ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕೊಪ್ಪಳ
BY Vijayendra: ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ: ಬಿ.ವೈ.ವಿಜಯೇಂದ್ರ

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ: ಬಿವೈವಿ

BY Vijayendra: ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹಾಕಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದೆ. ಕೆಲವರನ್ನು ಓಲೈಕೆ ಮಾಡಲು ರಾಜ್ಯ ಸರಕಾರ ಹೀಗೆ ಮಾಡುತ್ತಿದೆ. ತಪ್ಪಿತಸ್ಥರನ್ನು ಬಂಧಿಸಲು ನಮ್ಮ ಅಭ್ಯಂತರ ಇಲ್ಲ. ಆದರೆ, ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Koppal Murder: ಕೊಪ್ಪಳದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೊಪ್ಪಳದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

Koppal Murder: ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಬೇಕರಿಯಲ್ಲಿ ಸಿನಿಮಾ‌ ಸ್ಟೈಲ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್​​ ಆಗಿದೆ. ಪ್ರಕರಣ ಸಂಬಂಧ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Murder case: ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಗೈದು ಪತಿ ಪರಾರಿ

ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಗೈದು ಪತಿ ಪರಾರಿ

Murder case: ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಿವಪ್ಪ ಪತ್ನಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

Pralhad Joshi: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್‌ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka High Court: ವ್ಹೀಲಿಂಗ್‌ ಮಾಡುವವರೇ ಎಚ್ಚರಿಕೆ, ನಿಮಗೆ ಜಾಮೀನು ಕೂಡ ಸಿಗೊಲ್ಲ!

ವ್ಹೀಲಿಂಗ್‌ ಮಾಡುವವರೇ ಎಚ್ಚರಿಕೆ, ನಿಮಗೆ ಜಾಮೀನು ಕೂಡ ಸಿಗೊಲ್ಲ!

ಮೊದಲಿಗೆ ವ್ಹೀಲಿಂಗ್‌ ಬೃಹತ್‌ ನಗರ ಪ್ರದೇಶಗಳ ಹೆದ್ದಾರಿಗಳಿಗೆ ಸೀಮಿತವಾಗಿತ್ತು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆಯಾಗುತ್ತಿದೆ. ವ್ಹೀಲಿಂಗ್‌ ಚಾಲಕ, ಹಿಂಬದಿ ಸವಾರ ಮಾತ್ರವಲ್ಲದೇ ಸಾಮಾನ್ಯ ಜನರಿಗೂ ಗಂಭೀರ ಬೆದರಿಕೆ. ಕೆಲವು ಯುವಕರು ನಿಸ್ಸಂಶಯವಾಗಿ ಸಮಾಜದ ಸ್ವಾಸ್ಥ್ಯ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದಾರೆ," ಎಂದು ನ್ಯಾಯಾಲಯ ಹೇಳಿದೆ.

Koppal News: ಸಾಲ ಕಟ್ಟಲಾಗದೆ ಜೈಲು ಸೇರಿದ್ದ ವ್ಯಕ್ತಿ ಸಾವು; ಲಾಕಪ್‌ ಡೆತ್‌ ಆರೋಪ

ಸಾಲ ಕಟ್ಟಲಾಗದೆ ಜೈಲು ಸೇರಿದ್ದ ವ್ಯಕ್ತಿ ಸಾವು; ಲಾಕಪ್‌ ಡೆತ್‌ ಆರೋಪ

Crime News: ಖಾಸಗಿ ಫೈನಾನ್ಸ್ ಕಂಪನಿಯ ಸಾಲ ತೀರಿಸಲು ಸಾಧ್ಯವಾಗದೇ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಏಕಾಏಕಿ ಮೃತಪಟ್ಟಿದ್ದು ಅನುಮಾನ ಮೂಡಿದೆ. ಗಂಗಾವತಿ ನಗರದ ಶರಣಬಸವೇಶ್ವರ ನಗರದ ನಿವಾಸಿ ರಾಮರೆಡ್ಡಿ (35) ಮೃತ ವ್ಯಕ್ತಿ. ಇವರ ಸಾವಿನ ಬಗ್ಗೆ ಮೃತನ ಕುಟುಂಬ ಅನುಮಾನ ವ್ಯಕ್ತಪಡಿಸಿದೆ.

