ ದೃಢೀಕರಣ ಪತ್ರ, ಆಧಾರ್ ಕಾರ್ಡ್, ನಿವಾಸಿ ದೃಢೀಕರಣ ಪತ್ರ, ೪ ಪಾಸ್ ಫೋಟ್ ಸೈಜ್ ಫೋಟೋಗಳನ್ನು 15 ದಿಗಳ ಒಳಗೆ ಸಲ್ಲಿಸಬೇಕು. ೨ನೇ ವಿವಾಹ ಹಾಗೂ ಬಾಲ್ಯ ವಿವಾಹಕ್ಕೆ ಅವಕಾಶವಿಲ್ಲ. ನಕಲಿ ದಾಖಲೆ ಪತ್ರಗಳನ್ನು ನೀಡಿದಲ್ಲಿ ಸಂಘಟನೆಯು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಶಿರಾ ತಾಲೂಕಿನ ಆಸಕ್ತಿಯುಳ್ಳಿ ವಧುವರರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಳ್ಳಿ ಎಂದು ತಿಳಿಸಿದರು.
ಇದನ್ನೂ ಓದಿ: SIRA News: ಮುಂದಿನ ಪೀಳಿಗೆಗೆ ಶುದ್ಧವಾದ ನೀರನು ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಗುರುಶಿವ
- ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ವಸತಿ ಸಚಿವ ಜಮೀರ್ ಅಹಮದ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯ ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜು ನಾಥ್, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್, ಮಾಜಿ ಸಚಿವ ಎಚ್.ಆಂಜನೇಯ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು. ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಯಾವುದೇ ಧರ್ಮ, ಜಾತಿ ಬೇದವಿಲ್ಲದೆ ಹಿಂದೂ, ಮುಸ್ಲಿಂ, ಕ್ರೆöÊಸ್ತ ಬಾಂಧವರು ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
- ಭಾರತೀಯ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಗೌನಹಳ್ಳಿ ರವಿಕುಮಾರ್ ಮಾತನಾಡಿ ಶಿರಾ ತಾಲೂಕಿನ ಆಸಕ್ತ ವಧುವರರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ನೊಂದಾಯಿಸಿ ಕೊಳ್ಳಲು ನಮ್ಮನ್ನು ಸಂಪರ್ಕಿಸಬಹುದು ನಮ್ಮ ಮೊಬೈಲ್ ಸಂಖ್ಯೆ: ೯೦೩೫೧೬೫೯೪೧ ಈ ನಂಬರ್ಗೆ ಕರೆ ಮಾಡಿ ಹೆಸರನ್ನು ನೊಂದಾಯಿಸಿಕೊಳ್ಳಿ ಎಂದು ತಿಳಿಸಿದರು.
- ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ದಲಿತ ಸಂಘರ್ಷ ಸಮಿತಿ ರಾಜ್ಯ ಉಪಾಧ್ಯಕ್ಷ ರಮೇಶ್.ಎಂ. ಸೇರಿದಂತೆ ಹಲವರು ಹಾಜರಿದ್ದರು.