ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KG Halli-DJ Halli Case: ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣದ ಪ್ರಮುಖ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

KG Halli-DJ Halli Case: ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಮೌಸಿನ್‌ ಭಾಗಿಯಾಗಿದ್ದಾನೆ. ಹೀಗಾಗಿ ಇನ್ನುಳಿದ ಪ್ರಕರಣದಲ್ಲಿ ಬಾಡಿ ವಾರಂಟ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಶಿರಸಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣ; ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Profile Prabhakara R Apr 28, 2025 5:38 PM

ಕಾರವಾರ: ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣದ ಪ್ರಮುಖ ಆರೋಪಿ ಮೌಸಿನ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದಾನೆ. ಹೀಗಾಗಿ ಇನ್ನುಳಿದ ಪ್ರಕರಣದಲ್ಲಿ ಬಾಡಿ ವಾರಂಟ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

ಆರೋಪಿ ಮೌಸಿನ್ ವಿರುದ್ಧ ಉತ್ತರ ಕನ್ನಡ, ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಈತ ಉಗ್ರರ ಜತೆ ಸಂಪರ್ಕ ಹೊಂದಿದ್ದರ ಬಗ್ಗೆಯೂ ಮಾಹಿತಿ ಇದೆ. ಈ ಕಾರಣಕ್ಕಾಗಿಯೇ ಎನ್ಐಎ ಕೂಡ ಈತನ ಮನೆ ಮೇಲೆ ದಾಳಿ ನಡೆಸಿತ್ತು.

ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಪಿಎಫ್‌ಐ ಕಾರ್ಯಕರ್ತನಾಗಿದ್ದಲ್ಲದೇ ಉಗ್ರರಿಂದ ತರಬೇತಿ ಪಡೆದಿದ್ದ. ಈ ಹಿಂದೆ ಉಗ್ರ ಚಟುವಟಿಕೆ ಸಂಬಂಧಿಸಿ ಶಿರಸಿಯಲ್ಲಿ ಎನ್​ಐಎಯಿಂದ ಬಂಧಿತನಾಗಿದ್ದ ಸಾದಿಕ್​, ಆರೋಪಿ ಮೌಸೀನ್​ಗೆ ತರಬೇತಿ ನೀಡಿದ್ದ.​ ಅಲ್ಲದೇ ಶಿರಸಿಯಲ್ಲಿ 302 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದಾನೆ.

2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿ, ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್‌ನನ್ನು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಂಧಿಸಿದ್ದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ 5ನೇ ಆರೋಪಿ ಮೌಸಿನ್, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠಾಸೀನ ಶಿರಸಿ ಕೋರ್ಟ್‌ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಈ ಆರೋಪಿಯ ಪತ್ತೆಗಾಗಿ ಹೊಸ ಮಾರುಕಟ್ಟೆ ಪೊಲೀಸ್‌ ಠಾಣೆಯ ಪಿ.ಎಸ್.ಐ ರಾಜಕುಮಾರ ಉಕ್ಕಲಿ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ | Pahalgam Terror Attack: ದಾಳಿಗೂ ಮುನ್ನ ಉಗ್ರರ ಪ್ಲಾನ್‌ ಹೇಗಿತ್ತು? ಸಂದೇಶ ಕಳುಹಿಸಲು ಬಳಸಿದ್ರು ಚೀನಾ ಮೆಸೆಂಜರ್‌ ಅಪ್ಲಿಕೇಶನ್‌!

ಆರೋಪಿ ಮೌಸಿನ್ ಮನೆಯ ಮೇಲೆ ಈ ಹಿಂದೆ ಎನ್‌ಐಎ ದಾಳಿ ಮಾಡಿತ್ತು. ಇದರಿಂದ ತಲೆ ಮರೆಸಿಕೊಂಡು ಓಡಾಡುತ್ತಾ ಮಹಾರಾಷ್ಟ್ರದ ಅಮೀನಗಡ, ಬಾಂಬೆ ಕರ್ನಾಟಕದ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ವಾಸವಾಗಿದ್ದ. ಬಳಿಕ ತನ್ನ ಕಟುಂಬದವರೊಂದಿಗೆ ಹೈದರಾಬಾದ್‌ಗೆ ಹೋಗಿ ಅಲ್ಲಿಂದ ವಾಪಸ್ ಬರುತ್ತಿರಬೇಕಾದರೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.