Vaikuntha Ekadashi: ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ
ಬೆಳಿಗ್ಗೆ 7 ಗಂಟೆಗೆ ಸುಪ್ರಭಾತ ಸೇವೆಯಿಂದ ಆರಂಭವಾದ ಧಾರ್ಮಿಕ ಕೈಂಕರ್ಯ ನಿರಂತರ ರಾತ್ರಿ 8 ಗಂಟೆವರೆಗೆ ನಡೆಯಲಿದೆ. ಬೆಳಿಗ್ಗೆ ವಿಶ್ವರೂಪ ದರ್ಶನ, ವೈಕುಂಠ ದ್ವಾರ ಪ್ರವೇಶ, ಮಹಾ ಮಂಗಳಾ ರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಿರಂತರ ನಡೆಯಲಿದೆ. ರಾತ್ರಿ 8 ಗಂಟೆಗೆ ಹದಿನೆಂಟು ಕೋಮಿನ ಪ್ರಮುಖರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಸುವ ಮೂಲಕ ಇಡೀ ದಿನದ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ
-
Ashok Nayak
Dec 28, 2025 10:57 PM
ಗುಬ್ಬಿ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ಡಿ.30ರಂದು ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರ ದರ್ಶನ ಅದ್ದೂರಿಯಾಗಿ ನಡೆಯಲಿದೆ ಎಂದು ದೇವಾಲಯ ಸಮಿತಿ ತಿಳಿಸಿದೆ.
ಬೆಳಿಗ್ಗೆ 7 ಗಂಟೆಗೆ ಸುಪ್ರಭಾತ ಸೇವೆಯಿಂದ ಆರಂಭವಾದ ಧಾರ್ಮಿಕ ಕೈಂಕರ್ಯ ನಿರಂತರ ರಾತ್ರಿ 8 ಗಂಟೆವರೆಗೆ ನಡೆಯಲಿದೆ.
ಇದನ್ನೂ ಓದಿ: Gubbi News: ಪದಗ್ರಹಣ ಸಮಾರಂಭದಲ್ಲಿ ತಾಲ್ಲೂಕು ಬಿಜೆಪಿ ಸಾರಥ್ಯ ವಹಿಸಿದ ಬಲರಾಮಣ್ಣ
ಬೆಳಿಗ್ಗೆ ವಿಶ್ವರೂಪ ದರ್ಶನ, ವೈಕುಂಠ ದ್ವಾರ ಪ್ರವೇಶ, ಮಹಾ ಮಂಗಳಾ ರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಿರಂತರ ನಡೆಯಲಿದೆ. ರಾತ್ರಿ 8 ಗಂಟೆಗೆ ಹದಿನೆಂಟು ಕೋಮಿನ ಪ್ರಮುಖರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಸುವ ಮೂಲಕ ಇಡೀ ದಿನದ ಕಾರ್ಯಕ್ರಮ ಸಂಪನ್ನ ಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.