Tumkur (Gubbi) News: ಬಿದರೆ ಗ್ರಾಪಂ ಅಧ್ಯಕ್ಷರಾಗಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆ
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಾಪಂ ಇಓ ಶಿವಪ್ರಕಾಶ್ ನಡೆಸಿಕೊಟ್ಟರು. ಸಾಮಾನ್ಯ ಮಹಿಳೆ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಎಂ.ಎಸ್. ವರಲಕ್ಷ್ಮೀ ರಮೇಶ್ ಸಲ್ಲಿಸಿದ್ದ ರಾಜೀನಾಮೆ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾ ವಣೆ ನಡೆಸಲಾಗಿ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರೇಣುಕಮ್ಮ ಅವರನ್ನು ಅಧ್ಯಕ್ಷ ರಾಗಿ ಸರ್ವ ಸದಸ್ಯರ ಸಮ್ಮುಖದಲ್ಲಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.


ಗುಬ್ಬಿ: ತಾಲ್ಲೂಕಿನ ಚೇಳೂರು ಹೋಬಳಿ ಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗುಡ್ಡದಹಳ್ಳಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ತಾಪಂ ಇಓ ಶಿವಪ್ರಕಾಶ್ ನಡೆಸಿಕೊಟ್ಟರು. ಸಾಮಾನ್ಯ ಮಹಿಳೆ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಎಂ.ಎಸ್.ವರಲಕ್ಷ್ಮೀ ರಮೇಶ್ ಸಲ್ಲಿಸಿದ್ದ ರಾಜೀನಾಮೆ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾ ವಣೆ ನಡೆಸಲಾಗಿ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರೇಣುಕಮ್ಮ ಅವರನ್ನು ಅಧ್ಯಕ್ಷ ರಾಗಿ ಸರ್ವ ಸದಸ್ಯರ ಸಮ್ಮುಖದಲ್ಲಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.
ಇದನ್ನೂ ಓದಿ: Tumkur (Gubbi) News: ಡಾ.ಬಾಬು ಜಗಜೀವನ ರಾಮ್ ರವರ 39ನೇ ಪುಣ್ಯ ಸ್ಮರಣೆ
ನೂತನ ಅಧ್ಯಕ್ಷೆ ರೇಣುಕಮ್ಮ ರಾಮಕೃಷ್ಣಯ್ಯ ಮಾತನಾಡಿ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲ ಸವಲತ್ತುಗಳಾದ ನೀರು, ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಕೆಲಸ ಮಾಡುತ್ತೇನೆ. ಶಾಸಕ ವಾಸಣ್ಣ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಪಂಚಾಯಿತಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಗ್ರಾಪಂ ಸದಸ್ಯ ಯತೀಶ್ ಮಾತನಾಡಿ, ಬಿದರೆಯನ್ನು ಮಾದರಿ ಗ್ರಾಮ ಪಂಚಾಯಿತಿಯಾಗಿ ಗುರುತಿ ಸುವ ಕೆಲಸ ಎಲ್ಲಾ ಸದಸ್ಯರ ಜೊತೆ ಸೇರಿ ನಡೆಸುತ್ತೇವೆ. ಅಭಿವೃದ್ದಿ ಕೆಲಸಗಳಿಗೆ ಪಕ್ಷಾತೀತ ನಿಲುವು ತಾಳಿ ಎಲ್ಲಾ ಜನ ಪ್ರತಿನಿಧಿಗಳ ಭೇಟಿ ಮಾಡಿ ಸವಲತ್ತು ತರುವ ಕೆಲಸ ಮಾಡುತ್ತೇವೆ. ಶಾಸಕ ವಾಸಣ್ಣ ತೋರಿದ ಮಾರ್ಗದಲ್ಲಿ ಅಭಿವೃದ್ದಿ ಪಡಿಸಲು ಉಳಿದ ನಾಲ್ಕೈದು ತಿಂಗಳು ನಿರಂತರ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಗ್ರಾಪಂ ಉಪಾಧ್ಯಕ್ಷೆ ಸುಶೀಲ, ಸದಸ್ಯರಾದ ಶಿವಲಿಂಗಯ್ಯ, ಮೈಲಾರಯ್ಯ, ಪಾಂಡುರಂಗಯ್ಯ, ಕೃಷ್ಣಪ್ಪ, ಉಮೇಶ್, ಶಶಿಕಲಾ, ನೇತ್ರಾವತಿ, ಗೀತಾ, ಶಿವಣ್ಣ, ಉಮೇಶ್, ಮುಖಂಡರಾದ ಶಿವಾಜಿ ರಾವ್, ಕೃಷ್ಣೋಜಿರಾವ್, ಪಿಡಿಓ ಅಶೋಕ್ ಬಸವನಾಳ್ ಇತರರು ಇದ್ದರು.