Assault Case: ಕನ್ನಡ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕನ ಮೇಲೆ ರೈಲ್ವೆ ಟಿಕೆಟ್ ಕಲೆಕ್ಟರ್ ಹಲ್ಲೆ

ಕನ್ನಡ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ

Assault Case: ಮೈಸೂರು-ಕೊಪ್ಪಳ ಮಾರ್ಗದ ರೈಲಿನಲ್ಲಿ ಘಟನೆ ನಡೆದಿದೆ. ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಕೊಪ್ಪ ಮೂಲದ ಪ್ರಯಾಣಿಕನ ಮೇಲೆ ಟಿಕೆಟ್ ಕಲೆಕ್ಟರ್‌ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿವೆ.

Pahalgam Terror Attack: ಕೊಪ್ಪಳದ 19 ಮಂದಿ ಶ್ರೀನಗರದಲ್ಲಿ ಸೇಫ್; ಕೂದಲೆಳೆ ಅಂತರದಲ್ಲಿ ಪಾರಾದ ಯಾದಗಿರಿ ಕುಟುಂಬ!

ಕೊಪ್ಪಳದ 19 ಮಂದಿ ಶ್ರೀನಗರದಲ್ಲಿ ಸೇಫ್!

Pahalgam Terror Attack: ಕರ್ನಾಟಕ ರಾಜ್ಯದಿಂದ ಕೂಡ ಹಲವು ಪ್ರವಾಸಿಗರು ಕಾಶ್ಮೀರಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದಾರೆ. ಇದೀಗ ಕೊಪ್ಪಳದ 4 ಕುಟುಂಬಗಳ 19 ಸದಸ್ಯರು ಹಾಗೂ ಯಾದಗಿರಿಯ ಕುಟುಂಬ ಸುರಕ್ಷಿತವಾಗಿದೆ ಎಂದು ತಿಳಿದುಬಂದಿದೆ.

Physical abuse: ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿದ್ದ ತಂದೆಗೆ ಜೀವಾವಧಿ ಶಿಕ್ಷೆ

ಮಗಳನ್ನೇ ಗರ್ಭಿಣಿ ಮಾಡಿದ್ದ ತಂದೆಗೆ ಜೀವಾವಧಿ ಶಿಕ್ಷೆ

Physical abuse: ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿದೆ.

Self Harming: ಪತಿ ಕಿರುಕುಳ; ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಪತ್ನಿ ಆತ್ಮಹತ್ಯೆ!

ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

Self Harming: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ಘಟನೆ ನಡೆದಿದೆ. ಪತಿ ನಿತ್ಯ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆತನ ಹಿಂಸೆಗೆ ಮನನೊಂದು ಪತ್ನಿ, ಪುಟ್ಟ ಮಗಳೊಂದಿಗೆ ಸೇರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Vastu Tips: ವಾಸ್ತು ಪ್ರಕಾರ ಮನೆ ಮುಂದೆ ಗುಲಾಬಿ ಗಿಡಗಳನ್ನು ನೆಡಬಹುದಾ...?

ಮನೆಯ ಈ ದಿಕ್ಕಿಗೆ ಗುಲಾಬಿ ಗಿಡ ನೆಡಿ

Vastu Tips: ಮನೆಯಲ್ಲಿ ಗುಲಾಬಿ ಹೂವಿನ ಗಿಡ ನೆಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಗುಲಾಬಿ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಟ್ಟರೆ ಮತ್ತು ಪೂಜಿಸಿದರೆ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ಸಾಲ ತೀರಿಸಲು ಸಹ ಇದು ಸಹಾಯಕವಾಗುತ್ತದೆ

DK Shivakumar: ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

DK Shivakumar: ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ, ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ ಬೆಳೆಗಳಿಗೆ ನೀರು ಹರಿಸಬೇಕು ಎಂದು ಮನವಿ ಸಲ್ಲಿಸಿದರು.

Basanagouda Patil Yatnal: ವಿಜಯೇಂದ್ರನ ಚಮಚಾಗಳಿದ್ರೆ ಗೆಟ್ ಔಟ್; ಮಾಧ್ಯಮಗಳ ಬಗ್ಗೆ ಯತ್ನಾಳ್‌ ಸಿಡಿಮಿಡಿ

