ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Religious conversion: ಕನಸಿನಲ್ಲಿ ಬಂದ ಆಂಜನೇಯ; ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ!

Religious conversion: ಯಾದಗಿರಿಯಲ್ಲಿ ವೆಂಕಟೇಶ್‌ ಎಂಬುವವರ ಕುಟುಂಬ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮರಳಿ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದೆ. ಹಿಂದೂ ಧರ್ಮಕ್ಕೆ ಮರಳಿ ಬಂದ ವೆಂಕಟೇಶ್ ಹಾಗೂ ಪತ್ನಿ, ಇಬ್ಬರು ಮಕ್ಕಳನ್ನು ಬಜರಂಗದಳ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಕನಸಿನಲ್ಲಿ ಹನುಮ; ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ

Profile Prabhakara R Jun 20, 2025 10:00 PM

ಯಾದಗಿರಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ವಾಪಸಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ್ ಎಂಬುವರು ಈ ಹಿಂದೆ ಕುಟುಂಬ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದರು. ಇದೀಗ ಮತ್ತೆ ಹಿಂದೂ ಧರ್ಮಕ್ಕೆ ಮರಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆಂಜನೇಯ. ಹೌದು, ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ (Religious conversion) ಬರುವಂತೆ ಹೇಳಿದ್ದು. ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ.

ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ವೆಂಕಟೇಶ್ ಕುಟುಂಬಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳಲು ಆರಂಭಿಸಿತಂತೆ. ಯಾವ ಕೆಲಸಕ್ಕೆ ಕೈ ಹಾಕಿದರೂ ಕೈಹಿಡಿಯುತ್ತಿರಲಿಲ್ಲ. ಇದರ ನಡುವೆ ವೆಂಕಟೇಶ್ ಕನಸಿನಲ್ಲಿ ಆಂಜನೇಯ ಸ್ವಾಮಿ ಬರುತ್ತಿದ್ದನಂತೆ. ಹಿಂದೂ ಧರ್ಮಕ್ಕೆ ಮರಳುವಂತೆ ಆದೇಶ ನೀಡುತ್ತಿದ್ದನಂತೆ. ಇದೇ ಕಾರಣಕ್ಕೆ ಇದೀಗ ವೆಂಕಟೇಶ್ ಕ್ರೈ ಧರ್ಮ ತೊರೆದು, ಮತ್ತೆ ಹಿಂದೂ ಧರ್ಮಕ್ಕೆ ಮರಳಿದ್ದಾಗಿ ಹೇಳಿದ್ದಾರೆ.

ವೆಂಕಟೇಶ್‌ ಕುಟುಂಬ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮರಳಿ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದೆ. ಹಿಂದೂ ಧರ್ಮಕ್ಕೆ ಮರಳಿ ಬಂದ ವೆಂಕಟೇಶ್ ಹಾಗೂ ಪತ್ನಿ, ಇಬ್ಬರು ಮಕ್ಕಳನ್ನು ಬಜರಂಗದಳ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Lokayukta Raid: ತುಮಕೂರಿನಲ್ಲಿ 11 ಉಪ ನೋಂದಣಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