ವಿಜಯನಗರದ ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆ ಲೋಕಾರ್ಪಣೆ ಇಂದು
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕರ ಕಚೇರಿ ಮುಂದೆ ವೇದಿಕೆ ಸಿದ್ಧತೆ ಮಾಡಲಾಗಿದೆ. ಈ ವೇಳೆ ಸಮಾರಂಭದ ಯಶಸ್ಸಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳು ವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರ ಕುಂದು ಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮದ ಆವರಣದಲ್ಲಿ ವಿಶೇಷ ಮಳಿಗೆ ಹಾಗೂ ಕೌಂಟರ್ ಗಳನ್ನು ಸ್ಥಾಪಿಸಲಾಗಿದೆ.
-
Ashok Nayak
Sep 5, 2026 8:46 AM
ಹೊಸಪೇಟೆ: ವಿಜಯನಗರದ ಕೂಡ್ಲಿಗಿಯಲ್ಲಿ ಸಿಎಂ ಡಿಕೆ ಶಿವಕುಮಾರ್(Chief Minister D K Shivakumar) ಅವರು ಶನಿವಾರ ಪ್ರಜಾಸೇವೆ ಇಲಾಖೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕಾರ್ಯಕ್ರಮದ ವೇದಿಕೆ ಸಿದ್ಧತೆ ಕಾರ್ಯ ಪರಿಶೀಲಿಸಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕರ ಕಚೇರಿ ಮುಂದೆ ವೇದಿಕೆ ಸಿದ್ಧತೆ ಮಾಡಲಾಗಿದೆ. ಈ ವೇಳೆ ಸಮಾರಂಭದ ಯಶಸ್ಸಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವ ಜನಿಕರ ಕುಂದು ಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮದ ಆವರಣದಲ್ಲಿ ವಿಶೇಷ ಮಳಿಗೆ ಹಾಗೂ ಕೌಂಟರ್ ಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರಿಂದ ನೇರವಾಗಿ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.