ವಿಜಯೇಂದ್ರನ ಚಮಚಾಗಳಿದ್ರೆ ಗೆಟ್ ಔಟ್; ಮಾಧ್ಯಮಗಳ ಬಗ್ಗೆ ಯತ್ನಾಳ್‌ ಸಿಡಿಮಿಡಿ

Basanagouda Patil Yatnal: ಯತ್ನಾಳ್‌ ಕಾಂಗ್ರೆಸ್‌ ಸೇರ್ತಾರಾ ಅಥವಾ ಹೊಸ ಪಕ್ಷ ಕಟ್ಟುತ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಕಾಂಗ್ರೆಸ್ ಪಕ್ಷಕ್ಕೆ ಈ ಜನ್ಮದಲ್ಲೂ ಹೋಗಲ್ಲ, ಮುಂದಿನ ಜನ್ಮದಲ್ಲೂ ಹೋಗಲ್ಲ. ಅದು ಮುಸ್ಲಿಮರ ಪಕ್ಷ. ವಿಜಯೇಂದ್ರನ ಟೀಂ ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಪ್ರಶ್ನೆಗಳನ್ನು ಕೇಳುವ ವಿಜಯೇಂದ್ರನ ಚಮಚಾಗಳಿದ್ದರೆ ಗೆಟ್ ಔಟ್ ಎಂದು ಪತ್ರಕರ್ತರ ವಿರುದ್ಧ ಯತ್ನಾಳ್‌ ಕಿಡಿಕಾರಿದ್ದಾರೆ.

SSLC exam: ತಾಯಿ ಅಗಲಿಕೆಯ ನೋವಿನ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

ತಾಯಿ ಅಗಲಿಕೆಯ ನೋವಿನ ನಡುವೆ ಪರೀಕ್ಷೆ ಬರೆದ ವಿದ್ಯಾರ್ಥಿ

SSLC exam: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕೇಸರಹಟ್ಟಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ನೋವಿನ ಮಧ್ಯೆ ವಿದ್ಯಾರ್ಥಿ, 10ನೇ ತರಗತಿ ಪರೀಕ್ಷೆ ಬರೆದು, ನಂತರ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದಾನೆ.

Road Accident: ಅಕ್ರಮ ಮರಳು ಲಾರಿಯಡಿಗೆ ಸಿಲುಕಿ ಇಬ್ಬರು ಯುವಕರ ಸಾವು

ಅಕ್ರಮ ಮರಳು ಲಾರಿಯಡಿಗೆ ಸಿಲುಕಿ ಇಬ್ಬರು ಯುವಕರ ಸಾವು

ಸಾವನ್ನಪ್ಪಿರುವ ಇಬ್ಬರು ಯುವಕರು ಕೊಪ್ಪಳ ಜಿಲ್ಲೆಯ ಕನಕಗಿರಿ‌ ತಾಲೂಕಿನ ಗುಡೂರಿನ ನಿವಾಸಿಗಳಾಗಿದ್ದು, ಬೈಕ್ ಮೇಲೆ ಹೋಗುತ್ತಿದ್ದ ವೇಳೆ ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಹರಿದಿದೆ. ಪರಿಣಾಮ ಟಿಪ್ಪರ್ ಕೆಳಗೆ ಸಿಲುಕಿ ಯುವಕರ ದೇಹ ಛಿದ್ರವಾಗಿದೆ.

Hampi Horror: ಹಂಪಿ ಗ್ಯಾಂಗ್‌ರೇಪ್ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಹಂಪಿ ಪಾತಕಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿಯ ಮೇಲೆ ಮೂವರನ್ನೂ ಬಂಧಿಸಿದ್ದರು. ಇವರಲ್ಲಿ ಒಬ್ಬಾತ ತಮಿಳುನಾಡಿಗೆ ಪರಾರಿಯಾಗಿದ್ದ. ಆತನನ್ನು ಹಿಡಿತರಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Hampi Horror: ಹಂಪಿ ಅತ್ಯಾಚಾರ ಕೇಸ್‌​: ಹೋಮ್ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸ್‌ ದಾಳಿ

ಹಂಪಿ ಅತ್ಯಾಚಾರ ಕೇಸ್‌​: ಹೋಮ್ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸ್‌ ದಾಳಿ

ಹೋಮ್‌ ಸ್ಟೇ, ರೆಸಾರ್ಟ್​ಗಳು ಇಲ್ಲಿ ಬಂದು ಉಳಿಯುತ್ತಿರುವ ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಮತ್ತು ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ರಾಮ್​ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

Hampi Horror: ಹಂಪಿ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಹಂಪಿ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯೂ ಬಂಧನ

ಹಲ್ಲೆ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಗಂಗಾವತಿ ನಿವಾಸಿ ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಇವರನ್ನು ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22), ಚೇತನ್ ಸಾಯಿ (21) ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಯ ಗುರುತು ಗೊತ್ತಾಗಬೇಕಿದೆ.

