Vijayapura (Indi) news: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕಾರ್ಯ: ಆದೇಶಕ್ಕೆ ಖಂಡನೆ
ಬಿ.ಎಲ್. ಓ ಕೆಲಸ ಮಾಡುವುದು ಅಂಗವಾಡಿ ಕಾರ್ಯಕರ್ತರಿಗೆ ಸಾಧ್ಯವಿಲ್ಲ. ಇದರಿಂದ ಮುಕ್ತಿ ನೀಡಬೇಕು ಅಂಗನವಾಡಿ ಕಾರ್ಯಕರ್ತರು ಈಗಾಗಲೇ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಚಿಕ್ಕಮಕ್ಕಳ ಆರೋಗ್ಯದ ಜೊತೆ ಎಲ್ಲಾ ರೀತಿಯಿಂದ ನೋಡಿಕೊಳ್ಳಬೇಕು. ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಅಂಗನವಾಡಿ ಬಾಡಿಗೆ ಕೂಡಾ ನೀಡುತ್ತಿಲ್ಲ ಒಟ್ಟಾರೆ ಅಂಗವಾಡಿ ಕಾರ್ಯಕರ್ತೆಯರಿಗೆ ಬಿ.ಎಲ್ ಓ ಆದೇಶ ರದ್ದುಪಡಿಸಬೇಕು

ಬಿ.ಎಲ್ ಓ ಆದೇಶ ರದ್ದು ಮಾಡುವಂತೆ ಒತ್ತಾಯಿಸಿ ಸಿಯುಐಟಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಹಂದ್ರಾಳ ತಾಲೂಕಾ ಅಧ್ಯಕ್ಷೆ ಭಾರತಿ ವಾಲಿ ತಹಶೀಲ್ದಾರ ಕಡಕಭಾವಿಯವರಿಗೆ ಮನವಿ ಸಲ್ಲಿಸಿದರು.

ಇಂಡಿ: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕಾರ್ಯವಾದ (ಬಿಎಲ್ಓ ) ಬ್ಲಾಕ್ ಲೇವಲ್ ಕೆಲಸ ನಿರ್ವಹಿಸುವಂತೆ ಸರ್ಕಾರ ಆದೇಶ ಮಾಡಿರುವದನ್ನು ಖಂಡಿಸಿ ಇಂದು ಅಂಗನವಾಡಿ ಕಾರ್ಯಕರ್ತೆಯರು ತಹಸೀಲ್ದಾರ ಬಿ.ಎಸ್ ಕಡಕಭಾವಿಯವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: Indi (Vijayapura) News: 19 ಕೆರೆಗಳು ತುಂಬಿರುವುದರಿಂದ ರೈತರ ಮುಖದಲ್ಲಿ ಮಂದಹಾಸ: ಶಾಸಕ ಯಶವಂತರಾಯಗೌಡ ಪಾಟೀಲ
ಬಿ.ಎಲ್. ಓ ಕೆಲಸ ಮಾಡುವುದು ಅಂಗವಾಡಿ ಕಾರ್ಯಕರ್ತರಿಗೆ ಸಾಧ್ಯವಿಲ್ಲ. ಇದರಿಂದ ಮುಕ್ತಿ ನೀಡಬೇಕು ಅಂಗನವಾಡಿ ಕಾರ್ಯಕರ್ತರು ಈಗಾಗಲೇ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಚಿಕ್ಕಮಕ್ಕಳ ಆರೋಗ್ಯದ ಜೊತೆ ಎಲ್ಲಾ ರೀತಿಯಿಂದ ನೋಡಿಕೊಳ್ಳಬೇಕು. ಅಂಗನವಾಡಿ ಕಾರ್ಯ ಕರ್ತೆಯರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಅಂಗನವಾಡಿ ಬಾಡಿಗೆ ಕೂಡಾ ನೀಡುತ್ತಿಲ್ಲ ಒಟ್ಟಾರೆ ಅಂಗವಾಡಿ ಕಾರ್ಯಕರ್ತೆಯರಿಗೆ ಬಿ.ಎಲ್ ಓ ಆದೇಶ ರದ್ದುಪಡಿಸಬೇಕು ಎಂದು ಮನವಿ ಸಲ್ಲಿಸಿದರು.
ಸಿ.ಐ.ಟಿ,ಯು ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ , .ಸಿ.ಯು.ಟಿ ತಾಲೂಕಾ ಅಧ್ಯಕ್ಷೆ ಭಾರತಿ ವಾಲಿ, ಈರಣ್ಣಾ ಬಳ್ಳುಂಡಗಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.