Shocking News: ಅಸೌಖ್ಯ ಗುಣಪಡಿಸಲು ಅಗರಬತ್ತಿಯಿಂದ ಸುಟ್ಟ ತಾಯಿ, ಮಗು ಸಾವು

ಅಸೌಖ್ಯ ಗುಣಪಡಿಸಲು ಅಗರಬತ್ತಿಯಿಂದ ಸುಟ್ಟ ತಾಯಿ, ಮಗು ಸಾವು

ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಸುಟ್ಟರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ನಂಬಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ.

Journalism Awards: ಪತ್ರಿಕೋದ್ಯಮ ದೊಡ್ಡ ಪ್ರಮಾಣದಲ್ಲಿದ್ದರೂ ಸಣ್ಣ ಬದಲಾವಣೆಯೂ ಆಗುತ್ತಿಲ್ಲ: ಕೆ.ವಿ.ಪ್ರಭಾಕರ್

ಇಂದಿನ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆಯೂ ಆಗುತ್ತಿಲ್ಲ: ಕೆ.ವಿ.ಪ್ರಭಾಕರ್

Journalism Awards: ಕೊಪ್ಪಳದಿಂದ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಮಾತನಾಡಿದ್ದಾರೆ. ಮಹನೀಯರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿರುವ ಈ ಹೊತ್ತಿನಲ್ಲಿ ಪತ್ರಿಕೋದ್ಯಮ ವಿಪರೀತ ದೊಡ್ಡದಾಗಿ ಬೆಳೆದಿದೆ. ಆದರೆ ಸಣ್ಣ ಪ್ರಮಾಣದ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

Koppala News: ರಾಜ್ಯವೇ ತಲೆತಗ್ಗಿಸುವ ಘಟನೆ; ಗಂಗಾವತಿಯಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ

ಗಂಗಾವತಿಯಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ

ಗಂಗಾವತಿಯಲ್ಲಿ ಇಡೀ ರಾಜ್ಯವೇ ನಾಚಿಕೆಯಿಂದ ತಲೆತಗ್ಗಿಸುವಂತ ಘಟನೆಯೊಂದು ಮಾ. 6ರ ರಾತ್ರಿ ನಡೆದಿದೆ. ಪ್ರವಾಸ ಬಂದಿದ್ದ ವಿದೇಶಿಗರೂ ಸೇರಿ ಐವರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆಯೂ ಆರೋಪ ಕೇಳಿ ಬಂದಿದೆ. ಸದ್ಯ ತಲೆಮರೆಸಿಕೊಂಡಿರುವ ದುಷ್ಕರ್ಮಿಗಳಿಗಾಗಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Koppal News: ಪಿಡಿಒ ಮೇಲೆ ದರ್ಪ ಮೆರೆದ ಗ್ರಾಪಂ ಸದಸ್ಯೆ; ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ

ಪಿಡಿಒ ಮೇಲೆ ಗ್ರಾಪಂ ಸದಸ್ಯೆಯಿಂದ ಹಲ್ಲೆ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಪಂ ಪಿಡಿಒ ರತ್ನಮ್ಮ ಗುಂಡಣ್ಣವರ್ ಅವರ ಮೇಲೆ ಸದಸ್ಯೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ. ವಿಡಿಯೊ ನೋಡಿದವರು ಗ್ರಾಪಂ ಸದಸ್ಯೆಯ ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Assault Case: ಟಿಕೆಟ್ ಬೆಲೆ ಏರಿಸಿದ್ದಕ್ಕೆ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಕುಡುಕ!

ಟಿಕೆಟ್ ಬೆಲೆ ಏರಿಕೆಗೆ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಕುಡುಕ!

ಬಸ್ ಟಿಕೆಟ್ ದರ ಹೆಚ್ಚಾಗಿದ್ದಕ್ಕೆ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಕಂಡಕ್ಟರ್ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬುವರ ಮೇಲೆ ಹಲ್ಲೆಯಾಗಿದೆ.

Self Harming: ಸಾಲಿಗರ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷ ಸೇವಿಸಿ ಆತ್ಮಹತ್ಯೆ

ಸಾಲಿಗರ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷ ಸೇವಿಸಿ ಆತ್ಮಹತ್ಯೆ

ನಿನ್ನೆ ರಾತ್ರಿ ಯಂಕಪ್ಪ ಬಂಗಿ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಯಂಕಪ್ಪ ವಿವಿಧೆಡೆ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.